
ಹುಣಸೂರು (ನ. 28) ಪ್ರಚಾರದ ವೇಳೆ ಎದೆ ನೋವಿನಿಂದ ಅಭ್ಯರ್ಥಿ ಕುಸಿದು ಬಿದ್ದಿದ್ದಾರೆ. ಹುಣಸೂರು ಪಕ್ಷೇತರ ಅಭ್ಯರ್ಥಿ ಕಲ್ಕುಣಿ ಉಮೇಶ್ಗೆ ಲಘು ಹೃದಯಾಘಾತವಾಗಿದೆ.
ಹುಣಸೂರು ಪಟ್ಟಣದಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ತಕ್ಷಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಾಣಾಪಾಯದಿಂದ ಪಕ್ಷೇತರ ಅಭ್ಯರ್ಥಿ ಪಾರಾಗಿದ್ದಾರೆ.
ಹುಣಸೂರು ಕ್ಷೇತ್ರದಲ್ಲಿಯೂ ಅಬ್ಬರ ದ ಚುನಾವಣಾ ಕಾವಿದೆ. ಬಿಜೆಪಿಯಿಂದ ಎಚ್. ವಿಶ್ವನಾಥ್ ಕಣದಲ್ಲಿದ್ದಾರೆ. ಜೆಡಿಎಸ್ ನಲ್ಲಿದ್ದ ವಿಶ್ವನಾಥ್ ಬದಲಾದ ರಾಜಕಾರಣದ ವಾತಾವರಣದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದು ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದ ಎಲ್ಲ ಶಾಸಕರನ್ನು ಅನರ್ಹ ಮಾಡಿದ್ದರು.
ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿ ಶಾಸಕರನ್ನು ಅನರ್ಹ ಎಂದು ಹೇಳಿತ್ತು. ಆದರೆ ಚುನಾವಣೆಗೆ ಸ್ಪರ್ಧೆ ಮಾಡಲು ಹಸಿರು ನಿಶಾನೆ ತೋರಿತ್ತು. ಹಾಗಾಗಿ ಹುಣಸೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.