ರಾಜ್ಯದ ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್: ಭಾರೀ ಪ್ರಮಾಣದಲ್ಲಿ ಏರಿಕೆ, ಎಷ್ಟು ಗೊತ್ತಾ?

Published : Mar 20, 2025, 10:04 PM ISTUpdated : Mar 20, 2025, 10:05 PM IST
ರಾಜ್ಯದ ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್: ಭಾರೀ ಪ್ರಮಾಣದಲ್ಲಿ ಏರಿಕೆ, ಎಷ್ಟು ಗೊತ್ತಾ?

ಸಾರಾಂಶ

ಶಾಸಕರ ವೇತನ, ಭತ್ಯೆ ಹೆಚ್ಚಿಸುವ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ-2025ಕ್ಕೆ ಅನುಮೋದನೆ ನೀಡಲು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ.

ಬೆಂಗಳೂರು (ಮಾ.20): ಸಿಎಂ ಸೇರಿದಂತೆ ರಾಜ್ಯದ ಎಲ್ಲಾ ಶಾಸಕರಿಗೆ ವೇತನ ಮತ್ತು ದಿನ ಭತ್ಯೆ ಹೆಚ್ಚಳವಾಗಿದೆ. ಶಾಸಕರ ವೇತನ, ಭತ್ಯೆ ಹೆಚ್ಚಿಸುವ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ-2025ಕ್ಕೆ ಅನುಮೋದನೆ ನೀಡಲು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟ ಕೂಡಲೇ ಸದನದಲ್ಲಿ ವಿಧೇಯಕ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ವಿಧೇಯಕ ಮಂಡನೆಗೂ ಮುನ್ನ ರಾಜ್ಯಪಾಲರ ಅನುಮತಿ ಅಗತ್ಯ ಇತ್ತು. 

ಹೀಗಾಗಿ ವಿಧೇಯಕದ ಬಗ್ಗೆ ಪ್ರಸ್ತಾವನೆಯನ್ನು ಸರ್ಕಾರ ಕಳುಹಿಸಿದೆ. ಇದೀಗ ರಾಜ್ಯಪಾಲರಿಂದ ಅನುಮೋದನೆ ಪಡೆದ ಎರಡೂ ವಿಧೇಯಕ ವಿಧಾನಸಭೆಯಲ್ಲಿ ಮಸೂದೆ ಮಂಡನೆ ಸಾಧ್ಯತೆಯಿದೆ. ಶೇ.100 ರಷ್ಟು ಸಂಬಳ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಮೂಲಕ ಸಿಎಂ, ಸಚಿವರು, ಶಾಸಕರ ಸಂಬಳ ಶೇ. 100 ರಷ್ಟು ಹೆಚ್ಚಳವಾಗಲಿದೆ. ಸದ್ಯ ಭಾರೀ ಪ್ರಮಾಣದಲ್ಲಿ ಜನಪ್ರತಿನಿಧಿಗಳ ಸಂಬಳ ಏರಿಕೆಯಾಗಲಿದೆ. 

ಭೂಮಿ ಒತ್ತುವರಿ ಮಾಡಿಲ್ಲದಿದ್ದರೆ ಎಚ್‌ಡಿಕೆಗೆ ಗಾಬರಿ ಏಕೆ?: ಡಿ.ಕೆ.ಶಿವಕುಮಾರ್


ಹುದ್ದೆ - ಸದ್ಯದ ವೇತನ - ಪರಿಷ್ಕೃತ ವೇತನ 

ಮುಖ್ಯಮಂತ್ರಿ ಸಂಬಳ - 75,000 - 1.50,000
ಸಚಿವರ ಸಂಬಳ - 60,000 - 1.25,000
ಮುಖ್ಯಮಂತ್ರಿ, ಸಚಿವರಿಗೆ ಆತಿಥ್ಯ ಭತ್ಯೆ - 4,50,000 - 5,00,000
ಸಚಿವರಿಗೆ ಮನೆ ಬಾಡಿಗೆ ಭತ್ಯೆ - 1,20,000 - 2,50,000 
ರಾಜ್ಯ ಸಚಿವರ ವೇತನ - 50,000 - 75,000
ರಾಜ್ಯ ಸಚಿವರಿಗೆ ಮನೆ ಬಾಡಿಗೆ ಭತ್ಯೆ - 1,20,000 - 2,00,000 
ಶಾಸಕರ ವೇತನ - 40,000 - 80,000

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ