
ಬೆಂಗಳೂರು, (ಏ.22): ಕೊರೋನಾ ನಿಯಮಗಳಲ್ಲಿ ದಿಢೀರ್ ಬದಲಾವಣೆ ಮಾಡಿ ಅಘೋಷಿತ ಲಾಕ್ ಡೌನ್ಗೆ ಸೂಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸಿಡಿಮಿಡಿಗೊಂಡಿದ್ದಾರೆ.
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಎಲ್ಲವನ್ನೂ ಬಂದ್ ಮಾಡಿ ಆದೇಶ ಹೊರಡಿಸಿರುವುದು ತುಘ್ಲಕ್ ದರ್ಬಾರದಂತಿದೆ. ಸರ್ಕಾರದ ಈ ಹೊಸ ನಿಯಮಗಳು ಜನ ಸಾಮಾನ್ಯರನ್ನು, ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಕಿಡಿಕಾರಿದರು.
ದಿಢೀರ್ ಮಾರ್ಗಸೂಚಿ ಬದಲಾವಣೆ: ಕರ್ನಾಟಕ ಭಾಗಶಃ ಲಾಕ್
ಜನರ ಜೀವನದ ಜೊತೆ ಚೆಲ್ಲಾಟವಾಡಬೇಡಿ, ಯಾರನ್ನೋ ಮೆಚ್ಚಿಸಲು ಇಂತಹ ದೂರದೃಷ್ಟಿಯಿಲ್ಲದ ಕ್ರಮ ಕೈಗೊಳ್ಳಬೇಡಿ. ಪ್ರತಿ ಕುಟುಂಬಕ್ಕೆ ಆರೋಗ್ಯದ ರಕ್ಷಣೆಗೆ ಮುಂದಾಗಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ ಡೌನ್ ಘೋಷಿಸುವಂತೆ ನಾನು ಸರ್ಕಾರಕ್ಕೆ ಸಲಹೆ ನೀಡಿದ್ದೆ. ಅಂದು ನನ್ನ ಸಲಹೆಯನ್ನು ತಳ್ಳಿ ಹಾಕಲಾಗಿತ್ತು. ಆದರೆ, ಇಂದು ಏಕಾಏಕಿ ನಿಯಮಗಳನ್ನು ಬದಲಿಸಿ, ಪೊಲೀಸ್ ಅಧಿಕಾರಿಗಳ ಮೂಲಕ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಿ ದೌರ್ಜನ್ಯ ಎಸಗಿದ್ದಾರೆ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.