ಎಚ್.ಡಿ.ದೇವೇಗೌಡರಿಂದ ಪ್ರಮಾಣ ವಚನ ಸ್ವೀಕಾರ

Kannadaprabha News   | Asianet News
Published : Sep 20, 2020, 11:02 AM IST
ಎಚ್.ಡಿ.ದೇವೇಗೌಡರಿಂದ ಪ್ರಮಾಣ ವಚನ ಸ್ವೀಕಾರ

ಸಾರಾಂಶ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ನವದೆಹಲಿ (ಸೆ.20): ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್‌ನ ಮುಂಗಾರು ಅಧಿವೇಶನ ಭಾನುವಾರ ನಡೆಯುತ್ತಿದೆ. ಶನಿವಾರ ರಾತ್ರಿ ದೆಹಲಿಗೆ ತೆರಳಿದ ದೇವೇಗೌಡ ಅವರು ಇಂದು ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯ​ಸಭೆ ಸಭಾ​ಪ​ತಿ ವೆಂಕಯ್ಯನಾಯ್ಡು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಅಧಿವೇಶನ ಅವಧಿ ಕಡಿಮೆ ಇರುವ ಕಾರಣ ಭಾನುವಾರವೂ ರಾಜ್ಯಸಭೆ ನಡೆಯುತ್ತಿದೆ. ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂ.12ರಂದು ನಡೆದ ಚುನಾವಣೆಯಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್‌ ಗಸ್ತಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ಕೋವಿಡ್‌ನಿಂದಾಗಿ ಅಶೋಕ್‌ ಗಸ್ತಿ ಅವರು ನಿಧನರಾಗಿದ್ದಾರೆ.

ವಿವಿಧ ರಾಜ್ಯದಿಂದ ಆಯ್ಕೆಯಾದ 45 ಸದಸ್ಯರು ಜು.22ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಕೆಲ ಕಾರಣಗಳಿಂದಾಗಿ ದೇವೇಗೌಡ ಅವರು ತೆರಳಲು ಸಾಧ್ಯವಾಗರಿಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?