ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ: ಬಿ.ವೈ.ವಿಜಯೇಂದ್ರ

By Kannadaprabha NewsFirst Published Mar 20, 2024, 7:03 AM IST
Highlights

ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು. 

ಶಿವಮೊಗ್ಗ (ಮಾ.20): ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಅವರು ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ಅವರನ್ನು ಜನರು ಒಪ್ಪಿಕೊಳ್ಳುತ್ತಾರೆ. ಯಾರೇ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರೂ ಅದು ರಾಷ್ಟ್ರೀಯ ನಾಯಕರ ಆಯ್ಕೆ. 

ಈ ಹಿಂದೆ ಕೂಡ ವರುಣಾದಲ್ಲಿ ನನಗೆ ಟಿಕೆಟ್‌ ಕೈ ತಪ್ಪಿತ್ತು. ಆದರೆ, ಅದು ವರಿಷ್ಠರ ತೀರ್ಮಾನ ಎಂದುಕೊಂಡು ಪಕ್ಷದ ಕೆಲಸ ಮಾಡಿದ್ದೇನೆ. ಈಶ್ವರಪ್ಪನವರು ಹಿರಿಯರಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲವು ಕೂಡ ಬಗೆಹರಿಯುತ್ತದೆ ಎಂದರು. ಜೆಡಿಎಸ್ ಮೈತ್ರಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಏನು ಚರ್ಚೆ ಆಗಿದಿಯೋ ಗೊತ್ತಿಲ್ಲ. ಸೀಟ್ ಶೇರಿಂಗ್ ವಿಚಾರವಾಗಿ ಎಲ್ಲವು ಬಗೆಹರಿಯುತ್ತದೆ. ಯಾರು ಅಭ್ಯರ್ಥಿ ಆಗಿ ತೀರ್ಮಾನ ಆಗಿದಿಯೋ ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಅದಕ್ಕೆ ಗೌರವ ಕೊಡಬೇಕಾಗುತ್ತದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ನಂತ್ರ ದಲಿತ ಸಿಎಂ ಬಗ್ಗೆ ದನಿ: ಸಚಿವ ಸತೀಶ್‌ ಜಾರಕಿಹೊಳಿ

ಮೋದಿ ಭೇಟಿಯಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ವೃದ್ಧಿ: ಕಲಬುರಗಿ ಬಹಿರಂಗ ಸಭೆ ಮೂಲಕ ಚುನಾವಣೆ ರಣಕಹಳೆ ಮೊಳಗಿಸಿದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವಿ ವಿಜಯೇಂದ್ರ ಹೇಳಿದ್ದಾರೆ. ಬಹಳ ದಿನಗಳಿಂದ ಲೋಕಸಭೆ ಚುನಾವಣೆ ದಿನಾಂಕದ ಘೋಷಣೆ ನಿರೀಕ್ಷೆಯಲ್ಲಿದ್ದೆವು. ಆಯೋಗ ದಿನಾಂಕ ಘೋಷಣೆ ಮಾಡಿದೆ. ಮೋದಿ ಕೊಡುಗೆಗಳು, ರಾಜ್ಯ ಸರಕಾರದ ವೈಫಲ್ಯ ಎರಡೂ ನಮಗೆ ಅನುಕೂಲಕರವಾಗಿದೆ. ನಮ್ಮ ಪ್ರಜ್ಞಾವಂತ ಮತದಾರರು ದೇಶದ ಹಿತದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿಸುತ್ತಾರೆ. 

ರಾಜ್ಯದ ಎಲ್ಲಾ 28 ಕ್ಷೇತ್ರಗಳು ನಮ್ಮ ಪರವಾಗಿವೆ ಎಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ವಿಜಯೇಂದ್ರ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಹುಡುಕುವುದರಲ್ಲಿ ತಲ್ಲೀನವಾಗಿದೆ, ಸಚಿವರನ್ನು ಚುನಾವಣಾ ಕಣಕ್ಕಿಳಿಸಲು ಒತ್ತಡ ಹಾಕುತ್ತಿದ್ದಾರೆ. ಆದರೆ ಅಭ್ಯರ್ಥಿಯಾಗಲು ಸಚಿವರು ಧೈರ್ಯ ಮಾಡುತ್ತಿಲ್ಲ. ಮೋದಿ ಜನಪ್ರೀಯತೆ, ಜನರ ಒಲವು ನಮಗೆ ಕಾಂಗ್ರೆಸ್‌ ಸೋಲಿಸಲು ಬ್ರಹ್ಮಾಸ್ತ್ರಗಳಾಗಿವೆ. ನಮ್ಮ ಪಕ್ಷದಲ್ಲಿನ ಗೊಂದಲಗಳೆಲ್ಲವೂ ಸದ್ಯದಲ್ಲೇ ಬಗೆಹರಿಯಲಿವೆ ಎಂದು ವಿಜಯೇಂದ್ರ ಹೇಳಿದರು.

ಚುನಾವಣೆ ಬಂದಾಗ ಆಸ್ಪತ್ರೆಯಿಂದ ಬರ್ತಾರೆ: ಸಂಸದ ಅನಂತ್‌ ಬಗ್ಗೆ ಸತೀಶ್‌ ವ್ಯಂಗ್ಯ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದರು. ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಬೇರೆ ಸಮಾಜದವರ ಕೊಲೆ ದಬ್ಬಾಳಿಕೆ ಗುಂಡಾಗಿರಿ ಕಲಬುರಗಿಯಲ್ಲಿ ಹೆಚ್ಚಾಗಿದೆ. ಈ ಜಿಲ್ಲೆಯ ಮಂತ್ರಿಗಳು ಬರೀ ಉಪದೇಶ ಕೊಡ್ತಾರೆ. ಮತದಾರರು ಈ ಬಾರಿ ಇಂಥವರಿಗೆ ತಕ್ಕ ಉತ್ತರ ನೀಡುತ್ತಾರಂದು ಹೇಳಿದರು.

click me!