ರಾಮನಗರದಲ್ಲಿ ಜೆಡಿಎಸ್‌ ಸೋಲಿಸಲು ಪ್ಲಾನ್: ಆತಂಕ ವ್ಯಕ್ತಪಡಿಸಿದ ಎಚ್‌ಡಿಕೆ

Published : Apr 05, 2021, 09:51 PM ISTUpdated : Apr 05, 2021, 10:02 PM IST
ರಾಮನಗರದಲ್ಲಿ ಜೆಡಿಎಸ್‌ ಸೋಲಿಸಲು ಪ್ಲಾನ್: ಆತಂಕ ವ್ಯಕ್ತಪಡಿಸಿದ ಎಚ್‌ಡಿಕೆ

ಸಾರಾಂಶ

ರಾಮನಗರದಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಹುನ್ನಾರ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಆತಂಕಪಡಿಸಿದ್ದಾರೆ.

ರಾಮನಗರ, (ಏ.05): ಕಾಂಗ್ರೆಸ್ ಮುಖಂಡರ ವಕ್ರ ದೃಷ್ಟಿ ನಮ್ಮ ಕ್ಷೇತ್ರಕ್ಕೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಸ್ವತಃ ನಾನೇ ಚುನಾವಣಾ ಅಖಾಡಕ್ಕೆ ಇಳಿದಿದ್ದೇನೆ" ಎಂದು ಮಾಜಿ ಮುಖ್ಯಮಂತ್ರಿ‌ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ರಾಮನಗರ, ಚನ್ನಪಟ್ಟಣ ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ರಾಮನಗರದಲ್ಲಿ ಅಲ್ಪಸಂಖ್ಯಾತ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು. "ಈ ಹಿಂದೆ ನಡೆಯುತ್ತಿದ್ದ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಥಳೀಯ ಮುಖಂಡರು ನೇತೃತ್ವ ವಹಿಸುತ್ತಿದ್ದರು. ಆದರೆ ಈ ಭಾರಿ ಈ ಕ್ಷೇತ್ರದ ಮೇಲೆ ಕೆಲ ಕಾಂಗ್ರೆಸ್ ಮುಖಂಡರ ವಕ್ರ ದೃಷ್ಟಿ ಬಿದ್ದಿದೆ" ಎಂದು ಕುಮಾರಸ್ವಾಮಿ ಆರೋಪಿಸಿದರು.

ಆರೋಪಗಳ ಸುರಿಮಳೆ : ಜನರಲ್ಲಿ ಮನವಿ ಮಾಡ್ಕೊಂಡ ಶಾಸಕಿ ಅನಿತಾ

ಹೇಗಾದರೂ ಮಾಡಿ ರಾಮನಗರದಲ್ಲಿ ಜೆಡಿಎಸ್ ಸೋಲಿಸುವ ಹುನ್ನಾರ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ನಾನು ಅದಕ್ಕೆ ಅವಕಾಶ ನೀಡುವುದಿಲ್ಲ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಪ್ರಸ್ತುತ ರಾಮನಗರ ಶಾಸಕಿಯಾಗಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಇದ್ದಾರೆ. ಆದ್ರೆ, ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಬೆಂಗಳೂರು - ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!