
ಗದಗ, (ಆ.23): ಕೆರೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ದಿಢೀರ್ ರದ್ದುಗೊಳಿಸಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹೌದು...ಇಂದು (ಆ.23) ಗದಗ ಜಿಲ್ಲೆಯ ಸುಗ್ನಳ್ಳಿ ಗ್ರಾಮದ ಅಲದಮ್ಮನ ಕೆರೆ ಭೂಮಿ ಪೂಜೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ದಿಢೀರನೇ ಕಾರ್ಯಕ್ರಮ ರದ್ದುಗೊಂಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ವರ್ಚಸ್ಸು ನಶಿಸಿದ್ದಕ್ಕೆ ಯಾತ್ರೆ : ಎಚ್ಡಿಕೆ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯಕ್ಕೆ ಈ ಗ್ರಾಮಕ್ಕೆ ಆಗಮಿಸಿದ್ದಾಗ ಸುಗ್ನಳ್ಳಿ ಕೆರೆಗೆ ಅನುದಾನ ಒದಗಿಸಿದ್ದೆ. ಇದೀಗ ಹೀಗಾಗಿ ಕೆರೆ ಭೂಮಿ ಪೂಜೆ ನಡೆಯಲಿದ್ದು ನನಗೆ ಆಹ್ವಾನ ನೀಡಿದ್ದರು. ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಸ್ವತಃ ಆಹ್ವಾನ ನೀಡಿದ್ದರು. ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಅವರೊಂದಿಗೂ ಮಾತನಾಡಿದ್ದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಗದಗಕ್ಕೆ ಆಗಮಿಸಿದ್ದೆ. ಆದರೆ ನಿನ್ನೆ (ಆ.22) ರಾತ್ರಿ ಅನಿರೀಕ್ಷಿತವಾಗಿ ಇಂದಿನ ಕಾರ್ಯಕ್ರಮನ್ನು ರದ್ದುಗೊಳಿಸಿದ್ದಾರೆ ಎಂದರು.
ಯಾಕೆ ಹೀಗೆ ನಡೆದಿದೆ ಎಂದು ನನಗೆ ತಿಳಿದಿಲ್ಲ. ಆದರೆ ರಾಜಕೀಯ ಮಾಡದೇ ಜನರ ಪರವಾಗಿ ಕೆಲಸ ನಿರ್ವಹಿಸಿ ಎಂದಷ್ಟೇ ಇಲ್ಲಿಯ ಜನಪ್ರತಿನಿಧಿಗಳಿಗೆ ಸಲಹೆ ನೀಡುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.