ಎಚ್‌ಡಿಕೆ ಬಿಜೆಪಿ ವಕ್ತಾರರಾಗಿದ್ದು, ಸುಳ್ಳು ಹೇಳೋದು ಬಿಟ್ಟರೆ ಇನ್ನೇನು ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ ಲೇವಡಿ

Published : Jan 30, 2024, 04:00 AM IST
ಎಚ್‌ಡಿಕೆ ಬಿಜೆಪಿ ವಕ್ತಾರರಾಗಿದ್ದು, ಸುಳ್ಳು ಹೇಳೋದು ಬಿಟ್ಟರೆ ಇನ್ನೇನು ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ ಲೇವಡಿ

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಮಾಡಿಕೊಂಡಿದ್ದೇವೆ ಅಂತಾ ಬಿಜೆಪಿಯನ್ನು ಕುಮಾರಸ್ವಾಮಿ ಹಾಡಿ ಹೊಗಳುತ್ತಿದ್ದಾರೆ ಎಂದರು.   

ತುಮಕೂರು (ಜ.30): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿ ಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಮಾಡಿಕೊಂಡಿದ್ದೇವೆ ಅಂತಾ ಬಿಜೆಪಿಯನ್ನು ಕುಮಾರಸ್ವಾಮಿ ಹಾಡಿ ಹೊಗಳುತ್ತಿದ್ದಾರೆ ಎಂದರು. ಆ ಪಕ್ಷದ ಹೆಸರು ಮುಂದೆ ಸೆಕ್ಯುಲರ್ ಅಂತಾ ಬೇರೆ ಇಟ್ಟುಕೊಂಡಿದ್ದಾರೆ. ಸೆಕ್ಯುಲರ್ ಅಂದ್ರೆ ಏನು ಅರ್ಥ ಎಂದ ಅವರು ಜಾತ್ಯತೀತ ಬಿಜೆಪಿ ಜೊತೆ ಸೇರಿಕೊಂಡರೆ ಇವರನ್ನು ಏನಂತ ಕರಿಬೇಕು ಎಂದರು.

ಮಂಡ್ಯದ ಕೆರೆಗೋಡಿನ ಕಂಬದಲ್ಲಿ ಯಾವುದೇ ಧರ್ಮದ ಧ್ವಜ ಹಾರಿಸುವುದಿಲ್ಲ ಅಂತಾ ಅನುಮತಿ ಪಡೆದು ಭಗವಾ ಧ್ವಜ ಹಾರಿಸಿದ್ದು ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧ ಅಲ್ಲವಾ ಎಂದು ಪ್ರಶ್ನಿಸಿದರು. ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುವುದಾಗಿ ಅನುಮತಿ ಪಡೆದು ಭಗವಾ ಧ್ವಜ ಹಾರಿಸಿದ್ದಾರೆ. ಇದರ ಪರವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಭಟನೆಗೆ ಹೋಗುತ್ತಾರೆಂದರೆ ಪ್ರಚೋಜನೆಯಲ್ಲವಾ ಎಂದರು. 

ಚುನಾವಣಾ ರಾಜಕೀಯ ಲಾಭ ಪಡೆಯುವ ಸಲುವಾಗಿ ಮಾಡುತ್ತಿದ್ದಾರೆ ಎಂದ ಅವರು ಸರ್ಕಾರದ ವೈಫಲ್ಯ ಇಲ್ಲ ಎಂದರು. ಲಾಠಿ ಚಾರ್ಜ್ ಬಗ್ಗೆ ನನಗೆ ಇನ್ನೂ ಸರಿಯಾಗಿ ಗೊತ್ತಿಲ್ಲ. ಪೊಲೀಸಿನವರಿಗೆ ಹೊಡೆದರು ಅನ್ನೋ ಮಾಹಿತಿ ಇದೆ. ಪೊಲೀಸರಿಗೆ ಹೊಡೆದರೆ ಏನು ಮಾಡುತ್ತಾರೆ ಎಂದರು. ಧ್ವಜದ ವಿಚಾರದಲ್ಲಿ ನಕಲಿ ದಾಖಲೆ ಸೃಷ್ಟಿಯಾಗಿದೆ ಎಂದ ಕುಮಾರ ಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಕುಮಾರಸ್ವಾಮಿಗೆ ಸುಳ್ಳು ಹೇಳೋದು ಬಿಟ್ಟರೆ ಇನ್ನೇನು ಗೊತ್ತಿದೆ. ಯಾವುದಾದರೂ ಅವರು ಹೇಳಿದ್ದನ್ನು ಸಾಬೀತು ಮಾಡಿದ್ದಾರಾ ಎಂದ ಅವರು ಆರೋಪ ಮಾಡಬೇಕು ಅಂತಾ ಮಾಡುತ್ತಾರೆ ಎಂದರು. 

ಬೀದರ್‌ ಸಂಸದ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೀಡಿ: ವಿಜಯೇಂದ್ರಗೆ ಶಾಸಕ ಚವ್ಹಾಣ್‌ ಸಾಷ್ಟಾಂಗ ನಮಸ್ಕಾರ

ಬಿಜೆಪಿಯವರಿಗೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲುವ ಭಯ ಬಂದಿದೆ. ಆ ಭಯದಿಂದ ಇವೆಲ್ಲ ಪ್ರಚೋದನೆಗಳನ್ನ ಮಾಡುತ್ತಿದ್ದಾರೆ. ಯಾವುದೇ ವಿಚಾರ ಇಲ್ಲದೇ ಇದ್ದರೂ ಅಲ್ಲಿ ಇಶ್ಯೂ ಮಾಡಿ ಕೋಮುವಾದ ಸೃಷ್ಟಿಸುತ್ತಿದ್ದಾರೆ ಎಂದರು. ನಾವು 136 ಜನ ಶಾಸಕರಿದ್ದೀವಿ, ಶೇ. 43 ಮತ ಗಳಿಕೆ ಮಾಡಿದ್ದೇವೆ. ಅವರಿಗೆ ಶೇ.37 ಬಂದಿದೆ. ಬಿದ್ದೋಗೋಕೆ ಹೇಗೆ ಸಾಧ್ಯ ಆಗುತ್ತದೆ ಎಂದರು. ಯಾರೇ ಕಾನೂನು ಕೈಗೆತ್ತಿಕೊಂಡರೂ ಸರ್ಕಾರ ಸಹಿಸುವುದಿಲ್ಲ, ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ