
ಮಂಡ್ಯ, (ಜ.10): ಸಿನಿಮಾ ವಿಚಾರವಾಗಿಯಲ್ಲದೇ, ಬೇರೆ ಯಾವ ಕಾರಣಕ್ಕೂ ಎಲ್ಲಿಯೂ ಕಾಣಿಸಿಕೊಳ್ಳದ ಸ್ಯಾಂಡಲ್ವುಡ್ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಇದೀಗ ವಂಚಕ ಯುವರಾಜನ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಒಳಗಾಗಿದ್ದಾರೆ.
"
ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಕೆಲವು ದಿನಗಳಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಎಚ್ಡಿ ಕುಮಾರಸ್ವಾಮಿ ಮೌನ ಮುರಿದಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಹೆಸರಲ್ಲಿ ಕೋಟಿಗಟ್ಟಲೆ ಆಸ್ತಿ, ಲೆಕ್ಕಕ್ಕೆ ಸಿಕ್ಕಿದ್ದಿಷ್ಟು!
ಹೌದು... ಇಂದು (ಭಾನುವಾರ) ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮಕ್ಕೆ ಕುಮಾರಸ್ವಾಮಿ ಭೇಟಿ ಕೊಟ್ಟರು. ಈ ವೇಳೆ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ವಿಚಾರವಾಗಿ ಮಾಧ್ಯಮದವರು ಎಚ್ಡಿಗೆ ಅಭಿಪ್ರಾಯ ಕೇಳಿದ್ದಾರೆ.
ಇದಕ್ಕೆ ಕುಮಾರಸ್ವಾಮಿ, ಯಾರಪ್ಪ ಅದು.. ಅವರು ಯಾರು ಅಂತ ಗೊತ್ತಿಲ್ಲ.. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ. ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಕಾಲ್ಕಿತ್ತರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.