
ಗುವ್ಹಾಟಿ(ಏ.09): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಂಕಷ್ಟಗಳ ಸರಮಾಲೆ ಶುರುವಾಗಿದೆ. ಈಗಾಗಗಲೇ ಕ್ರಿಮಿನಲ್ ಡಿಫಮೇಶನ್ ಕೇಸ್ನಿಂದ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇತ್ತೀಚೆಗೆ ರಾಹುಲ್ ಗಾಂಧಿ ಅದಾನಿ ಗ್ರೂಪ್ ಹೂಡಿಕೆ ಕುರಿತು ಸರಣಿ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದರಲ್ಲಿ ಅದಾನಿ ಹೂಡಿಕೆ ಮಾಡಿರುವ 20,000 ಕೋಟಿ ರೂಪಾಯಿ ಹಣ ಎಲ್ಲಿಂದ ಅನ್ನೋ ಗಂಭೀರ ಪ್ರಶ್ನೆ ಭಾರಿ ಚರ್ಚೆಯಾಗುತ್ತಿದೆ. ಈ ಕುರಿತು ರಾಹುಲ್ ಗಾಂಧಿ ಮಾರ್ಮಿಕ ಟ್ವೀಟ್ ಮಾಡಿದ್ದರು.ಈ ಟ್ವೀಟ್ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿರುವ ನಾಯಕರ ಹೆಸರನ್ನೂ ಉಲ್ಲೇಖಿಸಿದ್ದಾರೆ. ಇದರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗರಂ ಆಗಿದ್ದಾರೆ. ಎಪ್ರಿಲ್ 14 ರಂದು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಡಿಫಮೇಶನ್ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.
ಅಸ್ಸಾಂನಿಂದ ಪ್ರಧಾನಿ ಮೋದಿ ಹಿಂದಿರುಗಿದ ಬಳಿಕ ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಕ್ರಿಮಿನಲ್ ಡಿಫಮೇಶನ್ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಹಿಮಂತ ಬಿಸ್ವಾ ಶರ್ಮಾ, ಎಪ್ರಿಲ್ 14 ರಂದು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಡಿಫಮೇಶ್ ಕೇಸ್ ದಾಖಲಿಸುವುದಾಗಿ ಹೇಳಿದ್ದಾರೆ. ಹಿಮಂತ ಬಿಸ್ವಾ ಶರ್ಮಾ ಸಿಡಿದೇಳಲು ಕಾರಣವಿದೆ. ರಾಹುಲ್ ಗಾಂಧಿ ಮಾಡಿದ ಅದಾನಿ ಬೇನಾಮಿ ಹಣ ಟ್ವೀಟ್ನಲ್ಲಿ ಹಿಮಂತ ಬಿಸ್ವಾ ಶರ್ಮಾ ಹೆಸರನ್ನು ಉಲ್ಲೇಖಿಸಿದ್ದಾರೆ.
ಕೋರ್ಟ್ ದೋಷಿ ಎಂದರೆ, ನಾನು ಹೈಕೋರ್ಟ್ಗೆ ಹೋಗುತ್ತೇನೆ ಹೊರತು ಪ್ರತಿಭಟನೆ ಮಾಡಲ್ಲ: ಹಿಮಾಂತ ಬಿಸ್ವಾ ಶರ್ಮ
ಶನಿವಾರ ರಾಹುಲ್ ಗಾಂಧಿ, ಪ್ರಶ್ನೆ ಹಾಗೇ ಉಳಿದಿದೆ. ಅದಾನಿ 20,000 ಕೋಟಿ ರೂಪಾಯಿ ಹೂಡಿಯಲ್ಲಿ ಯಾರ ಬೇನಾಮಿ ಹಣವಿದೆ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಜ್ಯೋತಿರಾಧಿತ್ಯ ಸಿಂಧಿಯಾ, ಗುಲಾಮ್ ನಬಿ ಅಜಾದ್, ಕಿರಣ್ ಕುಮಾರ್ ರೆಡ್ಡಿ, ಹಿಮಂತ ಬಿಸ್ವಾ ಶರ್ಮಮಾ, ಅನಿಲ್ ಆ್ಯಂಟಿನಿ ಹೆರನ್ನು ಮಾರ್ಮಿಕವಾಗಿ ಉಲ್ಲೇಖಿಸಿದ್ದಾರೆ.
ಯಾವುದೇ ಆಧಾರವಿಲ್ಲದೆ ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ತಮ್ಮ ತೆವಲಿಗೆ, ದೇಶವನ್ನು ಉಳಿಸುವ ಹೋರಾಟದ ಹೆಸರಿನಲ್ಲಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯಿಲ್ಲ. ರಾಹುಲ್ ಗಾಂಧಿ ರೀತಿ ಗಾಳಿಯಲ್ಲಿ ಗುಂಡು ಹೊಡೆದು ಬಿಡುವ ಪ್ರಶ್ನೆ ಇಲ್ಲ ಎಂದು ಶರ್ಮಾ ಹೇಳಿದ್ದಾರೆ.
ಮದರಸಾ ಶಿಕ್ಷಣ ಸಂಪೂರ್ಣ ಮುಚ್ಚುವ ಸೂಚನೆ ನೀಡಿದ ಸಿಎಂ ಹಿಮಂತ ಬಿಸ್ವಾ ಶರ್ಮಾ!
ಎಪ್ರಿಲ್ 16ಕ್ಕೆ ಕರ್ನಾಟಕ್ಕೆ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೋಲಾರದಲ್ಲಿ ನಡೆಯಬೇಕಿದ್ದ ‘ಜೈ ಭಾರತ್ ಸತ್ಯಾಗ್ರಹ ಯಾತ್ರೆ’ ಸಮಾವೇಶ ಒಂದು ವಾರ ಮುಂದೂಡಿದ್ದು, ಏ.16ಕ್ಕೆ ಸಮಾವೇಶ ನಡೆಸುತ್ತೇವೆ. ರಾಹುಲ್ ಗಾಂಧಿ ಅವರು ಯಾವ ಜಾಗದಲ್ಲಿ ಮಾಡಿದ ಭಾಷಣಕ್ಕೆ ಹೆದರಿ ಅವರನ್ನು ಸಂಸದ ಸ್ಥಾನ ಅನರ್ಹ ಮಾಡಲಾಯಿತೋ ಅದೇ ಜಾಗದಲ್ಲಿ ನಿಂತು ಮಾತನಾಡಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.