ನೀರಾವರಿ ಇಲಾಖೆ ಬಳಿಕ ಅಬಕಾರಿ ಇಲಾಖೆಯ ಅಕ್ರಮ ಬಯಲು: ತನಿಖೆಗೆ ಎಚ್‌ಡಿಕೆ ಆಗ್ರಹ

Published : Jun 22, 2021, 02:18 PM IST
ನೀರಾವರಿ ಇಲಾಖೆ ಬಳಿಕ ಅಬಕಾರಿ ಇಲಾಖೆಯ ಅಕ್ರಮ ಬಯಲು: ತನಿಖೆಗೆ ಎಚ್‌ಡಿಕೆ ಆಗ್ರಹ

ಸಾರಾಂಶ

* ನೀರಾವರಿ ಇಲಾಖೆ ಬಳಿಕ ಅಬಕಾರಿ ಇಲಾಖೆಯ ಅಕ್ರಮ ಬಯಲು  * ಸೂಕ್ತ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹ  * ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯ

ಬೆಂಗಳೂರು, (ಜೂನ್.22): ನೀರಾವರಿ ಇಲಾಖೆಯ ರೂ.20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ರೂ. ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವನಾಥ್ ಬಗ್ಗೆ ಪ್ರತಿಕ್ರಿಯಿಸಲ್ಲ, ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿ: ಬಿಎಸ್‌ವೈ

ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ? ಎಂದು ಪ್ರಶ್ನಿಸಿದ್ದಾರೆ.

2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಬಿಎಸ್‌ವೈ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ