ಬೈ ಎಲೆಕ್ಷನ್‌ಗೆ ಕೊರೋನಾ ರೂಲ್ಸ್ ಅಪ್ಲೈ ಆಗಲ್ಲವೆಂದ ಸಿಎಂಗೆ HDK ಜಬರ್ದಸ್ತ್ ಟಾಂಗ್!

Published : Mar 20, 2021, 05:41 PM IST
ಬೈ ಎಲೆಕ್ಷನ್‌ಗೆ ಕೊರೋನಾ ರೂಲ್ಸ್  ಅಪ್ಲೈ ಆಗಲ್ಲವೆಂದ ಸಿಎಂಗೆ HDK ಜಬರ್ದಸ್ತ್ ಟಾಂಗ್!

ಸಾರಾಂಶ

ಕೊರೋನಾ ನಿಯಮಗಳ ಬಗ್ಗೆ ಉಡಾಫೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ರಾಮನಗರ, (ಮಾ.20): ಉಪಚುನಾವಣೆಗೆ ಕಠಿಣ ನಿಯಮಗಳು​ ಅಪ್ಲೈ ಆಗೋದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಎಚ್‌ಡಿಕೆ ಜಬರ್ದಸ್ತ್ ತಿರುಗೇಟು ಕೊಟ್ಟಿದ್ದಾರೆ.

ಉಪಚುನಾವಣೆಗೆ ಕೊರೋನಾ ಕಠಿಣ ನಿಯಮಗಳು ಅನ್ವಯವಾಗುವುದಿಲ್ಲ. 4 ಗೋಡೆಗಳ ಮಧ್ಯೆ ನಡೆಯುವ ಸಭೆ-ಸಮಾರಂಭಗಳಿಗೆ ಮಾತ್ರ ಕಠಿಣ ನಿಯಮ ಹಾಕಿದ್ದೇವೆ ಎಂದು ಸಿಎಂ  ಬಿಎಸ್ ಯಡಿಯೂರಪ್ಪ ಅವರು ತುಮಕೂರಿನಲ್ಲಿ ಹೇಳಿಕೆ ಕೊಟ್ಟಿದ್ದಾರೆ.

ಬೈ ಎಲೆಕ್ಷನ್‌ಗೆ ಕೊರೋನಾ ಟಫ್ ರೂಲ್ಸ್ ಅನ್ವಯ ಆಗಲ್ವಂತೆ: ಸಿಎಂ ಸಾಹೇಬ್ರು ಹೇಳಿದ್ದು

ಇನ್ನು ಈ ಬಗ್ಗೆ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರವೇ ಕೊರೋನಾ ನಿಯಂತ್ರಣಕ್ಕೆ ನಿಯಮಗಳನ್ನು ಮಾಡಿ ಮತ್ತೆ ಚುನಾವಣೆಗೆ ಅನ್ವಯ ಇಲ್ಲಾ ಅಂದ್ರೆ ಹೇಗೆ..? ಏನ್ ಚುನಾವಣೆಗೆ ಕೊರೋನಾಗೆ ಹೆದರಿಕೊಂಡು ಓಡಿ ಹೋಗುತ್ತಾ..? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಉಪಚುನಾವಣೆಗೆ ಕೊರೋನಾ ನಿಯಮ ಅನ್ವಯವಾಗುವುದಿಲ್ಲ ಎಂಬ ಸಿಎಂ ಹೇಳಿಕೆಗೆ ಟಾಂಗ್​ ಕೊಟ್ಟರು.

 ಚುನಾವಣೆಯಿಂದ ಕೊರೋನಾ ಬರಲ್ವಾ..? ನಮಗೆ ಬೇಕಾದಂತೆ ನಿಯಮಗಳನ್ನು ಮಾರ್ಪಾಡು ಮಾಡಿಕೊಂಡು ಅನಾಹುತಗಳಿಗೆ ದಾರಿ ಮಾಡಿಕೊಡಬಾರದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!