
ಬೆಂಗಳೂರು[ಫೆ.13]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಸಮಾರಂಭವೊಂದರ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಅಚ್ಚರಿ ಮೂಡಿಸಿದೆ.
ಮತ್ತೆ ಬಿಎಸ್ವೈ ಸಂಪುಟ ವಿಸ್ತರಣೆ? ಯಾರಿಗೆಲ್ಲಾ ಸಿಗುತ್ತೆ ಮಂತ್ರಿಗಿರಿ?
ಬುಧವಾರ ಸದಾಶಿವನಗರದಲ್ಲಿನ ಶಿವಕುಮಾರ್ ನಿವಾಸಕ್ಕೆ ಮಾಜಿ ಶಾಸಕ ಬಿ.ಪಿ.ಹರೀಶ್ ಅವರೊಂದಿಗೆ ತೆರಳಿದ ರೇಣುಕಾಚಾರ್ಯ ಅವರು ಬರುವ ಮಾ.5ರಂದು ಸ್ವಕ್ಷೇತ್ರ ಹೊನ್ನಾಳಿಯಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಆಹ್ವಾನ ನೀಡಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್ ಹಾಗೂ ಕೃಷಿ ಮೇಳ ಸ್ವಾಗತ ಸಮಿತಿ ಸದಸ್ಯರೂ ಇದ್ದರು.
ಆದರೆ, ಹಲವು ದಿನಗಳ ಹಿಂದೆ ಶಿವಕುಮಾರ್ ವಿರುದ್ಧ ರಾಜಕೀಯವಾಗಿ ಹರಿಹಾಯ್ದಿದ್ದ ರೇಣುಕಾಚಾರ್ಯ ಅವರು ಸ್ವಕ್ಷೇತ್ರದ ಕೃಷಿ ಮೇಳಕ್ಕೆ ಆಹ್ವಾನಿಸುವ ಮೂಲಕ ಯಾರಿಗೆ ಯಾವ ಸಂದೇಶ ರವಾನಿಸುವ ಪ್ರಯತ್ನ ಮಾಡಿದ್ದಾರೆ ಎಂಬುದು ಕುತೂಹಲವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.