ಶಿವರಾತ್ರಿ ಬಳಿಕ ಕುಮಾರಸ್ವಾಮಿ ದಿಲ್ಲಿಗೆ: ಸೀಟು ಹಂಚಿಕೆ ಚರ್ಚೆ

Published : Mar 07, 2024, 06:37 AM IST
ಶಿವರಾತ್ರಿ ಬಳಿಕ ಕುಮಾರಸ್ವಾಮಿ ದಿಲ್ಲಿಗೆ: ಸೀಟು ಹಂಚಿಕೆ ಚರ್ಚೆ

ಸಾರಾಂಶ

ಕುಮಾರಸ್ವಾಮಿ ಈಗಾಗಲೇ ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೆಡಿಎಸ್‌ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಬಗ್ಗೆ ಮೈತ್ರಿ ಪಕ್ಷಗಳು ಸಮೀಕ್ಷೆ ನಡೆಸಿದ್ದು, ಅದಕ್ಕಗನುಗುಣವಾಗಿ ಹಂಚಿಕೆಯಾಗಲಿದೆ ಎನ್ನಲಾಗಿದೆ.

ಬೆಂಗಳೂರು(ಮಾ.07):  ಸೀಟು ಹಂಚಿಕೆ ಸಂಬಂಧ ಅಂತಿಮ ಹಂತದ ಮಾತುಕತೆ ನಡೆಸುವ ಸಲುವಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಶಿವರಾತ್ರಿ ಹಬ್ಬ ಬಳಿಕ ದೆಹಲಿಗೆ ಪ್ರಯಾಣಿಸಲಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸೀಟು ಹಂಚಿಕೆ ಕುರಿತು ಪ್ರಕಟಿಸಲಾಗುವುದು ಎಂದು ಮೂಲಗಳು ಹೇಳಿವೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಉಭಯ ಪಕ್ಷಗಳು ಕಾರ್ಯತಂತ್ರ ರೂಪಿಸುವಲ್ಲಿ ನಿರತವಾಗಿವೆ. ನಾಲ್ಕೈದು ಸ್ಥಾನಗಳಿಗೆ ಜೆಡಿಎಸ್‌ ಬೇಡಿಕೆ ಇಟ್ಟಿದೆ. ಸದ್ಯಕ್ಕೆ ಹಾಸನ ಕ್ಷೇತ್ರ ಮಾತ್ರ ಜೆಡಿಎಸ್‌ನ ಹಿಡಿತದಲ್ಲಿದ್ದು, ಇನ್ನಾವುದೇ ಕ್ಷೇತ್ರದಲ್ಲಿಯೂ ಜೆಡಿಎಸ್‌ ಪಾರುಪತ್ಯ ಇಲ್ಲ. ಈ ಬಾರಿ ಮಂಡ್ಯ ಕ್ಷೇತ್ರವು ಕೇಂದ್ರ ಬಿಂದುವಾಗಿದ್ದು, ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಹಾಲಿ ಸಂಸದೆ ಸುಮಲತಾ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಜೆಡಿಎಸ್‌ ಸಹ ಈ ಕ್ಷೇತ್ರ ಬಿಟ್ಟುಕೊಡುವಂತೆ ಒತ್ತಾಯಿಸಿದೆ. ಇನ್ನು, ತುಮಕೂರು ಕ್ಷೇತ್ರಕ್ಕೆ ಬಿಜೆಪಿಯಲ್ಲಿಯೇ ಪೈಪೋಟಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹೊರತು ಪಡಿಸಿ ಜೆಡಿಎಸ್‌ಗೆ ಯಾವ ಕ್ಷೇತ್ರಗಳು ಲಭಿಸಲಿವೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಜೆಡಿಎಸ್ ಎಲ್ಲಿದೆ? ಬಿಜೆಪಿ ಸ್ಪೋಕ್ಸ್ ಪರ್ಸನ್ ಆದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಈಗಾಗಲೇ ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೆಡಿಎಸ್‌ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಬಗ್ಗೆ ಮೈತ್ರಿ ಪಕ್ಷಗಳು ಸಮೀಕ್ಷೆ ನಡೆಸಿದ್ದು, ಅದಕ್ಕಗನುಗುಣವಾಗಿ ಹಂಚಿಕೆಯಾಗಲಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ