ಭೂ ಸುಧಾರಣಾ ಕಾಯ್ದೆಗೆ ಜೆಡಿಎಸ್ ಬೆಂಬಲಿಸಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ...!

By Suvarna NewsFirst Published Dec 9, 2020, 2:46 PM IST
Highlights

ಭೂ ಸುಧಾರಣೆ ಕಾಯ್ದೆಗೆ ವಿಚಾರದಲ್ಲಿ ಮೊದಲಿಗೆ ವಿರೋಧಿಸಿದ್ದ ಜೆಡಿಎಸ್, ಇದೀಗ ಚಳಿಗಾಲದ ಅಧಿವೇಶನದಲ್ಲಿ ದಿಢೀರ್ ಏಕಾಏಕಿ ಬೆಂಬಲಿಸಿದ್ದು, ಇದು ರೈತ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ, ದಿಢೀರ್ ಸರ್ಕಾರದ ಜೊತೆ ದಳಪತಿಗಳು ಕೈ ಜೋಡಿಸಿದ್ಯಾಕೆ? ಎನ್ನುವುದನ್ನು ಸ್ವತಃ ಕುಮಾರಸ್ವಾಮಿ ಅವರು ವಿವರಣೆ ನೀಡಿದ್ದಾರೆ.

ಬೆಂಗಳೂರು, (ಡಿ.9): ವಿಧಾನಪರಿಷತ್​ನಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಪರವಾಗಿ ಜೆಡಿಎಸ್ ಮತ ಹಾಕಿದ್ದು,  ಭಾರೀ ಅಚ್ಚರಿ ಹುಟ್ಟಿಸಿದೆ.

ಈ ಮೊದಲು ಜೆಡಿಎಸ್‌, ಈ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತ ವಿರೋಧವಾಗಿದೆ ಎಂದು ವಿರೋಧ ವ್ಯಕ್ತಪಡಿಸಿತ್ತು. ಆದ್ರೆ, ಇದೀಗ ಚಳಿಗಾಲದ ಅಧಿವೇಶನದಲ್ಲಿ ಏಕಾಏಕಿ ಜೆಡಿಎಸ್ ಬೆಂಬಲಿಸಿದ್ದು, ರೈತ ಸಂಘಟನೆಗಳ ಕಣ್ಣು ಕೆಂಪಾಗಿಸಿದೆ. 

ಇದೇ ವಿಚಾರವಾಗಿ ದಳಪತಿಗಳ ವಿರುದ್ಧ ಸಾಮಾಜಿ ಜಾಲತಾಣಗಳಲ್ಲಿ  ಆಕ್ರೋಶ ವ್ಯಕ್ತವಾಗುತ್ತಿದೆ. ಇದರನ್ನ ಅರಿತ ಕುಮಾರಸ್ವಾಮಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಗೆ ಜೈ ಎಂದಿರುವುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಅಂಗೀಕಾರ: ಜೆಡಿಎಸ್-ಬಿಜೆಪಿ ಮೈತ್ರಿಗೆ ನಾಂದಿ...!

ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್ ಮಾಡಿದೆ ಎಂದಿದ್ದಾರೆ.

ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಧಿಸಿದ್ದು ಜೆಡಿಎಸ್‌. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್‌ ಅನ್ನು ದೂರಲಾಗುತ್ತಿದೆ. ಜೆಡಿಎಸ್‌ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್‌ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ. 8/10

— H D Kumaraswamy (@hd_kumaraswamy)

ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು ಎಂದು ಟೀಕಿಸಿದ್ದಾರೆ. ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್ ಆರಂಭದಲ್ಲಿ ವಿರೋಧಿಸಿತ್ತು.

ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್ ಕೂಡ ಮಸೂದೆ ವಿರೋಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ಟೀಕಿಸಿದ್ದಾರೆ.

ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಸಲಾಗಿದೆ.

ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು. 2/10

— H D Kumaraswamy (@hd_kumaraswamy)

ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್ನ ಹೆಗ್ಗಳಿಕೆಯಲ್ಲವೇ? ಎಸ್ಸಿ/ಎಸ್ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಕಾಯ್ದೆಯಲ್ಲಿನ 79(ಎ, ಬಿ) ಕಲಂಗಳ ಔಚಿತ್ಯದ ಬಗ್ಗೆ ಈ ವರೆಗೆ ಶಾಸನಸಭೆಗಳ ಒಳ, ಹೊರಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರೊ. ನಂಜುಂಡಸ್ವಾಮಿ ಅವರೇ, "ಇದು ಜನರ ಸ್ವಾತಂತ್ರ್ಯ ಹರಣ ಮಾಡುತ್ತದೆ ಎಂದು ಪ್ರತಿಪಾದಿಸಿದ್ದರು. ಕೃಷಿ ಮಾಡುವ ಇಚ್ಛೆ ಇದ್ದೂ, ಕೃಷಿಕರಲ್ಲದಿದ್ದರೆ ಕೃಷಿ ಭೂಮಿ ಹೊಂದದಂತೆ ಮಾಡುತ್ತಿದ್ದ ಈ ನಿಯಮವನ್ನು ತೆಗೆದುಹಾಕಲಾಗಿದೆ.

79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮËನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್ ಎಂದು ತಿಳಿಸಿದ್ದಾರೆ.

79(ಎ, ಬಿ) ಕಲಂಗೆ ಇತಿಶ್ರೀ ಹಾಡಿರುವುದು ನಮ್ಮ ಕೃಷಿ ವ್ಯಾಪ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಯುವಕರನ್ನು ಕೃಷಿಯತ್ತ ಆಕರ್ಷಿಸಲು ಸಹಾಯಕವಾಗುತ್ತದೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಬಯಸುವವರಿಗೆ ಹಾದಿ ಸುಗಮವಾಗುತ್ತದೆ. ಸಾಂಪ್ರದಾಯಕ ಕೃಷಿಯ ಜಾಗಕ್ಕೆ ವೈದ್ದಾನಿಕ ಕೃಷಿ ಬರಲು ಅನುಕೂಲವಾಗುತ್ತದೆ. ಇದನ್ನು ಎಲ್ಲರೂ ಗಮನಿಸಬೇಕು ಎಂದಿದ್ದಾರೆ.

ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಸಿದ್ದು ಜೆಡಿಎಸ್. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್ ಅನ್ನು ದೂರಲಾಗುತ್ತಿದೆ. ಜೆಡಿಎಸ್‍ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್ ರೈತ ವಿರೋ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಮಿತಿಗಳು, ಭಿನ್ನಮತಗಳ ನಡುವೆಯೂ ರೈತರ 25 ಸಾವಿರ ಕೋಟಿಗೂ ಮಿಗಿಲಾದ ಸಾಲ ಮನ್ನಾ ಮಾಡಿದ್ದು ಇದೇ ಕುಮಾರಸ್ವಾಮಿಯೇ ಹೊರತು ಬೇರಾರೂ ಅಲ್ಲ. ಆಗ ನನ್ನನ್ನು ಯಾರೊಬ್ಬರೂ ಬೆನ್ನುತಟ್ಟಲಿಲ್ಲ, ರೈತರಿಗೆ ನೀಡಿದ ವಚನ ಪಾಲಿಸಿ, ಅಕಾರದಿಂದ ಹೊರ ನಡೆದಾಗ ನನ್ನ ಬೆಂಬಲಕ್ಕೆ ಯಾರೂ ಬರಲಿಲ್ಲ. ಈಗ ಸುಧಾರಣೆ ಕ್ರಮಗಳನ್ನು ಸಾಸಿದಾಗಲೂ ನಾನು ಏಕಾಂಗಿ ಎಂದು ಅಸಮಧಾನ ಹೊರ ಹಾಕಿದ್ದಾರೆ.

ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ ಎಂದಿದ್ದಾರೆ.

click me!