ಯಡಿಯೂರಪ್ಪನವರನ್ನು ಭೇಟಿಯಾಗಿದ್ಯಾಕೆ? ಕೊನೆಗೂ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

Published : Sep 11, 2020, 07:32 PM ISTUpdated : Sep 11, 2020, 07:35 PM IST
ಯಡಿಯೂರಪ್ಪನವರನ್ನು ಭೇಟಿಯಾಗಿದ್ಯಾಕೆ? ಕೊನೆಗೂ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ಸಾರಾಂಶ

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಕಾರಣ ಬಹಿರಂಗವಾಗಿದೆ.

ಬೆಂಗಳೂರು, (ಸೆ.11): ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದ್ದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಭೇಟಿಗೆ ಅಸಲಿ ಕಾರಣ ತಿಳಿದುಬಂದಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಮ್ಮ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಹೊರಗೆ ಕಳುಹಿಸಿ ಸುಮಾರು 25ರಿಂದ 35 ನಿಮಿಷಗಳ ಕಾಲ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿರುವುದು ರಾಜಕೀಯ ವಲದಯಲ್ಲಿ ಸಂಚಲನ ಮೂಡಿಸಿದೆ.

ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇಂದು (ಶುಕ್ರವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದು,  ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಆ ಕುತೂಹಲಕ್ಕೆ ಸ್ವತಃ ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ.

ಕುಮಾರಸ್ವಾಮಿ ಸ್ಪಷ್ಟನೆ

ನಾನು ಸಿಎಂ ಆಗಿದ್ದಾಗ ಅನುದಾನ ಕೊಟ್ಟಿದ್ದೆ. ಅದು ಬಿಡುಗಡೆ ಆಗಿರಲಿಲ್ಲ. ಅದರ ಬಗ್ಗೆ ಮನವಿ ಮಾಡಲು ಬಂದಿದ್ದೆ. ಇನ್ನು ಶಾಸಕರ ಅನುದಾನದಲ್ಲೂ ತಾರತಮ್ಯವಾಗುತ್ತಿದ್ದು, ಇದರ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಧ್ಯಮಗಳ ಮುಂದೆ ಹೇಳಿದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆಯೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಪೀಣ್ಯ ಕೈಗಾರಿಕಾ ಪ್ರದೇಶ ನಮ್ಮ ಕ್ಷೇತ್ರಕ್ಕೆ ಬರಲಿದ್ದು, ಅಲ್ಲೂ ಕೂಡ ಮಳೆಯಿಂದ ಸಮಸ್ಯೆಯಾಗಿದೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಎಚ್‍ಡಿಕೆ ಅವರೊಂದಿಗೆ ಇಲ್ಲಿಗೆ ಬಂದಿದ್ದಾಗಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ
ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ