'ಮೋದಿ ಬಗ್ಗೆ ನಿರೀಕ್ಷೆ ಇಲ್ಲ, ಮಾಮೂಲಿ ಭಾಷಣ ಮಾಡ್ತಾರೆ, ಜನ ಮರುಳಾಗ್ತಾರೆ ಅಷ್ಟೇ'

Published : May 12, 2020, 02:33 PM ISTUpdated : May 12, 2020, 02:40 PM IST
'ಮೋದಿ ಬಗ್ಗೆ ನಿರೀಕ್ಷೆ ಇಲ್ಲ, ಮಾಮೂಲಿ ಭಾಷಣ ಮಾಡ್ತಾರೆ, ಜನ ಮರುಳಾಗ್ತಾರೆ ಅಷ್ಟೇ'

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇದಕ್ಕೆ ಮಾಜಿ ಸಿಎಂ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು (ಮೇ 12): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಮೋದಿ ಭಾಷಣದ ಬಗ್ಗೆ ನನಗೆ ನಿರೀಕ್ಷೆ ಇಲ್ಲ. ಮಾಮೂಲಿ ಭಾಷಣ ಮಾಡ್ತಾರೆ. ಜನ ಮರುಳಾಗ್ತಾರೆ ಅಷ್ಟೇ ಎಂದು ಮಾರ್ಮಿಕವಾಗಿ ಹೇಳಿದರು.

ಪಿಎಂ ಕೇರ್ಸ್ ಫಂಡ್ ಬಗ್ಗೆ ಮಾಹಿತಿ ಕೊಡೊಲ್ಲ ಅಂತಾರೆ. ಇದು ಮೋದಿ ಅವರು ಆಡಳಿತ. ಮೋದಿ ಅವ್ರ ಭಾಷಣ ಕೇಳೊಕೆ ಚೆಂದ. ಅದನ್ನ ಕೇಳಿಕೊಂಡು ಸುಮ್ಮನೆ ಇರಬೇಕು ಅಷ್ಟೇ. ಕಳೆದ 7 ವರ್ಷಗಳಿಂದ ಕೇಳ್ತಾನೆ ಇದ್ದೇವೆ. ಹಾಗೆ ಕೇಳಿಕೊಂಡು ಇರಬೇಕು ಅಷ್ಟೇ ಎಂದು ವ್ಯಂಗ್ಯವಾಡಿದರು.

ದೇಶವನ್ನುದ್ದೇಶಿಸಿ ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಮಾತು!

ನಿನ್ನೆ (ಸೋಮವಾರ) ಎಲ್ಲ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದರು. ಈ ವೇಳೆ ಲಾಕ್​ಡೌನ್​ ವಿಸ್ತರಣೆ ಬಗ್ಗೆ ಮೋದಿ ಎಲ್ಲ ಸಿಎಂಗಳಿಂದ ಸಲಹೆಗಳನ್ನು ಪಡೆದರು. ಅಲ್ಲದೆ, ಲಾಕ್​ಡೌನ್​ ವಿನಾಯಿತಿ ನೀಡುವ ಬಗ್ಗೆಯೂ ಚರ್ಚೆ ನಡೆಸಿದ್ದರು. ಆ ಎಲ್ಲ ವಿಚಾರಗಳನ್ನು ಇಂದು ಮೋದಿ 8 ಗಂಟೆ ಭಾಷಣದಲ್ಲಿ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

ಇನ್ನು ಲಾಕ್​ಡೌನ್​ ಮೇ 17ಕ್ಕೆ ಪೂರ್ಣಗೊಳ್ಳಲಿದ್ದು, ಅದನ್ನು ವಿಸ್ತರಣೆ ಮಾಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಅವರು ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ. 

ಒಟ್ಟಾರೆ ದೇಶದಲ್ಲಿ ಕೊರೋನಾ ಕೇಸ್ ದಿನದಿಂದ ದಿನಕ್ಕೆ ಏರುತ್ತಿದೆ. ಮತ್ತೊಂದೆಡೆ ಲಾಕ್‌ಡೌನ್ ಅಂತ್ಯಕ್ಕೆ ಐದು ದಿನಗಳು ಬಾಕಿ ಇದ್ದು, ಮೋದಿ ಏನು ಹೇಳುತ್ತಾರೋ ಎನನ್ನುವುದು ಮಾತ್ರ ಭಾರೀ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?