ಕಾಂಗ್ರೆಸ್ ಮುಖಂಡ ರಮೇಶ್‌ಕುಮಾರ್‌ ವಿರುದ್ಧ ಗಂಭೀರ ಆರೋಪ

Kannadaprabha News   | Asianet News
Published : Feb 27, 2021, 11:34 AM IST
ಕಾಂಗ್ರೆಸ್ ಮುಖಂಡ   ರಮೇಶ್‌ಕುಮಾರ್‌ ವಿರುದ್ಧ ಗಂಭೀರ ಆರೋಪ

ಸಾರಾಂಶ

ಮಾಜಿ ಸ್ಪೀಕರ್ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಹಿಂದಿದ್ದ ಮೈತ್ರಿ ಸರ್ಕಾರ ಕೆಡವಲು ಈ ಇಬ್ಬರೇ ಕಾರಣ ಎನ್ನಲಾಗಿದೆ. 

ಚನ್ನಪಟ್ಟಣ (ಫೆ.27):  ರಾಜ್ಯದಲ್ಲಿ ದೋಸ್ತಿ ಸರ್ಕಾರ ಪತನ ಗೊಂಡಿದ್ದರ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರ ಪಾತ್ರ ಇದೆ ಎಂದು ನೇರ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಇಬ್ಬರು ಗ್ರೇಟ್‌ ಸೆಕ್ಯುಲರ್‌ ಲೀಡರ್‌ಗಳು ಹುನ್ನಾರ ಮಾಡಿ ಸರ್ಕಾರ ಬೀಳಿಸಿದರು ಎಂದು ವ್ಯಂಗ್ಯವಾಡಿದ್ದಾರೆ.

ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬಿದ್ದರೆ ಯಡಿಯೂರಪ್ಪ ಸಿಎಂ ಆಗುತ್ತಾರೆ. ಅವರು 6 ತಿಂಗಳಲ್ಲಿ ಹೆಸರು ಕೆಡಿಸಿಕೊಳ್ಳುತ್ತಾರೆ, ಮತ್ತೆ ನಾವೇ ಸಿಎಂ ಆಗಬಹುದು ಎಂಬುದು ಇವರ ಗ್ರೇಟ್‌ ಪ್ಲಾನ್‌ ಆಗಿತ್ತು. ನಾನು ರೈತರ ಸಾಲ ಮನ್ನಾ ಆಗಿದ್ದರಿಂದ ಸರ್ಕಾರ ಉಳಿಸಿಕೊಳ್ಳಲು ಆಸಕ್ತಿ ಇಲ್ಲದೆ ಬಿದ್ದರೆ ಬೀಳಲಿ ಎಂದು ಸುಮ್ಮನಾದೆ. ಪ್ರಯತ್ನ ಮಾಡಿದ್ದರೆ ಸರ್ಕಾರ ಉಳಿಸಿಕೊಳ್ಳಬಹುದಾಗಿತ್ತು ಎಂದರು.

1 ಪೀಸ್‌ ಕುರಿ ಮಾಂಸ ತಿನ್ನಿ, ಕತೆಯೇ ಬೇರೆ : ಕಾಲೆಳೆದ ರಮೇಶ್‌ ಕುಮಾರ್ ..

ಪಾಪ ಡಿಕೆಶಿ: ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್‌ ಪಾಪ, ಸಿಎಂ ಆಗಬೇಕು ಎಂದು ಆಸೆ ಇಟ್ಟುಕೊಂಡಿದ್ದಾರೆ. ಆದರೆ ಇತ್ತ ನಾನೇ ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಬೋರ್ಡು ನೇತುಹಾಕಿಕೊಂಡು ಓಡಾಡುತ್ತಿದ್ದಾರೆ. ಈ ಇಬ್ಬರು ನಾಯಕರು ಏನೆಲ್ಲಾ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ