ಬಿಎಸ್‌ವೈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಕುಮಾರಸ್ವಾಮಿ....!

Published : Sep 23, 2020, 07:30 PM IST
ಬಿಎಸ್‌ವೈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಕುಮಾರಸ್ವಾಮಿ....!

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಬೆಂಗಳೂರು, (ಸೆ.23): ಎಪಿಎಂಸಿ ಕಾಯ್ದೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಎಪಿಎಂಸಿ ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

 ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭವಿದು. ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಜಾರಿ ಏಕೆ? ತರಾತುರಿಯಲ್ಲಿ ಕಾಯ್ದೆ ಜಾರಿ ಮಾಡುವ ಅಗತ್ಯವೇನಿದೆ? ಮೇ ನಲ್ಲಿ ಸುಗ್ರೀವಾಜ್ಞೆ ತಂದಿದ್ದಾರೆ. ಇದಾದ ಬಳಿಕ ಸಾಕಷ್ಟು ಸಮಯಾವಕಾಶ ಇತ್ತು. ಯಾವ ವಿರೋಧ ಪಕ್ಷದವರನ್ನ ಕರೆದು ಇವರು ಮಾತನಾಡಿದ್ದಾರೆ? ಸಾವಿರಾರು ರೈತರು ಬೆಂಗಳೂರಲ್ಲಿ ಧರಣಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸುಗ್ರಿವಾಜ್ಞೆ ಹಿಂಪಡೆಯಿರಿ, ಇಲ್ಲ ಉಗ್ರ ಹೋರಾಟ ಎದುರಿಸಿ: ಸರ್ಕಾರಕ್ಕೆ ರೈತರ ವಾರ್ನಿಂಗ್

ಪ್ರತಿಭಟನಾ ಸ್ಥಳದಲ್ಲಿ ದೈಹಿಕ ಅಂತರ ಪಾಲನೆಯಾಗುತ್ತಿಲ್ಲ. ಈ ಪರಿಸ್ಥಿತಿಗೆ ರೈತರನ್ನ ತಳ್ಳಿದವರು ಯಾರು? ಈ ವಿಚಾರದಲ್ಲಿ ಸಚಿವರು ಲಘುವಾಗಿ ಮಾತನಾಡ್ತಿದ್ದಾರೆ. ಮುಂದಾಗುವ ದುಷ್ಪರಿಣಾಮಗಳಿಗೆ ಸರ್ಕಾರವೇ ಹೊಣೆ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟರು. 

ಬಿಹಾರದಲ್ಲಿ ಈ ಕಾಯ್ದೆ ವಾಪಸ್ ಪಡೆಯಲಾಗಿದೆ. ಕೊರೋನಾ ಸಂದರ್ಭದಲ್ಲಿ ತರಾತುರಿಯಲ್ಲಿ ತರಬೇಕಿತ್ತಾ? 6 ತಿಂಗಳು ಮುಂದೂಡಿದ್ರೆ ಏನಾಗ್ತಿತ್ತು ಎಂದು ಸರ್ಕಾರವನ್ನು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ