ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣಕ್ಕೆ ಪೂಜೆ: ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ

Published : Sep 01, 2021, 04:19 PM IST
ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣಕ್ಕೆ ಪೂಜೆ: ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ

ಸಾರಾಂಶ

* ಮಂಡ್ಯದಲ್ಲಿ ಸಂಸದೆ ಸುಮಲತಾ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ *  ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣ  * ಇದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ

ಮಂಡ್ಯ, (ಸೆ.01):  ಜನರಿಗೆ ಮಾತು ಕೊಟ್ಟಂತೆ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಜಿಲ್ಲೆಯಲ್ಲಿ ಸ್ವತಃ ಮನೆ ನಿರ್ಮಿಸಲು ಇಂದು(ಸೆ.01) ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

 ಇದೇ ವೇಳೆ ಸುಮಲತಾ ಅವರು ಸ್ವತಃ ನಿವಾಸ ನಿರ್ಮಿಸುವುದರ ಹಿಂದೆ ಪುತ್ರ ಅಭಿಷೇಕ್​ ಅವರ ರಾಜಕೀಯ ಭವಿಷ್ಯದ ಚಿಂತನೆ ದೂರದೃಷ್ಟಿ ಇದೆ ಎಂಬ ಮಾತು ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

ಮಂಡ್ಯದಲ್ಲಿ ಸಂಸದೆ ಸುಮಲತಾ ನೂತನ ಮನೆ ನಿರ್ಮಾಣ

ಇನ್ನು ಈ ಬಗ್ಗೆ ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಸುಮಲತಾ ಮನೆ ನಿರ್ಮಾಣ ವಿಚಾರ ಕೇಳಿ ಸಂತೋಷ ಆಗಿದೆ. ಮಂಡ್ಯದಲ್ಲಿ ನಮ್ಮ ಮೇಲಿನ ಒತ್ತಡ ಕಡಿಮೆ ಆಗಿದೆ. ಜನರ ಸಂಪರ್ಕದಲ್ಲಿದ್ದು ಅಭಿವೃದ್ಧಿ ಮಾಡಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಇನ್ನು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮನೆ ನಿರ್ಮಿಸುವ ವಿಚಾರದ ಬಗ್ಗೆ ಮಾತನಾಡಿದ ಹೆಚ್​ಡಿಕೆ, ಜನಪ್ರತಿನಿಧಿಗಳು ಕ್ಷೇತ್ರದಲ್ಲಿ ಮನೆ ಮಾಡುವುದು ಮುಖ್ಯವಲ್ಲ. ಜನರ ಕಷ್ಟಗಳಿಗೆ ಸ್ಪಂದಿಸುವುದು ಬಹಳ ಮುಖ್ಯವಾಗಿರುತ್ತದೆ. ನಾನು ರಾಮನಗರದಲ್ಲಿ ಮನೆ ನಿರ್ಮಾಣ ಮಾಡಿಲ್ಲ. ಸಾ.ರಾ.ಮಹೇಶ ಕೆ.ಆರ್.ನಗರದಲ್ಲಿ ಮನೆ ನಿರ್ಮಾಣ ಮಾಡಿಲ್ಲ. ಮನೆ ನಿರ್ಮಾಣ ಮಾಡದಿದ್ದರೂ ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!