ಕರ್ನಾಟಕ ರಾಜಕಾರಣದಲ್ಲಿ ಡಿಸೆಂಬರ್‌ ಹೊತ್ತಿಗೆ ಬೃಹತ್‌ ಕ್ರಾಂತಿ

Published : Sep 28, 2024, 08:09 AM ISTUpdated : Sep 28, 2024, 09:29 AM IST
ಕರ್ನಾಟಕ ರಾಜಕಾರಣದಲ್ಲಿ ಡಿಸೆಂಬರ್‌ ಹೊತ್ತಿಗೆ ಬೃಹತ್‌ ಕ್ರಾಂತಿ

ಸಾರಾಂಶ

ವರ್ಷಾಂತ್ಯದ ತಿಂಗಳಾದ ಡಿಸೆಂಬರ್ ಕೆಲವು ರಾಜಕೀಯಕ್ಕೆ ಅಂತ್ಯ ಹಾಡಿದರೆ, ಮತ್ತಷ್ಟು ರಾಜಕೀಯ ಚಟುವಟಿಕೆಗೆ ಆರಂಭವೂ ಡಿಸೆಂಬರ್‌ನಲ್ಲೇ ಆಗುವುದು ಬಹುತೇಕ ನಿಶ್ಚಿತವಾಗಿದೆ.   

ಬೆಂಗಳೂರು(ಸೆ.28): ರಾಜ್ಯ ರಾಜಕಾರಣದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಕಾಂಗ್ರೆಸ್- ಬಿಜೆಪಿಗಳೆರಡರಲ್ಲೂ ರಾಜಕೀಯ ಧ್ರುವೀಕರಣ ನಡೆಯುವುದು ಬಹುತೇಕ ಖಚಿತವಾಗಿದೆ. ವರ್ಷಾಂತ್ಯದ ತಿಂಗಳಾದ ಡಿಸೆಂಬರ್ ಕೆಲವು ರಾಜಕೀಯಕ್ಕೆ ಅಂತ್ಯ ಹಾಡಿದರೆ, ಮತ್ತಷ್ಟು ರಾಜಕೀಯ ಚಟುವಟಿಕೆಗೆ ಆರಂಭವೂ ಡಿಸೆಂಬರ್‌ನಲ್ಲೇ ಆಗುವುದು ಬಹುತೇಕ ನಿಶ್ಚಿತವಾಗಿದೆ. 

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಪ್ರಕರಣದ ಕುರಿತು ಅಂತಿಮ ವರದಿ ಸಲ್ಲಿಸಲು ಡಿಸೆಂಬರ್‌ ಗಡುವು ನೀಡಿದೆ. ಇಲ್ಲಿಯ ತನಕ ಸಿದ್ದರಾಮಯ್ಯ ಜೊತೆಗೆ ನಿಂತಿದ್ದ ಇಡೀ ಕಾಂಗ್ರೆಸ್ ಒಳಗಡೆ ಇದೀಗ ಸಣ್ಣ ಪಿಸು ಪಿಸು ಆರಂಭವಾಗಿದೆ. ಇದರ ಮುಂದುವರೆದ ಭಾಗವಾಗಿ ಮಾಜಿ ಸಚಿವ, ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಮುಖ್ಯಮಂತ್ರಿ ವಿರುದ್ಧ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ಪಡೆಯುವುದು ಹೊಸದೇನಲ್ಲ: ಗೃಹ ಸಚಿವ

ಇತ್ತ ಬಿಜೆಪಿ ಪಾಳೆಯದಲ್ಲಿ ಆಗಲೇ ಕುದಿಯುತ್ತಿರುವ ಬೇಗುದಿಯೂ ಡಿಸೆಂಬರ್‌ನಲ್ಲೇ ಸ್ಪೋಟಿಸುವ ಇಲ್ಲದೇ ನಾಯಕತ್ವ ಬದಲಿಸುವ ಕಾರ್ಯವೂ ಡಿಸೆಂಬರ್‌ನಲ್ಲೇ ಆಗುವ ಲಕ್ಷಣಗಳಿವೆ. ನವೆಂಬರ್15ಕ್ಕೆ ರಾಜ್ಯಾಧ್ಯಕ್ಷ ರಾಗಿ ವಿಜಯೇಂದ್ರ ಒಂದು ವರ್ಷ ಪೂರೈಸುತ್ತಿದ್ದಾರೆ. ಡಿಸೆಂಬರ್‌ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆಯೂ ಇದೆ. ಇದೇ ಸಂದರ್ಭ ಬಳಸಿ ಭಿನ್ನಮತದ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲೇ ವಿಜಯೇಂದ್ರ ಅವರನ್ನು ಬದಲಿಸುತ್ತಾರೆ ಎಂಬ ಮಾತು ಬಿಜೆಪಿಯಲ್ಲಿ ದಟ್ಟವಾಗಿದೆ. ಮುನಿಸಿಗೆ ಮದ್ದೆರೆಯಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಮಧ್ಯಸ್ಥಿಕೆ ವಹಿಸಿದರೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದದ ಅಸಮಾಧಾನ ಶಮನವಾಗಿಲ್ಲ. 

ಒಂದು ಕಡೆ ಪಕ್ಷದಿಂದ ಹೊರಗಿರುವ ಕೆ.ಎಸ್ ಈಶ್ವರಪ್ಪ, ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಕಟ್ಟಲು ಸಭೆ ನಡೆಸುತ್ತಿ ದ್ದಾರೆ. ಮತ್ತೊಂದು ಕಡೆ ಬಸನಗೌಡ ಪಾಟೀಲ್ ಯತ್ನಾಳ್‌, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ತಂಡವು ಸಭೆ ನಡೆಸುವುದನ್ನು ನಿಲ್ಲಿಸಿಲ್ಲ. ಗುರುವಾರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗವಹಿಸಿಲ್ಲ. ಮಾಧ್ಯಮಕ್ಕೆ ಮುಟ್ಟಿಸಿರುವ 'ಅನಾರೋಗ್ಯ ಕಾರಣ' ಎಂಬ ಮಾಹಿತಿ ಕೇವಲ ನೆಪ ಎಂಬುದು ಎಲ್ಲರಿಗೂ ಗೊತ್ತಾಗಿದೆ. 

ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಮತ್ತಷ್ಟು ಕೇಸುಗಳನ್ನು ದಾಖಲಿಸಿ, ವಿಜಯೇಂದ್ರ ಅವರನ್ನು ಹಿಮ್ಮೆಟ್ಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಂಡ ಚುರುಕಾಗಿ ಕೆಲಸ ಮಾಡುತ್ತಿದೆ. ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಕೇಸುಗಳನ್ನು ದಾಖಲಿಸಿ ವಿಜಯೇಂದ್ರ ಕಟ್ಟಿ ಹಾಕುವ ಜೊತೆಗೆ ಬಿಜೆಪಿ ಒಳಗೆ ಬಿರುಕು ಮೂಡಿಸುವ ಸರ್ಕಾರದ ತಂತ್ರ ಯಶಸ್ವಿಯಾಗುವ ಲಕ್ಷಣಗಳು ದಟ್ಟವಾಗಿವೆ. ಸದ್ಯಕ್ಕೆ ಭಿನ್ನಮತೀಯ ಚಟುವಟಿಕೆ ಕಾಂಗ್ರೆಸ್ಸಿಗಿಂತ ವಿಪಕ್ಷವಾಗಿರುವ ಬಿಜೆಪಿಯಲ್ಲೇ ಜೋರಿದ್ದರೂ ಡಿಸೆಂಬ‌ರ್ ಹೊತ್ತಿಗೆ ಕಾಂಗ್ರೆಸ್ ಒಳಗೂ ಭಿನ್ನರಾಗ ತಾರಕಕ್ಕೇರಲಿದೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸುತ್ತಿವೆ. 

ಸಿದ್ದರಾಮಯ್ಯ ಜೊತೆಗೆ ಹೈಕಮಾಂಡ್ ಇದೆ ಎಂಬ ಕಾರಣಕ್ಕೆ ಭಿನ್ನಮತ ಬಹಿರಂಗಕ್ಕೆ ಬರುವುದು ತಡವಾಗುತ್ತಿದೆ. ಹೈಕಮಾಂಡ್‌ಗೆ ಅರಿವು ಮಾಡಿಸುವ ತಂಡವೊಂದು ರೆಡಿಯಾಗುತ್ತದೆ. ಡಿಸೆಂಬರ್‌ಹೊತ್ತಿಗೆ ಇದಕ್ಕೆ ಶಕ್ತಿ ಬರಲಿದೆ ಎನ್ನಲಾಗಿದೆ. ಸ್ವಪಕ್ಷೀಯರಿಂದ ಭಿನ್ನಮತ ಎದುರಿಸುವ ಸಿಎಂ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅವರ ಮುಂದಿನ ನಡೆ ಏನಾಗಬಹುದು ಎಂಬ ಕುತೂಹಲವಿದೆ. 

ಏನೇ ಎದುರಾದರೂ ಇಬ್ಬರೂ ಸುಮ್ಮನೆ ಸೋಲೊಪ್ಪಿ ಕೂರುವ ಜಾಯಮಾನದವರಲ್ಲ. ಈ ಹಿನ್ನೆಲೆಯಲ್ಲಿ ಈ ವರ್ಷಾಂತ್ಯದ ಡಿಸೆಂಬರ್ ನಲ್ಲಿ ರಾಜ್ಯ ರಾಜಕಾರಣವು ಕೆಲವು ಅಂತ್ಯ ಮತ್ತು ಆರಂಭಗಳಿಗೆ ರಾಜ್ಯ ಸಾಕ್ಷಿಯಾಗುವುದು ಬಹುತೇಕ ನಿಚ್ಚಳವಾಗಿದೆ.

Muda case: ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಇದೇ ಮೊದಲು -ಸಿಎಂ

ಕಾಂಗ್ರೆಸ್ ಟೆನ್ನನ್‌ 

• ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ವರದಿ ಸಲ್ಲಿಕೆಗೆ ಕೋರ್ಟ್ ಡಿಸೆಂಬರ್ ಗಡುವು ನೀಡಿದೆ 
• ಇಲ್ಲಿಯವರೆಗೆ ಸಿದ್ದರಾಮಯ್ಯ ಜತೆಗೇ ಇದ್ದ ಕಾಂಗ್ರೆಸ್ಸಿಗರಲ್ಲಿ ಸಣ್ಣದಾಗಿ ಪಿಸುಪಿಸು ಶುರುವಾಗಿದೆ . ಅದರ ಭಾಗವಾಗಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿ ವಾಡ ಅವರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ 
• ಸಿದ್ದರಾಮಯ್ಯ ಜತೆಗೆ ಹೈಕಮಾಂಡ್ ಇದೆ ಎಂಬ ಕಾರಣಕ್ಕೆ ಭಿನ್ನಮತ ಬಹಿರಂಗಕ್ಕೆ ಬರಲು ವಿಳಂಬ 
• ಹೈಕಮಾಂಡ್‌ಗೆ ಅರಿವು ಮೂಡಿಸಲು ಕಾಂಗ್ರೆಸ್ಸಿ ನೊಳಗೆ ಈಗಾಗಲೇ ತಂಡವೊಂದು ಸಿದ್ಧವಾಗುತ್ತಿದೆ 
• ಡಿಸೆಂಬರ್ ಹೊತ್ತಿಗೆ ಆ ಚಟುವಟಿಕೆಗಳಿಗೆ ಮತ್ತಷ್ಟು ಶಕ್ತಿ ಬರುವ ಸಾಧ್ಯತೆ ಇದೆ ಎಂಬ ಚರ್ಚೆ ಇದೆ

ಬಿಜೆಪಿಯೊಳಗೆ ಬೇಗುದಿ 

• ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನವೆಂಬರ್ 15ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ 
• ವಿಜಯೇಂದ್ರ ಅವರ ವಿರುದ್ಧ ಆಂತರಿಕ ಬೇಗುದಿ ಡಿಸೆಂಬರ್‌ನಲ್ಲೇ ಸ್ಫೋಟಗೊಳ್ಳುವ ಸಾಧ್ಯತೆ ಇದೆ 
• ಡಿಸೆಂಬರ್‌ಗೆ ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆ ಇದೆ. ಆಗ ಬಿವೈವಿ ಬದಲಾವಣೆ ಆಗ್ತಾರೆ ಎಂಬ ಚರ್ಚೆ 
• ಬಿಎಸ್‌ವೈ ವಿರುದ್ಧ ಮತ್ತಷ್ಟು ಕೇಸ್ ದಾಖಲಿಸಿ ವಿಜಯೇಂದ್ರ ಹಿಮ್ಮೆಟ್ಟಿಸಲು ಸಿದ್ದು ತಂಡ ಸಕ್ರಿಯ 
# ಈ ಮೂಲಕ ವಿಜಯೇಂದ್ರ ಕಟ್ಟಿ ಹಾಕುವ ಜೊತೆಗೆ ಬಿಜೆಪಿಯಲ್ಲಿ ಬಿರುಕು ಮೂಡಿಸಲು ಸರ್ವ ಪ್ರಯತ್ನ 
• ಈ ನಡುವೆ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿ ಭಟನೆಯಿಂದ ಬಿವೈವಿ ದೂರ ಉಳಿದ ಬಗ್ಗೆ ಚರ್ಚೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ