ಎಚ್‌ಡಿಕೆಯವರನ್ನು ಮುಖ್ಯಮಂತ್ರಿ ಮಾಡುವುದೇ ದೇವೇಗೌಡರ ಕೊನೆಯ ಆಸೆ: ಶಾಸಕ ಜಿ.ಟಿ.ದೇವೇಗೌಡ

Published : Mar 02, 2023, 09:01 PM IST
ಎಚ್‌ಡಿಕೆಯವರನ್ನು ಮುಖ್ಯಮಂತ್ರಿ ಮಾಡುವುದೇ ದೇವೇಗೌಡರ ಕೊನೆಯ ಆಸೆ: ಶಾಸಕ ಜಿ.ಟಿ.ದೇವೇಗೌಡ

ಸಾರಾಂಶ

ಚಿಕ್ಕಣ್ಣನವರ ಕೊನೆಯ ಆಸೆ ತಮ್ಮ ಮಗ ಜಯಪ್ರಕಾಶ್‌ರನ್ನು ಶಾಸಕರನ್ನಾಗಿ ಮಾಡುವುದು ಮತ್ತು ಎಚ್‌.ಡಿ.ದೇವೇಗೌಡ ಅವರ ಕೊನೆ ಆಸೆ ಅವರ ಮಗನಾದ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ಆಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಎಂದರು. 

ಎಚ್‌.ಡಿ.ಕೋಟೆ (ಮಾ.02): ಚಿಕ್ಕಣ್ಣನವರ ಕೊನೆಯ ಆಸೆ ತಮ್ಮ ಮಗ ಜಯಪ್ರಕಾಶ್‌ರನ್ನು ಶಾಸಕರನ್ನಾಗಿ ಮಾಡುವುದು ಮತ್ತು ಎಚ್‌.ಡಿ.ದೇವೇಗೌಡ ಅವರ ಕೊನೆ ಆಸೆ ಅವರ ಮಗನಾದ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ಆಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಎಂದರು. ಪಟ್ಟಣದಲ್ಲಿ ಗುರುವಾರ ನಡೆದ ಮಾಜಿ ಶಾಸಕ ಚಿಕ್ಕಣ್ಣನವರ ಹುಟ್ಟುಹಬ್ಬ ಆಚರಣೆಯಲ್ಲಿ ಅವರು ಮಾತನಾಡಿದರು. ಪಂಚರತ್ನ ಕಾರ್ಯಕ್ರಮವನ್ನು ಎಚ್‌.ಡಿ. ಕುಮಾರಸ್ವಾಮಿ ಅವರು ರೂಪಿಸಿದ್ದು, ತಾಲೂಕಿಗೂ ಆಗಮಿಸಲಿದ್ದು, ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಬೇಕು ಎಂದು ತಿಳಿಸಿದರು.

ದೇವೇಗೌಡರ ಪ್ರಾದೇಶಿಕ ಪಕ್ಷವನ್ನು ಉಳಿಸುವ ಕೆಲಸ ನಿಮ್ಮ ಮೇಲಿದೆ, ಜೆಡಿಎಸ್‌ ಅಸ್ತಿತ್ವವೇ ಇಲ್ಲದ ವೇಳೆಯಲ್ಲಿ ತಾಲೂಕಿನಲ್ಲಿ ಪಕ್ಷದ ಎಂ.ಪಿ. ವೆಂಕಟೇಶ್‌ ಅವರನ್ನು ಗೆಲ್ಲಿಸಿ ಪಕ್ಷಕ್ಕೆ ಅಸ್ತಿತ್ವ ನೀಡಿದ್ದನ್ನು ನಾವು ಮರೆಯುವುದಿಲ್ಲ. ಮೈಸೂರು ಭಾಗದ ಎಲ್ಲ ಜೆಡಿಎಸ್‌ ಶಾಸಕರು ಎಚ್‌.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಚಿಕ್ಕಣ್ಣನವರ ಮಗನನ್ನೇ ಸೂಚಿಸಿದ್ದು, ಇನ್ನು ಹದಿನೈದು ದಿನದಲ್ಲಿ ಅವರ ಹೆಸರನ್ನು ಘೋಷಿಸಲಾಗುವುದು ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದರು.

ನಿಮ್ಮ ಕಾರ್ಯಕ್ರಮ ಹೇಳಿ, ನಮ್ಮನ್ನು ಟೀಕಿಸುವುದು ಬೇಡ: ಎಚ್‌.ಡಿ.ಕುಮಾರಸ್ವಾಮಿ

ಮಾಜಿ ಶಾಸಕ ಚಿಕ್ಕಣ್ಣ ಮಾತನಾಡಿ, ನಾನು ಅಂದಿನ ಜಟಾಯು ಜಿ.ಟಿ. ದೇವೆಗೌಡರ ಆಶೀರ್ವಾದದಿಂದ 1987ರಲ್ಲಿ ಜಿಪಂ ಸದಸ್ಯನಾಗದಿದ್ದರೆ ನಾನು ಈ ಸ್ಥಾನದಲ್ಲಿ ಇರುತ್ತಿರಲಿಲ್ಲ ಎಂದರು. ಜಿ.ಟಿ. ದೇವೇಗೌಡರು ಬಿಜೆಪಿಗೆ ಹೋದಾಗ ನಮಗೆ ಜಿಲ್ಲೆಯಲ್ಲೆ ಅಸ್ತಿತ್ವವೇ ಇಲ್ಲವಾಗಿತ್ತು. ಅವರು ಮರಳಿ ನಮ್ಮ ಪಕ್ಷಕ್ಕೆ ಬಂದಾಗ ನಮಗೆ ಭೀಮ ಬಲ ಸಿಕ್ಕಂತಾಗಿದೆ ಎಂದು ತಿಳಿಸಿದರು. ನನ್ನ ಮೇಲೆ ಇಟ್ಟಿರುವ ಅಭಿಮಾನ ಮತ್ತು ಪ್ರೀತಿಯನ್ನು ನನ್ನ ಮಗ ಜಯಪ್ರಕಾಶ್‌ ಮೇಲೆಯೂ ಇಡಬೇಕು ಎಂದು ಕಾರ್ಯಕರ್ತರಲ್ಲಿ ಅವರು ಮನವಿ ಮಾಡಿದರು. ನಾನು ನನ್ನ ಮಗನನ್ನು ಜಿಲ್ಲೆಯ ನಾಯಕರಿಗೆ ಹಾಗೂ ಮತ ನೀಡುವ ಜನರ ಮಡಿಲಿಗೆ ಹಾಕಿದ್ದೇನೆ, ಅವರನ್ನು ಬೆಳೆಸುವ ಭಾರ ಇವರ ಮೇಲಿದೆ ಎಂದರು.

2028ರ ವೇಳೆಗೆ ಜೆಡಿ​ಎಸ್‌ ಯುವ ನಾಯ​ಕ​ತ್ವದ ತಂಡ ರಚ​ನೆ: ಎಚ್‌.ಡಿ.ಕುಮಾರಸ್ವಾಮಿ

ಎಚ್‌.ಡಿ. ಕೋಟೆ, ಸರಗೂರು ಅಧ್ಯಕ್ಷರಾದ ಗೋಪಾಲಸ್ವಾಮಿ, ರಾಜೇಂದ್ರ, ಶಾಸಕ ಕೆ. ಮಹದೇವ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಮುಖಂಡ ಗಂಗಾಧರ್‌ಗೌಡ, ಜಯಪ್ರಕಾಶ್‌ ಚಿಕ್ಕಣ್ಣ, ಅನಿತಾ ನಿಂಗನಾಯಕ, ನಹಿಮ ಸುಲ್ತಾನ್‌, ಶಾಮ ಸುಂದರ್‌, ಲಿಂಗಯ್ಯ, ಎಂ.ಸಿ. ದೊಡ್ಡನಾಯಕ, ಎಚ್‌.ಸಿ. ಶಿವಣ್ಣ, ಎಂ.ಟಿ. ಕುಮಾರ್‌, ಪ್ರಕಾಶ್‌, ನಾಗರಾಜ್‌ ಮಲಾಡಿ, ಸುನಿಲ್‌, ರಾಜು, ಓಕೆ ಮಹೇಂದ್ರ, ಮಟಕೆರೆ ರಾಜೇಶ್‌, ಶಿವರಾಜ, ವೇಣುಗೋಪಾಲ್‌, ಚಂದನ್‌ಗೌಡ, ಶಫಿ, ರಂಗಪ್ಪ, ನಾಗರಾಜಪ್ಪ, ಕರಿಗೌಡ, ವಕೀಲ ನಾರಾಯಣಗೌಡ, ಕರಿಗೌಡ, ಚಾ. ನಂಜುಂಡಮೂರ್ತಿ, ಬಸವರಾಜು, ಕುಮಾರಿ, ಸವಿತಾ, ಶಿವಮ್ಮ, ಚಾಕಳ್ಳಿ ಕೃಷ್ಣ, ಸಣ್ಣತಾಯಮ್ಮ, ಚೈತ್ರ, ಎಸ್‌.ಎಲ್‌. ರಾಜಣ್ಣ, ನಂಜಪ್ಪ, ಮಹೇಶ್‌, ನಾಗಣ್ಣ, ರವಿಕುಮಾರ್‌, ಅಯಾಜ್‌, ಮಾರುತಿ ಗೋಪಾಲ್‌ಸ್ವಾಮಿ, ಯೋಗ ನರಸಿಂಹ, ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ