
ಬೆಂಗಳೂರು (ಡಿ.15): ಗೋ ಹತ್ಯಾ ನಿಷೇಧ ವಿಧೇಯಕ ವನ್ನು ಜೆಡಿಎಸ್ ವಿರೋಧಿಸುತ್ತದೆ. ಎಂದಿಗೂ ಇದಕ್ಕೆ ನಮ್ಮ ಬೆಂಬಲ ಇಲ್ಲ ಎಂದು ಹಿರಿಯ ಮುಖಂಡ ಎಚ್ ಡಿ ದೇವೇಗೌಡ ಹೇಳಿದ್ದಾರೆ.
2010 ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆ ಜಾರಿಗೆ ಮುಂದಾಗಿತ್ತು. ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ತರಲು ಹೊರಟಿದ್ದಕ್ಕೆ ನಾವು ವಿರೋಧ ಮಾಡಿದ್ದೆವು ಎಂದು ದೇವೇಗೌಡ ಹೇಳಿದ್ದಾರೆ.
ಆ ನಾಯಕನನ್ನು ಭೇಟಿ ಮಾಡಿದ ಸಾ.ರಾ.ಮಹೇಶ್ : ಏನಿದು ಕುತೂಹಲದ ರಾಜಕೀಯ..? .
ರಾಜ್ಯಪಾಲರು, ಹಾಗೂ ರಾಷ್ಟ್ರಪತಿ ಗಳಿಗೆ ಪತ್ರ ಬರೆದು ಈ ಮಸೂದೆಗೆ ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದೆವು. ನಂತರ ಸರ್ಕಾರ ಬದಲಾಗಿ ಈ ಮಸೂದೆ ವಾಪಸ್ ಪಡೆಯಲಾಗಿತ್ತು.
ಈಗ ಮತ್ತೊಮ್ಮೆ ರಾಜ್ಯದಲ್ಲಿ ಗೋ ಹತ್ಯಾ ನಿಷೇಧದ ಮಸೂದೆಯನ್ನು ತರಲು ಬಿಜೆಪಿ ಸರ್ಕಾರ ಹೊರಟಿದೆ. ಇದಕ್ಕೆ ಜೆಡಿ ಎಸ್ ಪಕ್ಷ ದ ವಿರೋಧವಿದೆ ಎಂದು ಎಚ್ ದೇವೇಗೌಡರು ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.