ಅವರು ಬೇಗ ಸಚಿವರಾಗಲಿ: ರಮೇಶ್‌ಗೆ ಸತೀಶ್‌ ಟಾಂಗ್‌!

Published : Jan 20, 2020, 07:41 AM ISTUpdated : Jan 20, 2020, 08:55 AM IST
ಅವರು ಬೇಗ ಸಚಿವರಾಗಲಿ: ರಮೇಶ್‌ಗೆ ಸತೀಶ್‌ ಟಾಂಗ್‌!

ಸಾರಾಂಶ

ಅವರು ಬೇಗ ಸಚಿವರಾಗಲಿ: ರಮೇಶ್‌ಗೆ ಸತೀಶ್‌ ಟಾಂಗ್‌| ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ

ಮೈಸೂರು[ಜ.20]: ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ. ಅವರು ಬೇಗ ಸಚಿವರಾದರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಹೇಳುವ ಮೂಲಕ ತಮ್ಮ ಸಹೋದರ ರಮೇಶ್‌ ಜಾರಕಿಹೊಳಿಗೆ ಟಾಂಗ್‌ ನೀಡಿದ್ದಾರೆ.

ಮೊದಲೇ ಮಾರಕ ಪರಿಣಾಮದ ಬಗ್ಗೆ ಎಚ್ಚರಿಸಿದ್ದೆ : ಕೈ ಮಾಜಿ ಶಾಸಕ

ಮೈಸೂರಿನಲ್ಲಿ ಭಾನವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದ ದಿನದಿಂದಲೂ ಸರ್ಕಾರ ಬೀಳಿಸಿ ಸಚಿವರಾಗಲು ಕಾಯುತ್ತಿದ್ದಾರೆ. ಅವರಿಗೆ ಈ ಪರಿಸ್ಥಿತಿ ಬರುತ್ತದೆ ಎಂದು ಮೊದಲೇ ಹೇಳಿದ್ದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿದೇಶದಿಂದ ಬಂದ ಕೂಡಲೇ ಅವರ ಆಸೆ ಈಡೇರಿಸಲಿ ಎಂದರು.

ಕೆಪಿಸಿಸಿಗೆ ನಾಲ್ಕು ಮಂದಿ ಕಾರ್ಯಾಧ್ಯಕ್ಷರನ್ನು ನೇಮಿಸುವ ಕುರಿತು ಚಿಂತನೆ ನಡೆಸಲಾಗಿದೆ. ಜಾತಿವಾರು ಮತ್ತು ಪ್ರದೇಶವಾರು ಸಮತೋಲನ ಕಾಪಾಡಿಕೊಳ್ಳಲು ಈ ಚಿಂತನೆ ನಡೆದಿದೆ. ದೆಹಲಿ ಚುನಾವಣೆ ಸಮೀಪಿಸಿರುವುದರಿಂದ ವಿಳಂಬವಾಗಿದೆ. ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸಿಗರೆಂಬ ಗುಂಪು ಇಲ್ಲ. ನಾವು ಪಕ್ಷ ಸೇರಿ 10 ವರ್ಷವಾಗಿದೆ. ಶಾಸಕಾಂಗ ಪಕ್ಷದ ನಾಯಕರಾದವರೇ, ವಿಪಕ್ಷ ನಾಯಕರಾಗಿರಲಿ ಎಂದು ಹೇಳಿದ್ದೇನೆ ಎಂದರು.

ಜಾರಕಿಹೊಳಿ ವಿರುದ್ಧ ಹೋರಾಟ ನಿಲ್ಲಲ್ಲ : ಪೂಜಾರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ