
ರಾಯಚೂರು, (ಡಿ.02): 1 ತಿಂಗಳಲ್ಲಿ ಎಚ್ ಡಿ ಕುಮಾರಸ್ವಾಮಿಯವರ ಭೂಹಗರಣ ಸಂಪೂರ್ಣ ದಾಖಲೆ ಬಿಚ್ಚಿಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ.
ರಾಯಚೂರಿನಲ್ಲಿ ಇಂದು (ಬುಧವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಬಾಂಬ್ ಸಿಡಿಸಿದರು.
ರಾಮನಗರ : ಹಿರೇಮಠ್ ಮೇಲೆ ಹಲ್ಲೆಗೆ ಯತ್ನ
ಮಾದೇಗೌಡರು ಎಚ್ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು.
ಕಾಫಿ ಡೇ ಹಗರಣ ಕುರಿತು ಸಿಬಿಐ ನಿವೃತ್ತ ಡಿಐಜಿ ಅಶೋಕ್ ಮಲ್ಹೋತ್ರ ವರದಿ ನೀಡಿದ್ದಾರೆ. ಆದರೆ, ವರದಿಯಲ್ಲಿ ಅನೇಕ ಭ್ರಷ್ಟರ ,ಭ್ರಷ್ಟತನದ ಉಲ್ಲೇಖವಿಲ್ಲ. ಡಿಕೆಶಿ, ಮಾಳವಿಕ ಹೆಗಡೆ ಸೇರಿ ಅನೇಕರು ಸಾರ್ವಜನಿಕ ಹಣ ಲೂಟಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಹಗರಣದ ಬಗ್ಗೆ ಗಂಭೀರವಾದ ತನಿಖೆ ನಡೆದಿಲ್ಲ. ನಿವೃತ್ತ ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಕಾಫೀ ಡೇ ಚೆರ್ಮನ್ ಆಗಿದ್ದಾರೆ. ರಂಗನಾಥ್ ಎಷ್ಟು ಪ್ರಮಾಣಿಕರೋ ಗೊತ್ತಿಲ್ಲ, ತನಿಖೆ ಸರಿಯಾಗಿ ನಡೆದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.