ಎಂಡಿಎ ವತಿಯಿಂದ ಎಚ್‌ಡಿಕೆ ಗೃಹ, ವಾಣಿಜ್ಯಕ್ಕೆ ನಿವೇಶನ ಪಡೆದಿಲ್ಲ: ಸಾ.ರಾ.ಮಹೇಶ್ ಸ್ಪಷ್ಟನೆ

Published : Jul 25, 2024, 09:00 AM IST
ಎಂಡಿಎ ವತಿಯಿಂದ ಎಚ್‌ಡಿಕೆ ಗೃಹ, ವಾಣಿಜ್ಯಕ್ಕೆ ನಿವೇಶನ ಪಡೆದಿಲ್ಲ: ಸಾ.ರಾ.ಮಹೇಶ್ ಸ್ಪಷ್ಟನೆ

ಸಾರಾಂಶ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಾಣಿಜ್ಯ ಅಥವಾ ಗೃಹ ನಿವೇಶನವನ್ನು ಎಂಡಿಎ ವತಿಯಿಂದ ಪಡೆದಿಲ್ಲ. ಉದ್ಯಮ ಸ್ಥಾಪನೆಗೆ ಹಣ ಪಾವತಿಸಿ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷರೂ ಆದ ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದರು. 

ಮೈಸೂರು (ಜು.25): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಾಣಿಜ್ಯ ಅಥವಾ ಗೃಹ ನಿವೇಶನವನ್ನು ಎಂಡಿಎ ವತಿಯಿಂದ ಪಡೆದಿಲ್ಲ. ಉದ್ಯಮ ಸ್ಥಾಪನೆಗೆ ಹಣ ಪಾವತಿಸಿ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷರೂ ಆದ ಮಾಜಿ ಸಚಿವ ಸಾ.ರಾ. ಮಹೇಶ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1985 ರಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಹಣ ಪಾವತಿಸಿ ನಿವೇಶನ ಪಡೆದಿದ್ದಾರೆ. ಈ ವಿಷಯದಲ್ಲಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪ ನಿರಾಧಾರ. ಇಂಡಸ್ಟ್ರಿಯಲ್ ಸಬರ್ಬ್ 3ನೇ ಹಂತದಲ್ಲಿ ನಿವೇಶನ ಪಡೆದುಕೊಂಡಿದ್ದರು. ಅದಕ್ಕೆ ಅವರು 37,334 ರೂ. ಪಾವತಿಸಿದ್ದರು. 

ಬಳಿಕ ಉದ್ಯಮ ಸ್ಥಾಪನೆಗೆ ನಿವೇಶನದ ಬಳಿ ಹೋದಾಗ ಒತ್ತುವರಿಯಾಗಿತ್ತು. ಈ ವಿಷಯವನ್ನು ಎಂಡಿಎ ಗಮನಕ್ಕೆ ತಂದಾಗ ಅವರು ಪರಿಶೀಲಿಸಿ ಇದಕ್ಕೆ ಬದಲಿ ನಿವೇಶನ ನೀಡಬೇಕು ಎಂದು ಶಿಫಾರಸ್ಸು ಮಾಡಿದ್ದಾಗಿ ಹೇಳಿದರು. ಈ ವಿಷಯ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆಗೊಂಡಿದೆ. ಆದರೂ ಈವರೆಗೂ ಕುಮಾರಸ್ವಾಮಿ ಅವರಿಗೆ ಬದಲಿ ನಿವೇಶನ ನೀಡಿಲ್ಲ. ಅಲ್ಲದೇ ಅವರು ನಿವೇಶನಕ್ಕಾಗಿ ಪಾವತಿಸಿರುವ ಹಣ ಕೂಡ ಅಷ್ಟು ವರ್ಷದಿಂದಲೂ ಪ್ರಾಧಿಕಾರದ ಬಳಿಯೇ ಇದೆ ಎಂದು ಅವರು ವಿವರಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ತಮ್ಮ ಪ್ರಭಾವ ಬಳಸಿಕೊಂಡು ನಿವೇಶನ ಪಡೆದುಕೊಂಡಿಲ್ಲ. 

ನಂದಿನಿ ಹಾಲಿನ ದರ ಏರಿಕೆಗೆ ಹೈಕೋರ್ಟ್‌ ಅಸ್ತು: ತಜ್ಞರ ಅನಿಸಿಕೆ, ನಿರ್ದಿಷ್ಟ ನೀತಿಯಂತೆ ಏರಿಕೆ

ಅವರ ಕುಟುಂಬದ ಯಾವ ಸದಸ್ಯರಿಗೂ ನಿವೇಶನ ಕೊಡಿಸಿಲ್ಲ. ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡಬಾರದು ಎಂದರು. ಸಿನಿಮಾ ರಂಗ ಒಂದು ಉದ್ಯಮವಲ್ಲವೇ? ಕುಮಾರಸ್ವಾಮಿ ಅವರು ಅನೇಕ ಹಿಟ್ ಸಿನಿಮಾ ನೀಡಿದ್ದಾರೆ. ಎಂಡಿಎ ಹಗರಣ ಬೆಳಕಿಗೆ ಬಂದ ಬಳಿಕ ಸಾರ್ವಜನಿಕರ ಯಾವುದೇ ಕೆಲಸ ಕೂಡ ಅಲ್ಲಿ ಆಗುತ್ತಿಲ್ಲ. ಆದ್ದರಿಂದ ಈ ಸಂಬಂಧ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದರು.

ಆರ್ಟಿಐ (ಮಾಹಿತಿ ಹಕ್ಕು ಕಾಯ್ದೆ) ಕಾರ್ಯಕರ್ತ ಎನ್ನುವುದು ಒಂದು ಹುದ್ದೆಯಲ್ಲ. ಸಾಮಾನ್ಯ ಜನರು ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಬಹುದು. ಪ್ರಾಮಾಣಿಕವಾಗಿ ಸತ್ಯ ಬಯಲಿಗೆ ಎಳೆಯಲು ಹೋರಾಟ ಮಾಡುವವರಿಗೆ ನಮ್ಮ ಬೆಂಬಲವಿದೆ. ಆದರೆ ಅದನ್ನೇ ಕಸುಬು ಮಾಡಿಕೊಂಡು, ಜೀವನ ಸಾಗಿಸುತ್ತಿರುವವರಿಗೆ ನಮ್ಮ ವಿರೋಧವಿದೆ. ಪದೇ-ಪದೇ ಆರ್ಟಿಐ ಅಡಿಯಲ್ಲಿ ಅರ್ಜಿ ಹಾಕಿ, ಅವುಗಳನ್ನು ಮೇಲಿಂದ ಮೇಲೆ ವಾಪಸ್ ತಗೆದುಕೊಳ್ಳುವವರನ್ನು ಪೊಲೀಸ್ ತನಿಖೆಗೆ ಒಳಪಡಿಸಬೇಕು ಹಾಗೂ ಅವರ ಜೀವನಮಟ್ಟವನ್ನು ಗಮನಿಸಬೇಕು ಎಂದು ಅವರು ತಿಳಿಸಿದರು.

ಬಿಜೆಪಿ ಕಾಲದ ಅಕ್ರಮ, ಭೋವಿ ನಿಗಮದ ಹಗರಣದಲ್ಲಿ ಮೊದಲ ಬಂಧನ: ಸಿಎಂ ಸಿದ್ದರಾಮಯ್ಯ ‘ಬೇಟೆ’ ಆರಂಭ!

ರೈತರನ್ನು ಶಿಕ್ಷಿಸಬೇಡಿ: ನಾಲೆಗಳಿಂದ ಅನಧಿಕೃತವಾಗಿ ನೀರೆತ್ತುವವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ವಿಧೇಯಕವನ್ನು ಕಾಯ್ದೆಯಾಗಿ ಜಾರಿಗೆ ತರಬಾರದು. ನಾಲೆ ಅಥವಾ ಕಾಲುವೆ ಕೊನೆಯಲ್ಲಿ ಇರುವ ರೈತರಿಗೆ ಯಾವ ಕಾಲದಲ್ಲೂ ಸರಿಯಾಗಿ ನೀರೇ ಸಿಗುವುದಿಲ್ಲ. ಇಂತಹ ಗಂಭೀರ ಸಮಸ್ಯೆ ಪರಿಹಾರ ಮಾಡುವುದನ್ನು ಬಿಟ್ಟು ಸರ್ಕಾರ ಈ ರೀತಿಯ ಕಾನೂನು ಜಾರಿಗೆ ತರಲು ಹೊರಟಿರುವುದು ಸರಿಯಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ನಗರಾಧ್ಯಕ್ಷ ಕೆ.ಟಿ. ಚಲುವೇಗೌಡ, ವಕ್ತಾರ ಎನ್.ಆರ್. ರವಿಚಂದ್ರೇಗೌಡ, ಮಾಜಿ ಮೇಯರ್ ರವಿಕುಮಾರ್, ಮುಖಂಡರಾದ ಎಸ್ಬಿಎಂ ಮಂಜು, ಪ್ರೇಮಾ ಶಂಕರೇಗೌಡ ಮೊದಲಾದವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ