ರಾಜ್ಯ ಈ ಪರಿಸ್ಥಿತಿ ಬರೋದಕ್ಕೆ ಮೂಲ ಕಾರಣ ಸಿದ್ದರಾಮಯ್ಯ: ಹೆಚ್‌ಡಿಕೆ

Published : Mar 27, 2022, 08:26 PM IST
ರಾಜ್ಯ ಈ ಪರಿಸ್ಥಿತಿ ಬರೋದಕ್ಕೆ ಮೂಲ ಕಾರಣ ಸಿದ್ದರಾಮಯ್ಯ: ಹೆಚ್‌ಡಿಕೆ

ಸಾರಾಂಶ

ಇನ್ಮುಂದೆ ಸಿದ್ದರಾಮಯ್ಯನ ಆಟ ನಡೆಯೋದಿಲ್ಲ, ಬಿಜೆಪಿಯ ಬಿ ಟೀಂ ಅಂದ್ರೆ ಮುಸಲ್ಮಾನರು ನಂಬೋದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವರದಿ: ದೀಪಕ್, ಏಷ್ಯಾನೆಟ್ ಸುವರ್ಣ ನ್ಯೂಸ್ 

ಕೋಲಾರ(ಮಾ.27): ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (H D kumaraswamy) ಪ್ರತಿಕಿಯೆ ನೀಡಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ನ ವಿವಾದ ಕುರಿತು ಪ್ರತಿಕ್ರಿಯೆ ನೀಡಿದ ಅವರು ಪಿಯುಸಿ ಹಾಗು ಎಸೆಸೆಲ್ಸಿ ಮಕ್ಕಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪರೀಕ್ಷೆ ಬರಿಯಲು ಮುಕ್ತವಾದ ಅವಕಾಶ ನೀಡಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು.

ಮುಸ್ಲಿಂ ಸಮುದಾಯದ ಅಂಗಡಿಗಳು ಮುಚ್ಚುವ ಕೆಲಸ ನಡೆಯುತ್ತಿದೆ. ಕರ್ನಾಟಕದಲ್ಲಿ ಈ ಪರಿಸ್ಥಿತಿ ಬರುತ್ತೆ ಎಂದು ಊಹಿಸಿರಲಿಲ್ಲ. ರಾಜ್ಯ ಈ ಪರಿಸ್ಥಿತಿ ಬರೋದಕ್ಕೆ ಮೂಲ ಕಾರಣ ಸಿದ್ದರಾಮಯ್ಯ. ಇಷ್ಟ ಇಲ್ಲದೆ ಇದ್ರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ. ಶಾಲಾ ಕಾಲೇಜುಗಳಲ್ಲಿ ಉಂಟಾಗಿದ್ದು ಇನ್ನೇನು ಒಂದು ಹಂತಕ್ಕೆ ಬಂದು ತಲುಪಿತ್ತು. ಈಗ ಅಂಗಡಿ ತೆರವುಗೊಳಿಸುವ ಕೆಲಸ ಶುರುವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಸಮಾಜದ ಸಾಮರಸ್ಯ ಹಾಳು ಮಾಡ್ತಿವೆ. ಅಮಾಯಕ ಮಕ್ಕಳ ಭವಿಷ್ಯಕ್ಕೆ ಕುತ್ತು ತರ್ತಿದ್ದಾರೆ. 

ಕರ್ನಾಟಕದಲ್ಲಿ ಜೆಡಿಎಸ್ ಎಲ್ಲಿದೆ? : ತೇಜಸ್ವಿ ಸೂರ್ಯ

ಸಿದ್ದರಾಮಯ್ಯನ (siddaramaiah) ನಂಬಿದ್ರೆ ಆಗೋದಿಲ್ಲ ಅಂತ ಮುಸಲ್ಮಾನರಿಗೂ ಗೊತ್ತಾಗಿದೆ. ನಾವು ಬೀದಿಗೆ ಬಂದಿದ್ದೇವೆ ಅಂತ ಅವರಿಗೆ ಗೊತ್ತಾಗಿದೆ. ಇನ್ಮುಂದೆ ಸಿದ್ದರಾಮಯ್ಯನ ಆಟ ನಡೆಯೋದಿಲ್ಲ, ಬಿಜೆಪಿಯ ಬಿ ಟೀಂ ಅಂದ್ರೆ ಮುಸಲ್ಮಾನರು ನಂಬೋದಿಲ್ಲ. ಮುಂದಿನ 10 ವರ್ಷ ನಮ್ಮದೇ ಸರ್ಕಾರ 2014 ಬಿಜೆಪಿ ಹಾಗು ಸಿದ್ದರಾಮಯ್ಯ ಸಹ ಹೇಳಿದ್ರು,ಏನಾಯ್ತು ಎಂದು? ಬಿಜೆಪಿಗೆ (BJP) 105 ಸೀಟ್ ಬರೋದಕ್ಕೆ ಕಾರಣ ಸಿದ್ದರಾಮಯ್ಯ. ನಮ್ಮನು ಬಿಜೆಪಿಯ ಬಿ ಟೀಂ ಅಂದಿದ್ಕೆ ಬಿಜೆಪಿ ಗೆ 105 ಸೀಟ್ ಬಂದಿದ್ದ ಎಂದರು.

ಸಂಸದ ತೇಜಸ್ವಿ ಸೂರ್ಯ ಸೈಕಲ್ ಜಾತ ಕುರಿತು: ಸಂಸದ ತೇಜಸ್ವಿ ಸೂರ್ಯ (tejasvi surya) ಬೆಂಗಳೂರು - ಕೋಲಾರ ಸೈಕಲ್ ಜಾತ ಮಾಡ್ತಿದ್ದಾರೆ, ಏನೂ ಸಂದೇಶ ಕೊಡೋದಕ್ಕೆ ಸೈಕಲ್ ಜಾತಾ ಮಾಡ್ತಿದ್ದಾರೆ. ಕೋಲಾರ ಜಿಲ್ಲೆಗೆ ಬೆಂಕಿ ಹಚ್ಚೋದಕ್ಕೆ ಬರ್ತಿದೀರಾ ? ಹಿಂದೂ - ಸಮುದಾಯದ ಇಲ್ಲಿ ಒಟ್ಟಾಗಿ ಬಾಳುತ್ತಿದ್ದಾರೆ ಎಂದರು.

ಸಿದ್ದರಾಮಯ್ಯಗೆ ಮಾನಸಿಕ ಖಿನ್ನತೆ: ಶ್ರೀರಾಮುಲು ವಾಗ್ದಾಳಿ

ನನಗಿಲ್ಲಾ ಆಗ ತಲೆಯಲ್ಲಿ ಕೂದಲು ಇತ್ತು: ಕೋಲಾರ - ಚಿಕ್ಕಬಳ್ಳಾಪುರ ಎತ್ತಿನಹೊಳೆ ಯೋಜನೆ ಕುರಿತು ಮಾತನಾಡಿದ ಕುಮಾರಸ್ವಾಮಿ. ಕೋಲಾರ - ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು ಕೊಡ್ತೇನೆ ಎಂದು 2014 ರಲ್ಲಿ ಹೇಳಿದ್ರು ಇನ್ನೊಂದು ವಷ೯ದಲ್ಲಿ ಏನಾದ್ರು ನೀರು ಕೊಟ್ರೆ ನಾನು ತಲೆ ಬೋಳಿಸಿಕೊಳ್ಳುತ್ತೇನೆ ಎಂದು 2014 ರಲ್ಲಿ ಹೇಳಿದ್ದೆ. ಆಗ ನನಗೆ ಇನ್ನೂ ಸ್ವಲ್ಪ ಕೂದಲು ಇತ್ತು, ಈಗ ಎತ್ತಿನಹೊಳೆ ಅಲ್ಲೇ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವೂ ಇನ್ನೂ 50 ವರ್ಷ ಆದ್ರೂ ನೀರು ಕೊಡೋದಿಲ್ಲಾ. ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
ಮೂರುವರೆ ದಶಕಗಳಿಂದ ಇದ್ದ ಒಳ ಮೀಸಲಾತಿಗಾಗಿ ಹೋರಾಟಕ್ಕೆ ಜಯ ಸಿಕ್ಕಿದೆ: ಸಚಿವ ಮುನಿಯಪ್ಪ