ನಿಖಿಲ್‌ನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ: ಭಾವನಾತ್ಮಕ ಮನವಿ ಮಾಡಿದ ಕುಮಾರಸ್ವಾಮಿ

Published : Oct 26, 2024, 06:53 AM IST
ನಿಖಿಲ್‌ನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ: ಭಾವನಾತ್ಮಕ ಮನವಿ ಮಾಡಿದ ಕುಮಾರಸ್ವಾಮಿ

ಸಾರಾಂಶ

ನಮ್ಮಿಂದ ಅನ್ಯಾಯ ಆಗಿದ್ದರೆ ಶಿಕ್ಷೆ ಕೊಡಿ. ಎಲ್ಲವನ್ನೂ ನಿಮ್ಮ ತೀರ್ಮಾನಕ್ಕೆ ಬಿಡುತ್ತೇನೆ. ಮಂಡ್ಯದಲ್ಲಿ ನಿಖಿಲ್‌ನನ್ನು ಕುತಂತ್ರ ಮಾಡಿ ಸೋಲಿಸಿದರು. ರಾಮನಗರದಲ್ಲೂ ಬಂದು ಬಿಲ ತೋಡಿ ಸೋಲುಣಿಸಿದರು. ಈಗ ಇಲ್ಲಿಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಚನ್ನಪಟ್ಟಣ(ಅ.26): ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು, ಇದೀಗ ನಿಖಿಲ್ ಕುಮಾರಸ್ವಾಮಿಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾವನಾತ್ಮಕ ಮನವಿ ಮಾಡಿದರು. 

ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ರೋಡ್ ಶೋನಲ್ಲಿ ಮಾತನಾಡಿ, ನಮ್ಮಿಂದ ಅನ್ಯಾಯ ಆಗಿದ್ದರೆ ಶಿಕ್ಷೆ ಕೊಡಿ. ಎಲ್ಲವನ್ನೂ ನಿಮ್ಮ ತೀರ್ಮಾನಕ್ಕೆ ಬಿಡುತ್ತೇನೆ. ಮಂಡ್ಯದಲ್ಲಿ ನಿಖಿಲ್‌ನನ್ನು ಕುತಂತ್ರ ಮಾಡಿ ಸೋಲಿಸಿದರು. ರಾಮನಗರದಲ್ಲೂ ಬಂದು ಬಿಲ ತೋಡಿ ಸೋಲುಣಿಸಿದರು. ಈಗ ಇಲ್ಲಿಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

ಎಲ್ಲಿದೆ 500 ಕೋಟಿ?: 

ಚನ್ನಪಟ್ಟಣಕ್ಕೆ ನಮ್ಮ ಕನಕಪುರದ ಸ್ನೇಹಿತರ ಕೊಡುಗೆ ಏನು? ಕಾಂಗ್ರೆಸ್‌ನಿಂದ ಅಷ್ಟು ವರ್ಷ ರಾಜಕಾರಣ ಮಾಡಿದಾಗ ಏನು ಕೊಡುಗೆ ಕೊಟ್ಟರು? ಬಿಡದಿ ಹತ್ತಿರ ಅದೇನೋ ಗ್ರೇಟರ್‌ಬೆಂಗಳೂರು ಮಾಡ್ತಾರಂತೆ. ಇವರಿಗೆ ನಾಡಿನ ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲ, ಬೆಂಗಳೂರಲ್ಲಿ ಚದರಕ್ಕೆ ಇಷ್ಟು ಎಂದು ಕಮಿಷನ್ ಪಡೆಯುತ್ತಿದ್ದಾರೆ. ಚನ್ನಪಟ್ಟಣಕ್ಕೆ 500 ಕೋಟಿ ರು. ಕೊಟ್ಟಿದ್ದೇವೆ ಅಂದರು. ಎಲ್ಲಿದೆ 500 ಕೋಟಿ, ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು. 

ಉಪಮುಖ್ಯಮಂತ್ರಿ ನಮ್ಮಲ್ಲಿ ಸಾಕ್ಷಿಗುಡ್ಡೆ ಕೇಳ್ತಾರೆ. ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ, ಎಂಜಿನಿಯರಿಂಗ್ ಕಾಲೇಜು ಮಾಡಿದ್ದು ಯಾರು? ರಾಮನಗರ ಜಿಲ್ಲೆ ಮಾಡಿದ್ದು ಯಾರು? ಈಗ ಏನೋ ಬೆಂಗಳೂರಿಗೆ ಸೇರಿಸ್ತಾರಂತೆ ಎಂದು ಡಿ.ಕೆ. ಶಿವಕುಮಾರ್‌ವಿರುದ್ಧ ಕಿಡಿಕಾರಿದರು. 

ದಾಖಲೆ ತೆಗೆಯಿರಿ: 

ಚನ್ನಪಟ್ಟಣ ಅಭಿವೃದ್ಧಿ ಮಾಡಿದ್ದು ಯಾರು ಅಂತ ದಾಖಲೆ ತೆಗೆಯಿರಿ? ಎಷ್ಟು ಸೇತುವೆ ಮಾಡಿದ್ದೇವೆ ಎಂಬ ದಾಖಲೆ ನೋಡಿ ದೇವೇಗೌಡರು ಹಾಗೂ ನಾನು ರೈತಪರ ಕೆಲಸ ಮಾಡಿದ್ದೇವೆ. ವಿಠಲೇನಹಳ್ಳಿ ಗೋಲಿಬಾರ್‌ನಲ್ಲಿ ಇಬ್ಬರು ರೈತರು ಮೃತಪಟ್ಟರು. ಯಾರಿಂದ ಗೋಲಿಬಾರ್‌ ಆಯ್ತು? ಆ ದಿನ ಇಲ್ಲಿಗೆ ಬಂದಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಕೊಡಿಸಿದ್ದು ದೇವೇಗೌಡರು. ಈಗ ನಾಲ್ಕುತಿಂಗಳಿನಿಂದ ಅವರು ಬರುತ್ತಿದ್ದಾರೆ. ಜನರಿಗೆ ಸೈಟ್ ಕೊಡ್ತೀವಿ, ಮನೆ ಕೊಡ್ತೀವಿ ಅಂತಿದ್ದಾರೆ. ಸಾಗುವಳಿ ಮಾಡಿ ಕೊಂಡು ಬಂದ ರೈತರನ್ನು ಆಚೆ ಹಾಕಿದ್ದಾರೆ ಎಂದು ಆರೋಪಿಸಿದರು. 

ಚನ್ನಪಟ್ಟಣದ ಸೈನಿಕನ ಚಕ್ರವ್ಯೂಹ ಬೇಧಿಸಲು ಅಭಿಮನ್ಯು ಕಳಿಸಿದ ಎನ್‌ಡಿಎ ಮೈತ್ರಿಕೂಟ!

ಸಿಪಿವೈ ವಿರುದ್ಧ ವಾಗ್ದಾಳಿ: 

ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದಾಗ ಚನ್ನಪಟ್ಟಣದ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾಗಿ ತಿಳಿಸಿದ್ದಾರೆ. ಆದರೆ ಭಗೀರಥ ಅಂತ ಹೆಸರು ತೆಗೆದುಕೊಂಡಿದ್ದು ಮಾತ್ರ ಅವರು, ಅದೇನೋ ಸ್ವಾಭಿಮಾನಿ ಅಂತಿದ್ದಾರೆ. ನಮ್ಮ ಸರ್ಕಾರ ತೆಗೆದಾಗ ಆ ಸ್ವಾಭಿಮಾನ ಎಲ್ಲಿತ್ತು ಅಂದು ನಾನು ಏನು ಅನ್ಯಾಯ ಮಾಡಿದ್ದೆ? ಅವರು ನಮ್ಮ ಕಾರ್ಯಕರ್ತರಿಗೆ ನೋವು ಕೊಟ್ಟರು. ಎಲ್ಲವನ್ನೂ ವಿಶ್ವಾಸಕ್ಕೆ ಪಡೆದು ನೀವೇ ನಿಲ್ಲಿ ಅಂತ ಈಗಿನ ಕಾಂಗ್ರೆಸ್ ಅಭ್ಯರ್ಥಿಗೆ ಹೇಳಿದ್ದೆ. ಆದರೆ ಅವರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಉಳಿಸಿದ್ದೇ ನಾನು, ಮಂಜುನಾಥ್ ಗೆಲ್ಲಿಸಿದ್ದೇ ನಾನು ಅಂತ ಹೇಳಿಕೊಂಡು ಓಡಾಡ್ತಿದ್ದಾರೆ ಎಂದು ಯೋಗೇಶ್ವ‌ರ್ ವಿರುದ್ಧ ಕಿಡಿಕಾರಿದರು. 

ಟೋಪಿ ಹಾಕಿಹೋದ್ರು: 

ಉಪಚುನಾವಣೆಯಲ್ಲಿ ನಿಲ್ಲಲು ನಾವು ಅವರಿಗೆ ಅನುಮತಿ ಕೊಟ್ಟಿದ್ದೆವು. ಆದರೆ ನಮಗೆ, ಬಿಜೆಪಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದ್ದಾರೆ. ಚನ್ನಪಟ್ಟಣದ ಜನ ಮಾಡುವ ಆಶೀ ರ್ವಾದ ರಾಜ್ಯದಲ್ಲಿ ಬದಲಾವಣೆ ತರುತ್ತೆ. ನನಗೆ ಆರೋಗ್ಯದ ಸಮಸ್ಯೆ ಇದ್ದರೂ ಕೆಲಸ ಮಾಡ್ತಿದ್ದೇನೆ. ದೇಶ ಸುತ್ತುತ್ತಿದ್ದೇನೆ, ಮೋದಿ ಕೊಟ್ಟಿರೋ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಪ್ರೆಗ್ನಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ - ಯುವತಿ ಆತ್ಮ*ಹತ್ಯೆ