
ಬೆಂಗಳೂರು, (ಜು.22): ನಾಯಕತ್ವ ಬದಲಾವಣೆ ಮಧ್ಯೆ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಕೆಲ ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದೆ.
ಕ್ಯಾಬಿನೆಟ್ ಸಭೆ ಮುಗಿಯುತ್ತಿದ್ದಂತೆಯೇ ಪತ್ರ ಹಿಡಿದು ಸಿಎಂ ಕಚೇರಿಗೆ ಹೋದ ವಲಸಿಗ ಸಚಿವರು
ಇಂದು (ಗುರುವಾರ) ಸಂಜೆ ನಡೆದ ಸಚಿವ ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೊಮ್ಮಾಯಿ, ಬಿಎಸ್ ಯಡಿಯೂಪ್ಪನವರ ಕೊನೆ ಎನ್ನಲಾದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಪ್ರಮುಖ ನಿರ್ಧಾರಗಳು
* ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ 50 ಕೋಟಿ ರೂ. ಅನುಮೋದನೆ
* ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮನೆ ನಿರ್ಮಾಣ, ನಗರ ಪ್ರದೇಶದಲ್ಲಿ 1 ಲಕ್ಷ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
* -ಸುಮಾರು 8 ಸಾವಿರ ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸಭೆ ಮೂಲಕ ಮನೆ ನಿರ್ಮಾಣ,
* ನಗರ ಪ್ರದೇಶದಲ್ಲಿ ಆಸರೆ ಸಮಿತಿ ಮೂಲಕ ಮನೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 2 ವರ್ಷದಲ್ಲಿ ಒಟ್ಟು 5 ಲಕ್ಷ ಮನೆ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
* ಹೊನ್ನಾಳಿ ಕ್ಷೇತ್ರಕ್ಕೆ 25 ಕೋಟಿ ರೂ. ಅನುಮೋದನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.