
ಚನ್ನಪಟ್ಟಣ(ಆ.06): ಚನ್ನಪಟ್ಟಣ ಉಪಚುನಾವಣೆ ಟಿಕೆಟ್ಗೆ ಸಂಬಂಧಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯೋಗೇಶ್ವರ್ಬೆಂಬಲಿಗರ ಮೇಲೆ ಗರಂ ಆದ ಪ್ರಸಂಗ ಮೈಸೂರು ಚಲೋ ಪಾದಯಾತ್ರೆಯಲ್ಲಿ ನಡೆಯಿತು.
ಕುಮಾರಸ್ವಾಮಿ ಭಾಷಣ ಆರಂಭಿಸುತ್ತಿದ್ದಂತೆ ಕೆಲ ಬಿಜೆಪಿ ಕಾರ್ಯಕರ್ತರು ಉಪಚುನಾವಣೆ ಟಿಕೆಟ್ ಕುರಿತು ಕೂಗು ಹಾಕಿದರು. ಈ ವೇಳೆ ನಾನಿಲ್ಲಿ ಟಿಕೆಟ್ ವಿಚಾರ ಮಾತನಾಡಲು ಬಂದಿಲ್ಲ ಎಂದು ಭಾಷಣ ಮುಂದುವರಿಸಿದರು.
ಕುಮಾರಸ್ವಾಮಿ ರಕ್ತದ ಕಣ ಕಣದಲ್ಲೂ ದ್ವೇಷ ತುಂಬಿದೆ: ಸಚಿವ ಚಲುವರಾಯಸ್ವಾಮಿ ಕಿಡಿ
ಕೆಲ ಸಮಯದ ನಂತರ ಯೋಗೇಶ್ವರ್ ಬೆಂಬಲಿಗರು ಟಿಕೆಟ್ ವಿಚಾರಕ್ಕೆ ಮತ್ತೆ ಕೂಗು ಹಾಕಿದಾಗ ತಾಳ್ಮೆ ಕಳೆದುಕೊಂಡ ಕುಮಾರಸ್ವಾಮಿ, ಟಿಕೆಟ್ ವಿಚಾರವನ್ನು ಹಾದಿಬೀದಿಯಲ್ಲಿ ತೀರ್ಮಾನ ಮಾಡಲು ಆಗಲ್ಲ ಎಂದು ಗರಂ ಆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.