ನನಗೆ 3ನೇ ಜನ್ಮ ಸಿಕ್ಕಿದೆ: ಭಾವುಕರಾದ ಎಚ್‌.ಡಿ.ಕುಮಾರಸ್ವಾಮಿ

Published : Sep 04, 2023, 03:00 AM IST
ನನಗೆ 3ನೇ ಜನ್ಮ ಸಿಕ್ಕಿದೆ: ಭಾವುಕರಾದ ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

ದೇವರು, ರಾಜ್ಯದ ಜನರು, ತಂದೆ-ತಾಯಿ ಆಶೀರ್ವಾದ ಹಾಗೂ ವೈದ್ಯರ ಆರೈಕೆಯಿಂದ ಮೂರನೇ ಜನ್ಮ ಸಿಕ್ಕಿದೆ. ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಬೆಂಗಳೂರು (ಸೆ.04): ದೇವರು, ರಾಜ್ಯದ ಜನರು, ತಂದೆ-ತಾಯಿ ಆಶೀರ್ವಾದ ಹಾಗೂ ವೈದ್ಯರ ಆರೈಕೆಯಿಂದ ಮೂರನೇ ಜನ್ಮ ಸಿಕ್ಕಿದೆ. ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು ಸಂಪೂರ್ಣ ಗುಣಮುಖರಾಗಿ ಭಾನುವಾರ ಮನೆಗೆ ವಾಪಸ್‌ ಆಗುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಐದು ದಿನಗಳಿಂದ ನಾಡಿನ ಜನರು, ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರು ಆತಂಕದಿಂದ ಕಾಯುತ್ತಿದ್ದರು. ಪ್ರಥಮವಾಗಿ ಭಗವಂತ, ತಂದೆ-ತಾಯಿ ಹಾಗೂ ಆಸ್ಪತ್ರೆಯ ಎಲ್ಲಾ ವೈದ್ಯ ವೃಂದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ

ತಮ್ಮ ಅನಾರೋಗ್ಯದ ಬಗ್ಗೆ ವಿವರಿಸಿದ ಕುಮಾರಸ್ವಾಮಿ, ಬಿಡದಿಯ ನನ್ನ ತೋಟದ ಮನೆಯಲ್ಲಿದ್ದೆ. ನನ್ನ ಆಪ್ತ ಸಹಾಯಕ ಸತೀಶ್‌ ಜತೆಯಲ್ಲಿ ಇದ್ದರು. ತಡರಾತ್ರಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿತು. ತಕ್ಷಣವೇ ಡಾ.ಸಿ.ಎನ್‌.ಮಂಜುನಾಥ್‌ ಅವರಿಗೆ ಕರೆ ಮಾಡಿ, ಅವರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯ ತಜ್ಞ ವೈದ್ಯ ಡಾ.ಸತೀಶ್‌ಚಂದ್ರ ಅವರನ್ನು ಸಂಪರ್ಕ ಮಾಡಲಾಯಿತು. ಬಿಡದಿ ತೋಟದ ಮನೆಯಿಂದ ಕೇವಲ ಇಪ್ಪತ್ತು ನಿಮಿಷಗಳಲ್ಲಿ ಆಸ್ಪತ್ರೆಗೆ ತಲುಪಿದೆ ಎಂದು ಹೇಳಿದರು.

ನಿರ್ಲಕ್ಷ್ಯ ಮಾಡಿದ್ದರೆ ಕಷ್ಟ: ನಾನು ಆ ಸಂದರ್ಭದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ದರೆ ಇವತ್ತು ಇಷ್ಟುಸರಾಗವಾಗಿ ಮಾತಾಡಲು ಆಗುತ್ತಿರಲಿಲ್ಲ. ವೈದ್ಯರು ಸಹ ಬಹಳ ಕಾಳಜಿ ವಹಿಸಿದರು. ಆಸ್ಪತ್ರೆಗೆ ಬಂದ ಮರು ಕ್ಷಣವೇ ವೈದ್ಯರು ಚಿಕಿತ್ಸೆ ಆರಂಭ ಮಾಡಿದರು. ಅವರ ಆರೈಕೆ, ದೇವರ ದಯೆಯ ಫಲವಾಗಿ ನಾನೀಗ ನಿಮ್ಮೆಲ್ಲರ ಜತೆ ನಿರಾಯಾಸವಾಗಿ ಮಾತನಾಡುತ್ತಿದ್ದೇನೆ ಎಂದು ಭಾವುಕರಾಗಿ ನುಡಿದರು. ಪ್ರತಿ ಕುಟುಂಬಗಳಲ್ಲೂ ಆರೋಗ್ಯದ ಸಮಸ್ಯೆಗಳು ಇದ್ದೇ ಇರುತ್ತವೆ. ಅನಾರೋಗ್ಯ ಕಾಣಿಸಿಕೊಂಡಾಗ ಅಸಡ್ಡೆ ಬೇಡ. ‘ಗೋಲ್ಡನ್‌ ಪೀರಿಯಡ್‌’ ಬಗ್ಗೆ ಗಮನ ಇರಲಿ. ವೈಯಕ್ತಿಕವಾಗಿ ಭಗವಂತ ನನಗೆ ಕೊಟ್ಟಿರುವ ಮೂರನೇ ಜನ್ಮ ಇದು. 

ಸ್ವಲ್ಪ ತಡ ಮಾಡಿದ್ದರೂ ನಾನು ಮೂರ್ನಾಲ್ಕು ತಿಂಗಳು ಹಾಸಿಗೆ ಹಿಡಿಯಬೇಕಿತ್ತು. ಆದರೆ ವೈದ್ಯರ ಪರಿಶ್ರಮದಿಂದ ಮತ್ತೆ ಮೊದಲಿನ ಸ್ಥಿತಿಗೆ ಬಂದಿದ್ದೇನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ ಎರಡು ಸಲ ಹೃದಯ ಚಿಕಿತ್ಸೆಗೆ ಒಳಗಾಗಿದ್ದಾನೆ. ಎರಡನೇ ಸಲ ಮುಖ್ಯಮಂತ್ರಿಯಾಗಿದ್ದ ವೇಳೆ ವಾಲ್ಮೀಕಿ ಜಯಂತಿಯ ದಿನದಂದು ಮಾಧ್ಯಮವೊಂದರಲ್ಲಿ ‘ಕರ್ನಾಟಕವನ್ನು ಕತ್ತಲೆಗೆ ತಳ್ಳಿದ ಕುಮಾರ’ ಎಂಬ ಶೀರ್ಷಿಕೆಯ ಕಾರ್ಯಕ್ರಮ ಪ್ರಸಾರವಾಗುತ್ತಿತ್ತು. ಅದರಿಂದ ಆಗ ನನ್ನ ಮನಸ್ಸಿಗೆ ಆಘಾತವಾಗಿ ಹೃದಯದ ಮೇಲೆ ತೀವ್ರ ಒತ್ತಡ ಉಂಟಾಗಿತ್ತು ಎಂದು ನೆನಪಿಸಿಕೊಂಡರು.

ಜೀವನ ಶೈಲಿ ಬದಲಿಸಿಕೊಳ್ಳಿ: ಈ ವೇಳೆ ಮಾತನಾಡಿದ ಪುತ್ರ ನಿಖಿಲ್‌ ಕುಮಾರಸ್ವಾಮಿ, ತಂದೆ-ತಾಯಿ ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲ. ಮಗನಾಗಿ ನಮ್ಮ ತಂದೆ ಅವರ ಬಳಿ ಕೇಳುವುದಿಷ್ಟೇ- ನೀವು ಜನಗಳ ಆಸ್ತಿ, ನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿ, ನಿದ್ದೆ ಮಾಡಿ ಎಂದು ಮನವಿ ಮಾಡಿದರು.

ಬಿಜೆಪಿಯ 26 ಮಂದಿ ಸಂಸದರು ಗುಲಾಮಗಿರಿಯಲ್ಲಿದ್ದಾರೆ: ಮುಖ್ಯಮಂತ್ರಿ ಚಂದ್ರು

ತಿಳಿವಳಿಕೆ ಅಗತ್ಯ: ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ವೈದ್ಯ ಡಾ.ಸತೀಶ್‌ ಚಂದ್ರ ಮಾತನಾಡಿ, ಪಾಶ್ರ್ವವಾಯು ಬಗ್ಗೆ ತಿಳಿವಳಿಕೆ ಅವಶ್ಯಕತೆ ಇದೆ. ಅದರ ಚಿಹ್ನೆಗಳನ್ನು ತಿಳಿದುಕೊಂಡ ತಕ್ಷಣ ಆಸ್ಪತ್ರೆಗೆ ಬರಬೇಕು. ಕಣ್ಣು, ಕೈ, ಮಾತುಗಳಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದರೆ ತಕ್ಷಣ ಗೋಲ್ಡನ್‌ ಅವರ್‌ನಲ್ಲಿ ಆಸ್ಪತ್ರೆಗೆ ತಲುಪಬೇಕು. ಆಗ ಚಿಕಿತ್ಸೆ ಕೊಡಲು ಅನುಕೂಲ ಆಗುತ್ತದೆ. ರಕ್ತದ ಒತ್ತಡ, ಹೃದಯದ ಕಾಯಿಲೆ, ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಸ್ಟೊ್ರೕಕ್‌ ತಡೆಯಬಹುದು ಎಂದರು. ಆಸ್ಪತ್ರೆಯ ಉಪಾಧ್ಯಕ್ಷ ಡಾ.ಗೋವಿಂದಯ್ಯ ಯತೀಶ್‌, ಚಿಕಿತ್ಸೆ ನೀಡಿದ ಡಾ.ಚಿನ್ಮಯ ನಾಗೇಶ್‌, ಡಾ.ಅನಿರುಧ್‌ ವಿಲಾಸ್‌ ಕುಲಕರ್ಣಿ, ಡಾ.ರಶ್ಮಿ ದೇವರಾಜ್‌, ಡಾ.ಅಭಿಜಿತ್‌ ವಿಲಾಸ್‌ ಕುಲಕರ್ಣಿ ಮತ್ತಿತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!