ಹಾಸನ ಟಿಕೆಟ್‌ ಫೈಟ್‌ಗೆ ತೆರೆ: ಪತ್ನಿ, ಮಕ್ಕಳಿಗೆ ನಿರಾಶೆ ಮಾಡಿದ ಎಚ್.ಡಿ. ರೇವಣ್ಣ

Published : Jan 29, 2023, 01:49 PM IST
ಹಾಸನ ಟಿಕೆಟ್‌ ಫೈಟ್‌ಗೆ ತೆರೆ: ಪತ್ನಿ, ಮಕ್ಕಳಿಗೆ ನಿರಾಶೆ ಮಾಡಿದ ಎಚ್.ಡಿ. ರೇವಣ್ಣ

ಸಾರಾಂಶ

ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ಹಂಚಿಕೆ ಕುರಿತು ದೇವೇಗೌಡರು, ಕುಮಾರಸ್ವಾಮಿ ಹಾಗೂ ರಾಜ್ಯದ ಅಧ್ಯಕ್ಷ ರಾದ ಇಬ್ರಾಹಿಂ ತೀರ್ಮಾನ ಮಾಡುತ್ತಾರೆ. ಎಲ್ಲರ ಅಭಿಪ್ರಾಯ ಪಡೆದುಕೊಂಡ ನಂತರವೇ ಟಿಕೆಟ್‌ ನೀಡಲಾಗುತ್ತದೆ.

ಹಾಸನ (ಜ.29):  ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ಹಂಚಿಕೆ ಕುರಿತು ದೇವೇಗೌಡರು, ಕುಮಾರಸ್ವಾಮಿ ಹಾಗೂ ರಾಜ್ಯದ ಅಧ್ಯಕ್ಷ ರಾದ ಇಬ್ರಾಹಿಂ ತೀರ್ಮಾನ ಮಾಡುತ್ತಾರೆ. ಎಲ್ಲರೂ ಕೂತು ಚರ್ಚೆಮಾಡಿ ಜನರ ವಿಶ್ವಾಸ, ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದುಕೊಂಡ ನಂತರವೇ ಟಿಕೆಟ್‌ ನೀಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣ ನಡುವಿನ ಗೊಂದಲಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ತೆರೆ ಎಳೆದಿದ್ದಾರೆ. 

ಹೊಳೆನರಸೀಪುರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು, ಟಿಕೆಟ್ ಹಂಚಿಕೆ ಬಗ್ಗೆ ನಾನೊಬ್ಬನೇ ತೀರ್ಮಾನ ಮಾಡೋ ಪ್ರಶ್ನೆಯೇ ಇಲ್ಲಾ. ಕುಮಾರಸ್ವಾಮಿ ರೇವಣ್ಣ ನನ್ನ ಯಾವುದೇ ಕಾರಣದಿಂದ ಬೇರ್ಪಡಿಸಲು ಆಗಲ್ಲ. ಯಾರಾದರೂ ಬೇರ್ಪಡಿಸುತ್ತೇನೆ ಎಂದುಕೊಂಡಿದ್ದರೆ ಭ್ರಮನಿರಸನ ಆಗ್ತಾರೆ. ನಮ್ಮ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಟಿಕೇಟ್ ವಿಚಾರವನ್ನು ದೇವೇಗೌಡರು, ಕುಮಾರಸ್ವಾಮಿ ಹಾಗೂ ರಾಜ್ಯದ ಅಧ್ಯಕ್ಷ ರಾದ ಇಬ್ರಾಹಿಂ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: Hassan JDS Ticket Fight: ಸಾಮಾಜಿಕ ಜಾಲತಾಣದಲ್ಲಿ ಭವಾನಿ ರೇವಣ್ಣ, ಕುಮಾರಸ್ವಾಮಿ ಪರ ಪೋಸ್ಟರ್‌ ವಾರ್

10 ವರ್ಷದಿಂದ ಹಾಸನ ಜಿಲ್ಲೆ ಅಭಿವೃದ್ಧಿ ಆಗಿಲ್ಲ: ಕಳೆದ ಹತ್ತು ವರ್ಷದಿಂದ ಹಾಸನ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಏರ್ ಪೋರ್ಟ್ ನಿರ್ಮಾಣ ಕಾರ್ಯವನ್ನು ನಿಲ್ಲಿಸಿದಾರೆ. ಐಐಟಿ ಜಾಗ ಬೇರೆಯದಕ್ಕೆ ಬಳಸಿದ್ದಾರೆ. ಹಾಸನದ ಅಸ್ಪತ್ರೆ ಕುಮಾರಣ್ಣ ಬರದಿದ್ದರೆ ಆಗುವುದಿಲ್ಲ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೇಟ್ ಕುಮಾರಸ್ವಾಮಿ ದೇವೇಗೌಡರು ರಾಜ್ಯದ ಅಧ್ಯಕ್ಷ ರು ಜಿಲ್ಲಾ ಮುಖಂಡರು ಏನು ತೀರ್ಮಾನ ಮಾಡ್ತಾರೆ ಅದೇ ಅಂತಿಮ. ನಾನು ಕುಮಾರಸ್ವಾಮಿ ಬಿಟ್ಟು ತೀರ್ಮಾನ ಮಾಡೋ ಪ್ರಶ್ನೆಯೇ ಇಲ್ಲ. ಕೆಲವರು ಭವಾನಿ ಅವರಿಗೆ ಕೊಡಿ ಅಂತಾರೆ. ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಪಕ್ಷದಲ್ಲಿ ಕೂತು ತೀರ್ಮಾನ ಮಾಡಲಾಗುತ್ತದೆ. ‌ನಾನಾಗಲಿ, ಸೂರಜ್ ಆಗಲಿ. ಪ್ರಜ್ವಲ್ ಆಗಲಿ ಯಾರೂ ತೀರ್ಮಾನ ಮಾಡೋ ಪ್ರಶ್ನೆ ಇಲ್ಲ ಎಂದರು.

ಹೈಕಮಾಂಡ್‌ ಮಾತು ಕೇಳುತ್ತೇವೆ: ಇನ್ನು ನಮ್ಮ ಪಕ್ಷದ ಹೈ ಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ನಾವೆಲ್ಲರೂ ಬದ್ದರಾಗಿ ಇರಬೇಕಾಗುತ್ತದೆ. ಕುಮಾರಸ್ವಾಮಿ, ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಾಹೇಬ್ರು ಹಾಗೂ  ಜಿಲ್ಲೆಯ ಶಾಸಕರು ನಮ್ಮ ಏಳು ಸೀಟ್ ತೀರ್ಮಾನ ಮಾಡ್ತಾರೆ. ನಮ್ಮದು ಜಿಲ್ಲೆಯ ಅಭಿವೃದ್ಧಿ ಮುಖ್ಯವಾಗಿದೆ ಎಂದು ಹೇಳುವ ಮೂಲಕ ಹಾಸನದ ಟಿಕೇಟ್ ಗೊಂದಲದ ಚರ್ಚೆಗೆ ಎಚ್.ಡಿ. ರೇವಣ್ಣ ಅವರು ತೆರೆ ಎಳೆದಿದ್ದಾರೆ. 

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರೇವಣ್ಣ ಪಟ್ಟು, ಹೆಚ್.ಡಿ.ಕೆಗೆ ಇಕ್ಕಟ್ಟು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌