ರಾಹುಲ್‌ ಗಾಂಧಿ ಸಹವಾಸ ದೋಷ; ಹಿಜಾಬ್ ವಿಚಾರದಲ್ಲಿ ಸಿದ್ದರಾಮಯ್ಯ ಮೂರ್ಖರಂತೆ ಮಾತಾಡ್ತಿದ್ದಾರೆ: ಪ್ರಲ್ಹಾದ್ ಜೋಶಿ ಕಿಡಿ

Published : Dec 24, 2023, 01:06 PM ISTUpdated : Dec 24, 2023, 01:13 PM IST
ರಾಹುಲ್‌ ಗಾಂಧಿ ಸಹವಾಸ ದೋಷ; ಹಿಜಾಬ್ ವಿಚಾರದಲ್ಲಿ ಸಿದ್ದರಾಮಯ್ಯ ಮೂರ್ಖರಂತೆ ಮಾತಾಡ್ತಿದ್ದಾರೆ: ಪ್ರಲ್ಹಾದ್ ಜೋಶಿ ಕಿಡಿ

ಸಾರಾಂಶ

ಹಿಜಾಬ್ ನಿಷೇಧ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಮೂರ್ಖರಂತೆ ಮಾತಾಡಿದ್ದಾರೆ. ಇಲ್ಲದ ಹಿಜಾಬ್ ಆದೇಶ ಹಿಂದೆ ಪಡೆಯುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸಿದ್ದರಾಮಯ್ಯರ ಮುಠ್ಠಾಳತನ ಎಂದು  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದರು.

ಹುಬ್ಬಳ್ಳಿ (ಡಿ.24) ಹಿಜಾಬ್ ನಿಷೇಧ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಮೂರ್ಖರಂತೆ ಮಾತಾಡಿದ್ದಾರೆ. ಇಲ್ಲದ ಹಿಜಾಬ್ ಆದೇಶ ಹಿಂದೆ ಪಡೆಯುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸಿದ್ದರಾಮಯ್ಯರ ಮುಠ್ಠಾಳತನ ಎಂದು  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದರು.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳೋಕೆ ಇಂಥ ಹೇಳಿಕೆ ನೀಡುತ್ತಿದ್ದಾರೆ. ನೀವು ಗೊತ್ತಿದ್ದೂ ಮಾಡ್ತಾ ಇದ್ರೆ ಅದು ಸಮಾಜಕ್ಕೆ ಮಾಡುವ ಅನ್ಯಾಯ. ಗೊತ್ತಿಲ್ಲದೇ ಹೇಳಿದ್ರೆ ನೀವು ಸಿಎಂ ಖುರ್ಚಿಗೆ ಅನರ್ಹರು. ಮಿಸ್ಟರ್ ಸಿದ್ದರಾಮಯ್ಯ ಎಲ್ಲಿ ಹಿಜಾಬ್ ಬ್ಯಾನ್ ಇದೆ ಎಂದು ಸವಾಲು ಹಾಕಿದರು.

ಹಿಜಾಬ್ ನಿಷೇಧ ವಾಪಸ್; ಮುಸ್ಲಿಂ ತುಷ್ಟೀಕರಣದ ಪರಾಕಾಷ್ಠೆ -ಪ್ರಲ್ಹಾದ್ ಜೋಶಿ ಕಿಡಿ

ರಾಹುಲ್ ಗಾಂಧಿಯವರ ಸಹವಾಸ ದೋಷ:

ಹಿಜಾಬ್ ವಿಷಯದಲ್ಲಿ ಮೂರ್ಖರಂತೆ ಮಾತಾಡ್ತಿರೋ ಸಿದ್ದರಾಮಯ್ಯರಿಗೆ ರಾಹುಲ್ ಗಾಂಧಿಯವರ ಸಹವಾಸ ದೋಷ ಕಾರಣ ಇರಬಹುದು. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ವಾಪಸಾದ ನಂತರ ಹೀಗೆ ಮಾತಾಡ್ತಾರೆ. ತುಷ್ಟಿಕರಣದಲ್ಲಿ ಮತ ಪಡೆಯುವ ಹುನ್ನಾರ ಇದು. ಮುಸ್ಲಿಂ ಭಾಂದವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಈ ರೀತಿ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಬಿಕೆ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು:

ಬಿಜೆಪಿಯವರು ಬ್ರಿಟೀಷರ ಬೂಟು ನೆಕ್ಕಿದ್ದರು ಎಂಬ ಬಿಕೆ ಹರಿಪ್ರಸಾದ್ ಹೇಳಿಕೆ ವಿಚಾರಕ್ಕೆ ಸಿಡಿಮಿಡಿಗೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಬಿಕೆ ಹರಿಪ್ರಸಾದರನ್ನ ಕಾಂಗ್ರೆಸ್ ಪಕ್ಷದಲ್ಲಿ ಬೂಟಿಗಿಂತ ಕಡೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು ಮುಂದುವರಿದು, ನನಗೆ ಅವರ ಭಾಷೆಯಲ್ಲಿ ಉತ್ತರ ಕೊಡೋಕೆ ಬರೊಲ್ಲ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅವರನ್ನು ಬೂಟುಗಿಂತ ಮಾಡಿದ್ದಾರೆ. ಅದಕ್ಕೆ ಆ ರೀತಿ ಅವರು ಹೇಳ್ತಾ ಇದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಆಗ್ತಿರುವ ಅವಮಾನಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದು ತಿರುಗೇಟು ನೀಡಿದರು. 

ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹೇಳಿಕೆಗೂ ಕಿಡಿಕಾರಿದ ಪ್ರಲ್ಹಾದ್ ಜೋಶಿ, ಗಾಂಧೀಜಿಯವರ ಹತ್ಯೆಯಾದ ನಂತರ ಆರ್ ಎಸ್ ಎಸ್ ಮೇಲೆ ನಿರ್ಬಂಧ ಹಾಕಿದ್ದರು. ನಂತರ ಕಾಂಗ್ರೆಸ್ ಸರ್ಕಾರವೇ ನಿರ್ಬಂಧ ವಾಪಸ್ ಪಡೆಯಿತು. ಯಾಕೆ ನಿರ್ಬಂಧ ವಾಪಸ್ ಪಡೆಯಿತು? ಕಾಂಗ್ರೆಸ್ ನಲ್ಲಿ ಆಗುತ್ತಿರುವ ಹತಾಶೆಯಿಂದ ಬಿಕೆ ಹರಿಪ್ರಸಾದ್ ಈ ರೀತಿ ಮಾತಾಡ್ತಿದ್ದಾರೆ.  ನೀವೇನು ಮಾಡಿದ್ರು ಸಿದ್ದರಾಮಯ್ಯ ನಿಮ್ಮನ್ನ ಮಂತ್ರಿ ಮಾಡಲ್ಲ. ಡಿಕೆ ಶಿವಕುಮಾರ್ ಅವರು ಸಹ ನಿಮ್ಮ ಬಗ್ಗೆ ತಲೆ ಕೆಡಿಸ್ಕೊಳ್ಳಲ್ಲ. ಸೋನಿಯಾ ಗಾಂಧಿ ನಿಮಗೆ ಮಂತ್ರಿ ಮಾಡ್ರಿ ಅಂತಾನೂ ಹೇಳಲ್ಲ
ಯಾಕೆ ಹುಚ್ಚುಚ್ಚಾಗಿ ಮಾತಾಡ್ತೀರಿ. ಈ ರೀತಿ ಅಸಭ್ಯ  ಅಸಾಂಸ್ಕೃತಿಕವಾಗಿ ಮಾತಾಡುವುದನ್ನು ಬಿಡಿ ಎಂದು ಬಿಕೆ ಹರಿಪ್ರಸಾದ್ ಗೆ ಪ್ರಹ್ಲಾದ್ ಜೋಶಿ ತಾಕೀತು ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ