ಬಿಜೆಡಿ ಸಂಸದರೊಂದಿಗೆ ದೊಡ್ಡ ಗೌಡರ ಸಿಕ್ರೇಟ್ ಚಾಟಿಂಗ್!

Published : Jan 11, 2019, 06:29 PM IST
ಬಿಜೆಡಿ ಸಂಸದರೊಂದಿಗೆ ದೊಡ್ಡ ಗೌಡರ ಸಿಕ್ರೇಟ್ ಚಾಟಿಂಗ್!

ಸಾರಾಂಶ

ಪ್ರಾದೇಶಿಕ ಪಕ್ಷಗಳ ಒಕ್ಕೂಟಕ್ಕೆ ಜೆಡಿಎಸ್?| ಒರಿಸ್ಸಾ ಸಂಸದರೊಂದಿಗೆ ಹೆಚ್‌ಡಿಡಿ ಗುಪ್ತ ಮಾತುಕತೆ| ಮಹಾಘಟಬಂಧನ್ ಸೇರುವ ಪ್ರಶ್ನೆ ಇಲ್ಲ ಎಂದಿದ್ದ ಸಿಎಂ ನವೀನ್ ಪಟ್ನಾಯಕ್| ಒರಿಸ್ಸಾ ಬಿಜೆಡಿ ಸಂಸದರೊಂದಿಗೆ ದೇವೇಗೌಡ ಮಾತುಕತೆ

ಬೆಂಗಳೂರು(ಜ.11): ಮಹಾಘಟಬಂಧನ್ ಜೊತೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಒರಿಸ್ಸಾ ಸಿಎಂ ನವೀನ್ ಪಟ್ನಾಯಕ್ ಹೇಳಿದ ಬೆನ್ನಲ್ಲೇ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಬಿಜೆಡಿ ಸಂಸದರೊಂದಿಗೆ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಹೊರತಾದ ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚನೆಗೆ ಕೆಲವು ಪ್ರಾದೇಶಿಕ ನಾಯಕರು ಕಸರತ್ತು ನಡೆಸಿದ್ದಾರೆ. ಪ್ರಮುಖವಾಗಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಈಗಾಗಲೇ ಒರಿಸ್ಸಾ ಸಿಎಂ ನವೀನ್ ಪಟ್ನಾಯಕ್, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖ ಪ್ರಾದೇಶಿಕ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಇನ್ನು ಕರ್ನಾಟಕದ ಪ್ರಮುಖ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಸದ್ಯ ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿದೆ. ಆದರೆ ಲೋಕಸಬೆ ಚುನಾವಣೆ ವೇಳೆ ಮೈತ್ರಿ ಮುರಿದು ಪ್ರಾದೇಶಿಕ ಪಕ್ಷಗಳ ಒಕ್ಕೂಟ ಸೇರುವ ಇರಾದೆ ಜೆಡಿಎಸ್ ಗೆ ಇದೆಯಾ ಎಂಬ ಅನುಮಾನ ಇದೀಗ ಮೂಡತೊಡಗಿದೆ.

ಇದಕ್ಕೆ ಪುಷ್ಠಿ ನೀಡುವಂತೆ ದೇವೇಗೌಡ ಒರಿಸ್ಸಾ ಸಂಸದರಾದ ನಾಗೇಂದ್ರ ಪ್ರಧಾನ್ ಮತ್ತು ರಬೀಂದ್ರ ಕುಮಾರ್ ಜೇನಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ ಈ ನಾಯಕರು ಜಾತ್ಯಾತೀತ ಮತ್ತು ಪ್ರಾದೇಶಿಕ ಶಕ್ತಿಗಳು ಒಂದುಗೂಡವ ಅವಶ್ಯಕತೆ ಕುರಿತು ಮಾತನಾಡಿದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ - ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ