ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ಸಭೆಯಲ್ಲಾದ ಮಹತ್ವದ ಚರ್ಚೆ ಬಗ್ಗೆ HDK ಹೇಳಿದ್ದಿಷ್ಟು...!

Published : Jun 05, 2020, 04:32 PM ISTUpdated : Jun 05, 2020, 05:46 PM IST
ರಾಜ್ಯಸಭಾ ಎಲೆಕ್ಷನ್:  ಜೆಡಿಎಸ್‌ ಸಭೆಯಲ್ಲಾದ ಮಹತ್ವದ ಚರ್ಚೆ ಬಗ್ಗೆ HDK ಹೇಳಿದ್ದಿಷ್ಟು...!

ಸಾರಾಂಶ

ಕರ್ನಾಟಕದಲ್ಲಿ ತೆರವಾಗಲಿರುವ ನಾಲ್ಕು ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳಲ್ಲಿ ರಾಜ್ಯ ಲೆಕ್ಕಾಚಾರ ಜೋರಾಗಿದೆ. ಇನ್ನು ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಸಿದ್ದು ಹೀಗೆ

ಬೆಂಗಳೂರು, (ಜೂನ್.05): ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆ ಗರಿಗೆದರಿದೆ. 

ಇನ್ನು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಇಂದು (ಶುಕ್ರವಾರ) ಶಾಸಕಾಂಗ ಸಭೆ ನಡೆಸಿತು. ಸಭೆ ಬಳಿಕ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,  ರಾಜ್ಯಸಭೆಗೆ ದೇವೇಗೌಡರೇ ನಿಲ್ಲಬೇಕು ಅಂತ ಪಕ್ಷದ ವತಿಯಿಂದ ಎಲ್ಲಾ ಶಾಸಕರ ಒತ್ತಾಯ ಆಗಿದೆ. ಆದ್ರೆ, ದೇವೇಗೌಡ್ರು ರಾಜಸಭೆಗೆ ನಿಲ್ಲುವ ಬಗ್ಗೆ ಇದುವರೆಗು ಒಪ್ಪಿಗೆ ಕೊಟ್ಟಿಲ್ಲ ಎಂದರು.

"

ರಾಜ್ಯಸಭಾ ಚುನಾವಣೆಗೆ ದೇವೇಗೌಡ ಬಹುತೇಕ ಫೈನಲ್: ಇಲ್ಲಿದೆ ಜೆಡಿಎಸ್ ಲೆಕ್ಕಾಚಾರ .

 ಅವರ ದುಡಿಮೆ ಹಾಗೂ  ದೇಶದ ಪರಿಸ್ಥಿತಿಯಿಂದ ಅವರ ಅವಶ್ಯಕತೆ ಇದೆ. ದೇವೇಗೌಡ್ರು ಅನುಭವಿ ರಾಜಕಾರಣಿ ದೆಹಲಿಗೆ ಹೋಗಬೇಕೆಬುಂದು ಶಾಸಕರ ಒತ್ತಡ ಇದೆ. ಕಾಂಗ್ರೆಸ್ ನಿಂದ ಒಂದು ಅಭ್ಯರ್ಥಿಯನ್ನ ಗೆಲ್ಲಿಸಿಕೊಳ್ಳುಬಹುದು ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳಬಹುದು. ಮೂರನೇ ಅಭ್ಯರ್ಥಿಯನ್ನು ಹಾಕುವುದಕ್ಕೆ ಬಿಜೆಪಿ ಕಾಂಗ್ರೆಸ್  ಪಕ್ಷಕ್ಕೆ ಸಂಖ್ಯೆಯ ಕೊರತೆ ಇದೆ. ದೇವೇಗೌಡರು ಅಭ್ಯರ್ಥಿಯಾಗಲು ಒಪ್ಪಿಗೆ ಕೊಟ್ಟ ನಂತರ ಯಾರ ಬಳಿ ಬೆಂಬಲ ಕೇಳಬೇಕೆಂಬ ಪ್ರಶ್ನೆ. ಸದ್ಯಕ್ಕೆ ಆ ಪ್ರಶ್ನೆ ಇನ್ನೂ ಎದುರಾಗಿಲ್ಲ ಎಂದು ಹೇಳಿದರು.

ಒಟ್ಟಾರೆ ಕುಮಾರಸ್ವಾಮಿ ಅವರ ಮಾತಿನ ಅರ್ಥ ಗಾಳಿ ಬಂದ ಕಡೆ ತೂರಿಕೊಳ್ಳಬೇಕೆನ್ನುವ ಯೋಚನೆಯಲ್ಲಿದ್ದಾರೆ. ಇತ್ತ ಬಿಜೆಪಿಗೂ ಸೈ ಇಲ್ಲ ಕಾಂಗ್ರೆಸ್ ಜೈ ಎನ್ನುವ ಪ್ಲಾನ್ ಮಾಡುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ