ಸಿಎಂ ಬದಲಾವಣೆ ವಿಚಾರದಲ್ಲಿ ದೇವೇಗೌಡ್ರ ಕುಟುಂಬ ಎಳೆಯುವುದು ಬೇಡ: ಎಚ್‌ಡಿಕೆ ಮನವಿ

Published : Jun 14, 2021, 05:27 PM IST
ಸಿಎಂ ಬದಲಾವಣೆ ವಿಚಾರದಲ್ಲಿ ದೇವೇಗೌಡ್ರ ಕುಟುಂಬ ಎಳೆಯುವುದು ಬೇಡ: ಎಚ್‌ಡಿಕೆ ಮನವಿ

ಸಾರಾಂಶ

* ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ  * ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ * ಕುಟುಂಬವನ್ನು ಎಳೆದು ತರುವುದು ಸರಿಯಲ್ಲ ಎಂದ ಎಚ್‌ಡಿಕೆ

ಮಂಡ್ಯ, (ಜೂನ್.14): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಗರಿಗೆದರಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯದ ಹನಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಎಳೆದು ತರುವುದು ಸರಿಯಲ್ಲ. ನಾವು ಯಾರ ಪರವಾಗಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಹತ್ವದ ನಿರ್ಧಾರ ಕೈಗೊಂಡ ಶಾಸಕರ ನಿಯೋಗ: ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಕೆ ಬಿರುಸು

ಜೆಡಿಎಸ್ ಹಾಗೂ ದೇವೇಗೌಡರನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಹಲವಾರು ವರ್ಷಗಳಿಂದ ದುರ್ಬಳಕೆ ಮಾಡಿಕೊಂಡಿವೆ. ಕೊರೋನಾದಂಥ ಸಮಯವಲ್ಲಿ ರಾಜಕೀಯ ಮಾಡಬಾರದು ಎಂದು ಮೌನವಾಗಿದ್ದೇವೆ. ಮುಂದಿನ ದಿನಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಲಾಗುವುದು. ಅಲ್ಲಿಯವರೆಗೂ ನಾವು ತಾಳ್ಮೆಯಿಂದ ಇರುತ್ತೇವೆ ಎಂದರು.

ಯಾರು ಮುಖ್ಯಮಂತ್ರಿಯಾಗಿ ಇರುತ್ತಾರೋ ಅದು ನಮಗೆ ಸಂಬಂಧವಿಲ್ಲದ ವಿಷಯವಾಗಿದೆ. ನಾಡಿನ ರಕ್ಷಣೆ ಮಾಡುವುದರ ಕಡೆ ಅಧಿಕಾರದಲ್ಲಿರುವವರು ಗಮನ ಕೊಡಬೇಕು. ಕೊರೋನಾವನ್ನು ನಿಯಂತ್ರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್