ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಘೋಷಿಸಿದ ಕುಮಾರಸ್ವಾಮಿ

Published : Jan 24, 2021, 03:23 PM ISTUpdated : Jan 24, 2021, 03:27 PM IST
ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಘೋಷಿಸಿದ ಕುಮಾರಸ್ವಾಮಿ

ಸಾರಾಂಶ

ಮುಂಬರುವ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.

ಬೆಂಗಳೂರು, (ಜ.24): 2023ರಲ್ಲಿ ನಡೆಯಲಿರುವ ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ.

ಶತಾಯಗತಾಯ ಜೆಡಿಎಸ್​ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ನಿರತರಾಗಿದ್ದು, ಚುನಾವಣೆಗೆ ಇನ್ನೂ 2 ವರ್ಷ ಸಮಯ ಬಾಕಿ. ಆಗಲೇ ಕೆಲ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.​ 

ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ಒತ್ತು, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!

ಹೌದು...  ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಸತಃ ಕುಮಾರಸ್ವಾಮಿಯೇ ಇಂದು (ಭಾನುವಾರ) ಘೋಷಿಸಿದರು.

ಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಆನೇಕಲ್​ ಮತ್ತು ಬೆಂ.ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್​ಡಿಕೆ, ಆನೇಕಲ್​ನಿಂದ ಕೆ.ಪಿ.ರಾಜು ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಭಾಕರ್​ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಆಪ್ತ ಜೆಡಿಎಸ್‌ಗೆ ರಾಜೀನಾಮೆ: ಪಕ್ಷದ ಮತ್ತೊಂದು ಪ್ರಮುಖ ವಿಕೆಟ್ ಪತನ

ಮುಂಬರುವ ಚುನಾಣೆಗೆ ಈ ಎರಡೂ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್​ ಪ್ರಕಟಿಸಿದ್ದು, ಇಲ್ಲಿನದ್ದೇ ರಾಜ್ಯದಲ್ಲಿ ಮೊದಲು. ಕಳೆದ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆಯಿಂದ ನಮಗೆ ತೊಂದರೆ ಆಯಿತು. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಮುಂದಿನ ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ