'ರೇಣುಕಾಚಾರ್ಯ ದೊಡ್ಡ ಜೋಕರ್‌, ಅದಕ್ಕೇ ಮಂತ್ರಿ ಸ್ಥಾನ ಸಿಕ್ಕಿಲ್ಲ'

Published : Jan 25, 2020, 08:34 AM IST
'ರೇಣುಕಾಚಾರ್ಯ ದೊಡ್ಡ ಜೋಕರ್‌, ಅದಕ್ಕೇ ಮಂತ್ರಿ ಸ್ಥಾನ ಸಿಕ್ಕಿಲ್ಲ'

ಸಾರಾಂಶ

ರೇಣು ದೊಡ್ಡ ಜೋಕರ್‌, ಅದಕ್ಕೇ ಮಂತ್ರಿ ಸ್ಥಾನ ಸಿಕ್ಕಿಲ್ಲ| ಅವರು ಇಸ್ಪೀಟ್‌ ಎಲೆಯಲ್ಲಿರುವ ಜೋಕರ್‌ನಂತೆ

ಬೆಂಗಳೂರು[ಜ.25]: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಇಸ್ಪೀಟ್‌ ಎಲೆಯಲ್ಲಿರುವ ಜೋಕರ್‌ನಂತೆ. ಹೀಗಾಗಿ ಜೋಕರ್‌ ಅನ್ನು ಯಾರಾದರೂ ಮಂತ್ರಿ ಮಾಡುತ್ತಾರಾ? ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಪ್ರಶ್ನೆ ಮಾಡಿದ್ದಾರೆ. ಗೋರಿಪಾಳ್ಯದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಬಿಜೆಪಿಗೂ ಪ್ರಾಮಾಣಿಕವಾಗಿ ನಡೆದುಕೊಂಡವರಲ್ಲ. ಬಿಜೆಪಿ ಸರ್ಕಾರ ಇದ್ದಾಗ ಗೋವಾದಲ್ಲಿ ಹೋಗಿ ಕುಳಿತುಕೊಂಡವರು. ಅವರೊಬ್ಬ ದೊಡ್ಡ ಜೋಕರ್‌ ಆಗಿರುವುದರಿಂದಲೇ ಅವರಿಗೆ ಮಂತ್ರಿ ಸ್ಥಾನ ನೀಡಿಲ್ಲ ಎಂದು ಹೇಳಿದರು.

ನಾನು ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಗೋವಾದಲ್ಲಿ ಇದ್ದಾಗ ಅದೇ ಖೋಟಾ ನೋಟು ನಿಮಗೆ ನಾನು ಕೊಟ್ಟಿರಬಹುದು. ಈಗ ಯಡಿಯೂರಪ್ಪ ಚುನಾವಣೆ ಮಾಡಿದಾಗ ನಿಮಗೆ 30-40 ಕೋಟಿ ರು. ಎಲ್ಲಿಂದ ಬಂತು? ನೀವು ಖೋಟಾ ನೋಟು ಪ್ರಿಂಟ್‌ ಮಾಡಿದ್ರಾ? ಹಿಂದೂ-ಮುಸ್ಲಿಮರು ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದೇವೆ. ಅನಗತ್ಯವಾಗಿ ಎರಡು ಧರ್ಮಗಳ ನಡುವೆ ರೇಣುಕಾಚಾರ್ಯ ವಿಷ ಬಿತ್ತಬಾರದು ಎಂದು ತರಾಟೆಗೆ ತೆಗೆದುಕೊಂಡರು.

ನರ್ಸ್‌ ಜಯಲಕ್ಷ್ಮಿಗೆ ರೇಣು ಬಗ್ಗೆ ಗೊತ್ತು:

ರೇಣುಕಾಚಾರ್ಯ ಎಂಥವನು ಎಂದು ನರ್ಸ್‌ ಜಯಲಕ್ಷ್ಮೇಗೆ ಬಹಳ ಚೆನ್ನಾಗಿ ಗೊತ್ತಿದೆ. ಏಕೆಂದರೆ, ಚುಮ್ಮಾ ಚುಮ್ಮಾ ಎಂದು ಬಹಳ ಹತ್ತಿರದಿಂದ ನೋಡಿದ್ದಾರೆ. ಇದನ್ನೆಲ್ಲಾ ರೇಣುಕಾಚಾರ್ಯ ಇಲ್ಲಿಗೇ ಬಿಟ್ಟು ಬಿಡಬೇಕು. ಅವರು ಮುಂದುವರೆಸಿದರೆ ನನಗೂ ಮಾತನಾಡುವುದು ಗೊತ್ತಿದೆ ಎಂದು ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ