ಕೇಂದ್ರದ ಮೇಲೆ ದೂರುವ ಬದಲು 6ನೇ ಗ್ಯಾರಂಟಿಯಾಗಿ ಚಾಲಕರಿಗೆ ಪರಿಹಾರ ಕೊಡಲಿ: ಹೆಚ್‌ಡಿ ಕುಮಾರಸ್ವಾಮಿ

Kannadaprabha News   | Kannada Prabha
Published : Apr 05, 2026, 04:50 AM IST
HD Kumaraswamy Hits Back at Congress Help Our auto Drivers Instead of Blaming PM Modi

ಸಾರಾಂಶ

ಎಲ್‌ಪಿಜಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಮಾಸಿಕ ₹15 ಸಾವಿರ ಪರಿಹಾರ ನೀಡಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹಿಸಿದರು.. ಯುದ್ಧದ ಪರಿಸ್ಥಿತಿ ರಾಜಕೀಯಕ್ಕೆ ಬಳಸಿಕೊಂಡು ಕೇಂದ್ರದ ಮೇಲೆ ದೂರುವುದನ್ನು ಬಿಡಲಿ ಎಂದು ತಿವಿದರು.

 ಕೊಪ್ಪಳ (ಏ.5): ಎಲ್‌ಪಿಜಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೇಂದ್ರದ ವಿರುದ್ಧ ದೂರುವ ಬದಲು ಆಟೋ ಡ್ರೈವರ್‌ಗಳ ನೆರವಿಗೆ ಬರಲಿ

ಸಿಂಧನೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದಿಂದಾಗಿ ಎದುರಾಗಿರುವ ಸಂಕಷ್ಟದಲ್ಲಿ ಕೇಂದ್ರವನ್ನು ದೂರುವ ಬದಲು ಆಟೋದವರ ನೆರವಿಗೆ ಬರುವಂತೆ ಕಾಂಗ್ರೆಸ್‌ ಸರ್ಕಾರಕ್ಕೆ ಆಗ್ರಹಿಸಿದರು. 

ಜಗತ್ತಿನಲ್ಲಿ ಯುದ್ಧ ನಡೆಯುತ್ತಿದ್ದರೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿರುವ ಎನ್‌ಡಿಎ ಸರ್ಕಾರದಿಂದ ಸಮಸ್ಯೆಯಾಗುತ್ತಿಲ್ಲ. ಈ ನಡುವೆಯೂ ಆಟೋದವರು ಗ್ಯಾಸ್ ಸಮಸ್ಯೆ ಎದುರಿಸುತ್ತಿರುವಾಗ ಟ್ಯಾಕ್ಸ್ ಹಾಕುವ ಮೂಲಕ ರಾಜ್ಯ ಸರ್ಕಾರ ಮತ್ತಷ್ಟು ಸಮಸ್ಯೆಗೆ ಸಿಲುಕಿಸಿದೆ. ಆದ್ದರಿಂದ ಆಟೋದವರು ಕೇಳುತ್ತಿರುವಂತೆ, ಅವರಿಗೆ ಮಾಸಿಕ ₹15 ಸಾವಿರ 6ನೇ ಗ್ಯಾರಂಟಿಯಾಗಿ ರಾಜ್ಯ ಸರ್ಕಾರ ನೀಡುವಂತೆ ತಿಳಿಸಿದರು.

ಯುದ್ಧದ ಸ್ಥಿತಿಯಿಂದ ಸಮಸ್ಯೆ ಎದುರಾಗಿದ್ದನ್ನೇ ರಾಜ್ಯ ಕಾಂಗ್ರೆಸ್ ನಾಯಕರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೇಂದ್ರದ ಮೇಲೆ ದೂರಿ, ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಕ್ಷಿಣದ ಭಾರತದ ಲೋಕಸಭಾ ಸ್ಥಾನಗಳ ಕಡಿತ ಇಲ್ಲ: ಪ್ರಧಾನಿ ಮೋದಿ ಮಹತ್ವದ ಹೇಳಿಕೆ
ಎರಡೂ ಕ್ಷೇತ್ರಗಳನ್ನ ನಾವೇ ಗೆಲ್ತೀವಿ, ,ಯತ್ನಾಳ್ ವಿರುದ್ಧ ಎನ್‌ಎಸ್ ಬೋಸರಾಜು ಕಿಡಿ