ಜೆಡಿಎಸ್‌ ಜತೆ ಮೈತ್ರಿ ಸುಳಿವು: ಬಿಜೆಪಿಗೆ ಪ್ರೀತಂ ಮುಜುಗರ

Published : Apr 28, 2023, 06:32 AM IST
ಜೆಡಿಎಸ್‌ ಜತೆ ಮೈತ್ರಿ ಸುಳಿವು: ಬಿಜೆಪಿಗೆ ಪ್ರೀತಂ ಮುಜುಗರ

ಸಾರಾಂಶ

ರಾಜ್ಯದಲ್ಲಿ ಈ ಬಾರಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯ ಹಾಗೂ ಕೇಂದ್ರದ ನಾಯಕರು ಚುನಾವಣಾ ಪ್ರಚಾರದ ವೇಳೆ ಅದಮ್ಯ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆಯೇ ಪ್ರೀತಂಗೌಡ ಈ ರೀತಿಯ ಹೇಳಿಕೆ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೆ, ಇದು ಬಿಜೆಪಿಗೆ ತೀವ್ರ ಮುಜುಗರ ತಂದಿಟ್ಟಿದೆ.

ಹಾಸನ(ಏ.28):  ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭರಾಟೆ ತೀವ್ರಗೊಂಡಿರುವ ನಡುವೆಯೇ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ವರಿಷ್ಠರ ಮಟ್ಟದಲ್ಲಿ ಹೊಂದಾಣಿಕೆ ನಡೆದಿದೆ ಎಂಬರ್ಥದ ಹೇಳಿಕೆ ನೀಡಿ ಹಾಸನ ಶಾಸಕ ಪ್ರೀತಂಗೌಡ ಅವರು ಅಚ್ಚರಿ ಮೂಡಿಸಿದ್ದಾರೆ

ರಾಜ್ಯದಲ್ಲಿ ಈ ಬಾರಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯ ಹಾಗೂ ಕೇಂದ್ರದ ನಾಯಕರು ಚುನಾವಣಾ ಪ್ರಚಾರದ ವೇಳೆ ಅದಮ್ಯ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆಯೇ ಪ್ರೀತಂಗೌಡ ಈ ರೀತಿಯ ಹೇಳಿಕೆ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೆ, ಇದು ಬಿಜೆಪಿಗೆ ತೀವ್ರ ಮುಜುಗರ ತಂದಿಟ್ಟಿದೆ.

ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

ಮೋದಿ-ಎಚ್‌ಡಿಡಿ ಭೇಟಿ:

ನಗರದಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಶಾಸಕ ಪ್ರೀತಂ ಗೌಡ, ‘ಜೆಡಿಎಸ್‌ಗೆ ಬಹುಮತ ಬರೋದಿಲ್ಲ. ದೆಹಲಿಯಲ್ಲಿ ಮೋದಿ ಸಾಹೇಬ್ರು ಹಾಗೂ ದೇವೇಗೌಡ್ರು ಇಬ್ಬರೂ ಒಪ್ಪಂದ ಮಾಡಿಕೊಂಡಿದ್ದಾರೆ. ಹಾಗಾಗಿ ನೀವು ಜೆಡಿಎಸ್‌ಗೆ ವೋಟು ಹಾಕಿದರೂ ಬಿಜೆಪಿಗೆ ಹಾಕಿದಂತೆ’ ಎಂದು ತಿಳಿಸಿದರು.

ಜೆಡಿಎಸ್‌ನ ಭದ್ರಕೋಟೆ ಹಾಸನ ಕ್ಷೇತ್ರದಲ್ಲಿ ಪ್ರೀತಂಗೌಡ ಶಾಸಕರಾದದ್ದು ಸಣ್ಣ ಸಾಧನೆಯಲ್ಲ!

‘ನೀವು ಹಾಸನದಿಂದ ಬೆಂಗಳೂರಿಗೆ ಹೋಗುವುದಾದರೆ ಬೆಳ್ಳೂರು ಕ್ರಾಸ್‌ ಮೇಲೆಯೇ ಹೋಗಬೇಕು. ಅದನ್ನು ಬಿಟ್ಟು ಮೈಸೂರು ಸುತ್ತಿಕೊಂಡು ಹೋಗುತ್ತೇನೆ ಎಂದರೆ ನಾನೇನು ಮಾಡಲು ಆಗಲ್ಲ. ಎಲ್ಲಾ ಹಳ್ಳದ ನೀರು ಹರಿದು ಸಮುದ್ರಕ್ಕೇ ಬರೋದು. ಹಾಗಾಗಿ ನೀವು ಸುತ್ತಾಡಿಕೊಂಡು ನನ್ನ ಬಳಿ ಬರುವುದಕ್ಕಿಂತ ನೇರವಾಗಿ ಬನ್ನಿ’ ಎಂದು ಹೇಳಿದರು. ಈ ಮೂಲಕ ಜೆಡಿಎಸ್‌ಗೆ ವೋಟು ಹಾಕುವ ಬದಲು ಬಿಜೆಪಿಗೇ ವೋಟು ಹಾಕಿ ಎಂದು ಸಲಹೆ ನೀಡಿದರು.

ಡೀಲ್‌ ಆಗಿದೆ

ಜೆಡಿಎಸ್‌ಗೆ ಬಹುಮತ ಬರುವುದಿಲ್ಲ. ದೆಹಲಿಯಲ್ಲಿ ಮೋದಿ ಸಾಹೇಬ್ರು ಹಾಗೂ ದೇವೇಗೌಡ್ರು ಇಬ್ಬರೂ ಒಪ್ಪಂದ ಮಾಡಿಕೊಂಡಿದ್ದಾರೆ. ಹಾಗಾಗಿ ನೀವು ಜೆಡಿಎಸ್‌ಗೆ ವೋಟು ಹಾಕಿದರೂ ಬಿಜೆಪಿಗೆ ಹಾಕಿದಂತೆ ಅಂತ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!