
ನವದೆಹಲಿ: ಜೈಲಿನೊಳಗಿನಿಂದಲೇ ಆಡಳಿತ ನಡೆಸುವ ಆಮ್ ಆದ್ಮಿ ಪಕ್ಷದ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧಾರ ಇದೀಗ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತನಿಖೆಯ ವಸ್ತುವಾಗಿ ಹೊರಹೊಮ್ಮಿದೆ. ಜೈಲಿನೊಳಗೆ ಯಾವುದೇ ವಸ್ತುಗಳನ್ನು ಇರಿಸಿಕೊಳ್ಳಲು ಕೈದಿಗಳಿಗೆ ಅನುಮತಿ ಇಲ್ಲದೇ ಇದ್ದರೂ, ಅರವಿಂದ್ ಕೇಜ್ರಿವಾಲ್ ತಮ್ಮ ಕೋಣೆಯಿಂದಲೇ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ಆದೇಶ ನೀಡಿದ್ದು ಹೇಗೆ? ಈ ಬಗ್ಗೆ ಸಿಸಿಟೀವಿ ದೃಶ್ಯಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇ.ಡಿ. ಮೂಲಗಳು ತಿಳಿಸಿವೆ.
ದೆಹಲಿಯಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶನಿವಾರ ರಾತ್ರಿ ಕೇಜ್ರಿವಾಲ್ ಅವರು ತಾವಿರುವ ಜೈಲು ಕೋಣೆಯಿಂದಲೇ ಕಾರ್ಯಾದೇಶ ಹೊರಡಿಸಿದ್ದಾರೆ ಎಂದು ಆಪ್ ಸರ್ಕಾರದ ಸಚಿವೆ ಆತಿಷಿ ಹೇಳಿದ್ದರು. ಹೀಗಾಗಿ ಕೇಜ್ರಿವಾಲ್ ಆದೇಶ ಪ್ರತಿ ಸಿಕ್ಕಿದ್ದು ಹೇಗೆಂದು ಆತಿಷಿಯನ್ನೂ ಇ.ಡಿ. ವಿಚಾರಣೆ ನಡೆಸುವ ಸಾಧ್ಯತೆ ಇದೆ.ಆದರೆ ಪತ್ರದಲ್ಲಿನ ಕೆಲ ಅಂಶಗಳ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸಿತ್ತು. ದೆಹಲಿ ಸಿಎಂ ಕಚೇರಿಯನ್ನು ಹೈಜಾಕ್ ಮಾಡಲಾಗಿದೆ. ಮುಖ್ಯಮಂತ್ರಿಗಳ ಹೆಸರಲ್ಲಿ ಅನಧಿಕೃತ ವ್ಯಕ್ತಿಗಳು ಅಧಿಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿತ್ತು.ಅದರ ಬೆನ್ನಲ್ಲೇ ಇದೀಗ ಕೇಜ್ರಿವಾಲ್ ಮತ್ತು ಆಪ್ ವಿರುದ್ಧ ಮತ್ತೊಂದು ತನಿಖೆಗೆ ಇ.ಡಿ. ಅಧಿಕಾರಿಗಳು ಮುಂದಾಗಿದ್ದಾರೆ.ಲಿಕ್ಕರ್ ಹಗರಣದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿತ್ತು. ಆದರೆ ರಾಜೀನಾಮೆಗೆ ಕೇಜ್ರಿ ಮತ್ತು ಅವರ ಪಕ್ಷ ನಿರಾಕರಿಸಿತ್ತು. ಅದರ ಬೆನ್ನಲ್ಲೇ ಇದೀಗ ಈ ಹೊಸ ವಿವಾದ ಸೃಷ್ಟಿಯಾಗಿದೆ. ಇದು ತೀವ್ರಗೊಂಡರೆ ಕೇಜ್ರಿವಾಲ್ ರಾಜೀನಾಮೆ ನೀಡಬೇಕಾಗಿ ಬರಬಹುದು ಎನ್ನಲಾಗಿದೆ.
ಕೇಜ್ರಿವಾಲ್ ಬಂಧನದ ವಿರೋಧಿಸಿ ಹೋಳಿ ಹಬ್ಬ ಬಹಿಷ್ಕರಿಸಿದ ಆಮ್ ಆದ್ಮಿ ಪಾರ್ಟಿ!
ಸಾಮಾಜಿಕ ಜಾಲ ತಾಣಗಳಲ್ಲಿ ಆಪ್ ಅಭಿಯಾನ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಅಬಕಾರಿ ಹಗರಣದಲ್ಲಿ ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷವು ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಅಭಿಯಾನವನ್ನು ಕೈಗೊಂಡಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವೆ ಆತಿಷಿ, ‘ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ಪಕ್ಷದ ಎಲ್ಲ ಕಾರ್ಯಕರ್ತರು ತಮ್ಮ ಸಾಮಾಜಿಕ ಜಾಲತಾಣದ ಡಿಪಿಯನ್ನು ಬದಲಿಸಿಕೊಳ್ಳಬೇಕು. ಅರವಿಂದ್ ಕೇಜ್ರಿವಾಲ್ ಜೈಲಿನ ಕಂಬಿಗಳ ಹಿಂದೆ ಇರುವ ಚಿತ್ರವನ್ನು ಹಾಕಿಕೊಂಡು ‘ಕೇಜ್ರಿವಾಲ್ ಕಂಡರೆ ಬೆಚ್ಚಿಬೀಳುವ ವ್ಯಕ್ತಿ ಮೋದಿ’ ಎಂದು ಅಡಿಬರಹ ಹಾಕಿಕೊಳ್ಳಬೇಕು’ ಎಂದರು. ‘ಸಾರ್ವಜನಿಕರೂ ಈ ಚಿತ್ರವನ್ನು ಹಾಕಿಕೊಂಡು ಪ್ರಜಾಪ್ರಭುತ್ವವನ್ನು ಸಂರಕ್ಷಿಸುವ ಮೂಲಕ ಪ್ರಧಾನಿಯ ಸರ್ವಾಧಿಕಾರ ತೊಡೆದು ಹಾಕಲು ಶ್ರಮಿಸಬೇಕು’ ಎಂದು ಕರೆ ನೀಡಿದರು.
ಎಎಪಿಗೆ ಮತ್ತೆ ಆಘಾತ;ಉಗ್ರನ ಬಿಡುಗಡೆಗೆ ಕೇಜ್ರಿವಾಲ್ ಗೆ 16 ಮಿಲಿಯನ್ ಡಾಲರ್ ನೀಡಿದ್ದೇವೆ: ಖಲಿಸ್ತಾನಿ ನಾಯಕನ ಆರೋಪ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.