ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವವೇ ಇಲ್ಲ: ಬಸವರಾಜ ಬೊಮ್ಮಾಯಿ

Published : Oct 30, 2024, 05:35 PM IST
ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವವೇ ಇಲ್ಲ: ಬಸವರಾಜ ಬೊಮ್ಮಾಯಿ

ಸಾರಾಂಶ

ಮಹಾರಾಷ್ಟ್ರ ಎಲೆಕ್ಷನ್ ಗೂ ಇಲ್ಲಿಗೂ ಸಂಬಂಧ ಇಲ್ಲ. ಮಿನಿಸ್ಟರ್ ಆದೇಶದ ಪ್ರಕಾರ ಮಾಡಿರೋದಾಗಿ ಡಿಸಿನೇ‌ ಹೇಳಿದ್ದಾರ. ಇಷ್ಟೊಂದು ಸಚಿವರು ಶಾಸಕರನ್ನು ಹಾಕಿ ಶಿಗ್ಗಾವಿಯಲ್ಲಿ ಎಲೆಕ್ಷನ್ ಮಾಡ್ತಿದ್ದಾರೆಂದರೆ ಕಾಂಗ್ರೆಸ್ ಅಸ್ತಿತ್ವ ಇಲ್ಲ ಅಂತ ಅರ್ಥ. ಕಾಂಗ್ರೆಸ್ ಈಸ್ ವೆರಿ ವೀಕ್ ಎಂದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ(ಅ.30):  ಖಾದ್ರಿ ನಾಮಪತ್ರ ವಾಪಾಸ್ ಅವರ ಪಕ್ಷದ ಆಂತರಿಕವಾದ ನಿರ್ಣಯವಾಗಿದೆ. ಅದು ಅವರ ಓಟ್ ಬ್ಯಾಂಕ್‌ಗಾಗಿ ತೆಗೆದುಕೊಂಡ ನಿರ್ಣಯವಾಗಿದೆ. ಇದು ನಮಗೆ ಪ್ಲಸ್ ಇಲ್ಲ, ಮೈನಸ್ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಯಾಸೀರ್ ಖಾನ್ ಪಠಾಣ್ ರೌಡಿ ಶೀಟರ್ ಅಂತ ಹೇಳಿದ್ದು ನನಗೇ ಟಿಕೆಟ್ ಸಿಗಬೇಕು ಎಂಬ ಉದ್ದೇಶದಿಂದ ಎಂಬ ಖಾದ್ರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಬುಧವಾರ) ಜಿಲ್ಲೆಯ ಶಿಗ್ಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಮ ಅವರು, ಅದಕ್ಕೆ ‌ಉತ್ತರ ಖಾದ್ರಿ ಕೊಡಬೇಕು. ಈಗ ಅವರ ಜೊತೆನೇ ಸೇರಿದಾರೆ. ಯಾವ ಮಾತು ಎಷ್ಟರ ಮಟ್ಟಿಗೆ ಗಂಭೀರವಾಗಿ ತಗೊಬೇಕು‌ ಅಂತ ನಿಮಗೆ ಗೊತ್ತಾಗಿದೆ. ಜಮೀರ್ ಕಳೆದ ಚುನಾವಣೆಗಳಲ್ಲಿ ಏನೇನು ಮಾಡಿದಾರೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಅವರ ಗುರಿ ನನ್ನ ಮಗನನ್ನ ಸೋಲಿಸೋದು. ಆದರೆ ಜನತೆ ಗುರಿ ನನ್ನ ಮಗನನ್ನು ಗೆಲ್ಲಿಸೋದು. ದಯವಿಟ್ಟು ಒಂದ್ ಸಲ ಕ್ಷೇತ್ರದಲ್ಲಿ ‌ಓಡಾಡೋಕೆ ಹೇಳಿ. ಅವರು ಓಡಾಡೋ ರಸ್ತೆ, ನೀರು ಲೈಟು ಯಾರ ಕಾಲದಲ್ಲಿ‌ ಆಗಿದೆ?. ಸುಮ್ಮನೇ ಬೀದಿಲಿ‌ ನಿಂತು‌ ಎಲೆಕ್ಷನ್ ಗೋಸ್ಕರ ಹೇಳಿದರೆ ಪ್ರಯೋಜನ ಇಲ್ಲ ಎಂದು ತಿಳಿಸಿದ್ದಾರೆ. 

ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣ ಪರಿಚಯಿಸಿದ್ದೇ ಕಾಂಗ್ರೆಸ್: ಸಂಸದ ಬೊಮ್ಮಾಯಿ

ಮಹಾರಾಷ್ಟ್ರ ಎಲೆಕ್ಷನ್ ಇರೋ ಹಿನ್ನಲೆಯಲ್ಲಿ ವಕ್ಫ್‌ ಆಸ್ತಿ ವಿಚಾರದಲ್ಲಿ ರಾಜಕಾರಣ ಮಾಡ್ತಿದ್ದಾರೆ ಎಂಬ ಜಮೀರ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಮಹಾರಾಷ್ಟ್ರ ಎಲೆಕ್ಷನ್ ಗೂ ಇಲ್ಲಿಗೂ ಸಂಬಂಧ ಇಲ್ಲ. ಮಿನಿಸ್ಟರ್ ಆದೇಶದ ಪ್ರಕಾರ ಮಾಡಿರೋದಾಗಿ ಡಿಸಿನೇ‌ ಹೇಳಿದ್ದಾರ. ಇಷ್ಟೊಂದು ಸಚಿವರು ಶಾಸಕರನ್ನು ಹಾಕಿ ಶಿಗ್ಗಾವಿಯಲ್ಲಿ ಎಲೆಕ್ಷನ್ ಮಾಡ್ತಿದ್ದಾರೆಂದರೆ ಕಾಂಗ್ರೆಸ್ ಅಸ್ತಿತ್ವ ಇಲ್ಲ ಅಂತ ಅರ್ಥ. ಕಾಂಗ್ರೆಸ್ ಈಸ್ ವೆರಿ ವೀಕ್ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ