
ಬೆಂಗಳೂರು, (ಅ.06): ತುಮಕೂರು ಜಿಲ್ಲಾ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.
ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮರನ್ನ ಜೆಡಿಎಸ್ ಅಭ್ಯರ್ಥಿಯನ್ನಾಗಿ ಇಂದು (ಮಂಗಳವಾರ) ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಬೆಂಗಳೂರಿನಲ್ಲಿ ತಮ್ಮ ಅಭ್ಯರ್ಥಿಯನ್ನ ಪ್ರಕಟ ಮಾಡಿದರು. ಇನ್ನು ಸತ್ಯನಾರಾಯಣ್ ನಿಧನ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಸ್ಥಾನವನ್ನು ಮತ್ತೆ ಜೆಡಿಎಸ್ಗೆ ತೆಕ್ಕೆಗೆ ತೆಗೆದುಕೊಳ್ಳಲು ದಳಪತಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಖ್ಯಾತ ವೈದ್ಯ ಬಿಜೆಪಿ ಸೇರ್ಪಡೆ: ಇವರೇ ಶಿರಾ ಬೈ ಎಲೆಕ್ಷನ್ ಅಭ್ಯರ್ಥಿ..!
ಸತ್ಯನಾರಾಯಣ್ ಅವರ ಪತ್ನಿಯನ್ನು ಕಣಕ್ಕಿಳಿಸಿದ್ರೆ, ಅನುಕಂಪದ ಆಧಾರದ ಮೇಲೆ ಗೆಲ್ಲಬಹುದು ಎನ್ನುವುದು ಜೆಡಿಎಸ್ನ ಲೆಕ್ಕಾಚಾರವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣದಲ್ಲಿದ್ದಾರೆ. ಇನ್ನು ಬಿಜೆಪಿಯಿಂದ ರಾಜೇಶ್ ಗೌಡ ಅವರು ಅಖಾಡಳಿಯುವುದು ಬಹುತೇಕ ಖಚಿತವಾಗಿದ್ದು, ಇನ್ನೇನು ಅಧಿಕೃತ ಘೋಷಣೆಯಾಗಬೇಕಿದೆ.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.