ಸಿಂದಗಿ ಉಳಿಸಿಕೊಳ್ಳಲು ಶಕ್ತಿಮೀರಿ ದೇವೇಗೌಡರ ಯತ್ನ : ಹೊಸ ಪ್ಲಾನ್

Kannadaprabha News   | Asianet News
Published : Oct 14, 2021, 07:58 AM IST
ಸಿಂದಗಿ ಉಳಿಸಿಕೊಳ್ಳಲು ಶಕ್ತಿಮೀರಿ  ದೇವೇಗೌಡರ ಯತ್ನ : ಹೊಸ ಪ್ಲಾನ್

ಸಾರಾಂಶ

ಸಿಂದಗಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು  ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿಕೆ

 ವಿಜಯಪುರ (ಅ.14):  ಸಿಂದಗಿ (Sindagi) ಕ್ಷೇತ್ರವನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ಜೆಡಿಎಸ್‌ (JDS) ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Devegowda) ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ಸಹಪಾಠಿಯಾಗಿದ್ದ ದಿವಂಗತ ಎಂ.ಸಿ.ಮನಗೂಳಿ (MC Managuli) ಅವರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಕ್ಷೇತ್ರಕ್ಕೆ ನಾನೂ ಸೇವೆ ಸಲ್ಲಿಸಿದ್ದೇನೆ. ಸಿಂದಗಿ ಕ್ಷೇತ್ರ ಉಳಿಸಿಕೊಳ್ಳಲು 9 ದಿನ ಇಲ್ಲಿಯೇ ಇದ್ದು ಗೆಲ್ಲಲು ಶ್ರಮಿಸಲಾಗುವುದು. ನನ್ನ ರಾಜಕೀಯ (Politics) ಜೀವನದಲ್ಲಿ ಜೀವನದ ಕೊನೆಯ ಘಟ್ಟದಲ್ಲಿ ಈ ಚುನಾವಣೆಯನ್ನು (Election) ಗೆಲ್ಲಲು ದೃಢವಾದ ಹೆಜ್ಜೆ ಇಡಲಾಗುವುದು. ಎಲ್ಲರ ಸಹಕಾರದಿಂದ ಜೆಡಿಎಸ್‌ (JDS) ಅಭ್ಯರ್ಥಿ ಗೆಲ್ಲಿಸಲು ಶ್ರಮ ಪಡಲಾಗುವುದು ಎಂದು ಹೇಳಿದರು.

ನಿಮ್ಮ ತಂದೆ ಕೂಡ ವಿಪಕ್ಷ ನಾಯಕರಾಗಿದ್ರು, ಅದು ಪುಟಗೋಸಿನಾ? ಎಚ್‌ಡಿಕೆಗೆ ಸಿದ್ದು ಗುದ್ದು

ಒಮ್ಮತದ ಅಭ್ಯರ್ಥಿ ಕಣಕ್ಕೆ:  ಎರಡು ದಿನ ಚರ್ಚೆ ನಡೆಸಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಸಾರ್ವಜನಿಕ ಭಾಷಣಕ್ಕಷ್ಟೇ ಸೀಮಿತವಾಗದೆ ಗ್ರಾಮಗಳಿಗೆ ತೆರಳಿ ರೈತರು (Farmers), ಮಹಿಳೆಯರು, ಯುವ ಜನತೆಗೆ (Youths) ಮನವರಿಕೆ ಮಾಡುವ ಮೂಲಕ ಜೆಡಿಎಸ್‌ (JDS) ಗೆಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನನ್ನ ಜೀವನದ ಕೊನೆಯ ಘಟ್ಟದಲ್ಲಿ ನಿಮ್ಮ ಮುಂದೆ ಬಂದಿದ್ದೇನೆ. ನಮ್ಮ ಅಭ್ಯರ್ಥಿ ಗೆಲ್ಲಿಸಿ ಎಂದು ಮತದಾರರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದೂ ಹೇಳಿದರು.

ಜೆಡಿಎಸ್‌ (JDS) ಮುಗಿಸಲು ಹುನ್ನಾರ:  ಕುಮಾರಸ್ವಾಮಿ (HD Kumaraswamy) ಅವರು ಎರಡೂ ಕ್ಷೇತ್ರಗಳಲ್ಲಿ ಚುನಾವಣೆ (Election) ಪ್ರಚಾರ ಮಾಡಲಿದ್ದಾರೆ. ಸಿಂದಗಿ ಕ್ಷೇತ್ರ ಗೆಲ್ಲಲು ಹೆಚ್ಚಿನ ಗಮನ ಹರಿಸಲಾಗಿದೆ. ಶಕ್ತಿಮೀರಿ ಪ್ರಯತ್ನಿಸಲಾಗುವುದು. ಅಂತಿಮವಾಗಿ ಮತದಾರರು ನಿರ್ಧಾರ ಕೈಗೊಳ್ಳಲಿದ್ದಾರೆ. ಜೆಡಿಎಸ್‌ (JDS) ಪಕ್ಷ ಮುಗಿಸಲು ಕಾಂಗ್ರೆಸ್‌ (Congress), ಬಿಜೆಪಿಗಳು (BJP) ಹುನ್ನಾರ ನಡೆಸಿವೆ. ಅದು ಸಾಧ್ಯವಾಗಲ್ಲ. ಕಾಶ್ಮೀರದಲ್ಲಿ 7 ವರ್ಷಗಳ ಹಿಂದೆ ಏನಿತ್ತು? ಇಂದು ಏನು ನಡೆದಿದೆ ಎಂದು ಎಲ್ಲವನ್ನು ವಿಶ್ಲೇಷಣೆ ಮಾಡಲ್ಲ. ಇಂದಿನ ಪರಿಸ್ಥಿತಿ ನಾಳೆ ಏನಾಗಲಿದೆ ಎಂದು ಈಗಲೇ ಏನನ್ನೂ ಹೇಳಲು ಆಗುವುದಿಲ್ಲ ಎಂದರು.

ಏಕಾಂಗಿಯಾಗಿ ಹೋರಾಟ:  ನಮಗೆ ಯಾವುದೇ ಪಕ್ಷದೊಂದಿಗೆ ಚುನಾವಣೆ ಸಂಬಂಧ ಇಲ್ಲ. ಏಕಾಂಗಿಯಾಗಿ ಹೋರಾಡುತ್ತೇವೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ (2023 Assembly Election) ರಾಜ್ಯಾದ್ಯಂತ ಸಂಚರಿಸುತ್ತೇನೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆದಾಗಿನಿಂದ ಸರ್ಕಾರ ಹೋಗುವ ತನಕ ಏನಾಯಿತು ಎಂದು ಹೇಳಬೇಕು ಎಂದ ಅವರು, ನನ್ನನ್ನು ಏಕ ವಚನದಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ