
ಹುಬ್ಬಳ್ಳಿ, (ಜುಲೈ.26): ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಬಿಜೆಪಿ ಹಿರಿಯ ಮುಖಂಡ (67) ರಾಘವೇಂದ್ರ ರಾಮದುರ್ಗ ಅವರು ವಿಧಿವಶರಾಗಿದ್ದಾರೆ.
ಇಂದು (ಭಾನುವಾರ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಅವರಿಗೆ ಕೊರೋನಾ ಅಟ್ಯಾಕ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದರು.
ಕರ್ನಾಟಕ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ತಾಯಿ ನಿಧನ
ಆದ್ರೆ, ಭಾನುವಾರ ಮಧ್ಯಾಹ್ನ ಮನೆಯಲ್ಲಿ ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಮಹಾಮಾರಿ ಕೊರೋನಾ ವಿರುದ್ಧ ಹೋರಾಡಿ ಬಂದಿದ್ದ ರಾಘವೇಂದ್ರ ಅವರಿಂದ ಸಾವು ಗೆಲ್ಲಲಾಗಲಿಲ್ಲ.
67 ವರ್ಷದ ನನಗೆ ಕೊರೋನಾ ಬಂದಿದ್ದು ಕೇಳಿ, ಅನೇಕರು ಮಂದಿ ಜೀವಂತವಾಗಿ ಮನೆಗೆ ವಾಪಸ್ ಬರುವುದಿಲ್ಲ ಅಂದುಕೊಂಡಿದ್ದರು. ಆದ್ರೆ, ನನ್ನಲ್ಲಿದ್ದ ಆತ್ಮವಿಶ್ವಾಸ ಹಾಹೂ ಕಿಮ್ಸ್ನಲ್ಲಿ ಸಿಕ್ಕ ಉತ್ತಮ ಚಿಕಿತ್ಸೆಯಿಂದ ಮರುಜನ್ಮ ಪಡೆದಿದ್ದೇನೆ ಎಂದು ಹೇಳಿದ್ದರು.
ಇನ್ನು ಇವರ ನಿಧನಕ್ಕೆ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.