ನಾನು ಬಿಜೆಪಿ, ಕಾಂಗ್ರೆಸ್‌ಗೆ ಟಾರ್ಗೆಟ್‌: ಎಚ್‌.ಡಿ.ಕುಮಾರಸ್ವಾಮಿ

Published : Feb 16, 2023, 04:00 AM IST
ನಾನು ಬಿಜೆಪಿ, ಕಾಂಗ್ರೆಸ್‌ಗೆ ಟಾರ್ಗೆಟ್‌: ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ನಾನು ಟಾರ್ಗೆಟ್‌ ಆಗಿದ್ದೇನೆ. ಪಂಚರತ್ನ ಯಾತ್ರೆಯ ವೇಗವನ್ನು ಎರಡೂ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದನ್ನು ಹೇಗೆ ಕಟ್ಟಿ ಹಾಕಬೇಕು.

ರಾಣಿಬೆನ್ನೂರು (ಫೆ.16): ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ನಾನು ಟಾರ್ಗೆಟ್‌ ಆಗಿದ್ದೇನೆ. ಪಂಚರತ್ನ ಯಾತ್ರೆಯ ವೇಗವನ್ನು ಎರಡೂ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದನ್ನು ಹೇಗೆ ಕಟ್ಟಿ ಹಾಕಬೇಕು, ಕುಮಾರಸ್ವಾಮಿಯ ಯಾತ್ರೆಗೆ ಬರುವ ಜನರ ಸಂಖ್ಯೆಯನ್ನು ಹೇಗೆ ಕಡಿಮೆ ಮಾಡಬೇಕು ಎಂದು ಎರಡೂ ಪಕ್ಷಗಳು ತಲೆ ಕೆಡಿಸಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು. ತಾಲೂಕಿನ ಹಲಗೇರಿಯಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿ, ಎರಡೂ ಪಕ್ಷಗಳ ಬಗ್ಗೆ ಜನರಿಗೆ ಭ್ರಮ ನಿರಸನ ಆಗಿದೆ. ರಾಜಕೀಯ ಬ್ರಹ್ಮಾಸ್ತ್ರವನ್ನು ನಮ್ಮ ಮೇಲೆ ಬಿಟ್ಟರೂ ಜೆಡಿಎಸ್‌ನ್ನು ತಡೆಯಲು ಆಗಲ್ಲ ಎಂದರು.

ರಮ್ಯಾ ನನ್ನ ಸಹೋದರಿ: ನಟಿ ರಮ್ಯಾ ಅಥವಾ ನಟ ಸುದೀಪ ಅವರು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮ್ಯಾ ನನ್ನ ಸಹೋದರಿ ಸಮಾನ. ನನ್ನ ವಿರುದ್ಧ ನಿಲ್ಲಬೇಕು ಅಂತ ಇದ್ದರೆ ನಿಲ್ಲಬಹುದು. ನಿಲ್ಲಬೇಡಿ ಅಂತ ಹೇಳುವುದಕ್ಕೆ ಆಗಲ್ಲ. ಅಂತಿಮವಾಗಿ ಜನತಾ ಜನಾರ್ದನನ ತೀರ್ಮಾನವೇ ಎಲ್ಲದಕ್ಕೂ ಸೂಕ್ತ ಉತ್ತರ ನೀಡುತ್ತದೆ ಎಂದರು. ರಾಜ್ಯದ ಅಭಿವೃದ್ಧಿ ಮಾಡದ ಬಿಜೆಪಿಯವರಿಗೆ ನರೇಂದ್ರ ಮೋದಿಯವರ ಮುಖ ತೋರಿಸಿ ಜನರಿಂದ ಓಟು ಕೇಳುವ ಪರಿಸ್ಥಿತಿ ಬಂದಿದೆ. 

ಕಾಂಗ್ರೆಸ್ಸಿನದು ಟಿಪ್ಪು ಸಂತಾನ: ನಳಿನ್‌ಕುಮಾರ್‌ ಕಟೀಲ್‌ ವಾಗ್ದಾಳಿ

ಬಿಜೆಪಿ ಶಾಸಕರೇ ಟೆಂಡರ್‌ ಪ್ರೋಸೆಸ್‌ನಲ್ಲಿ ಸಾವಿರಾರು ಕೋಟಿ ಅವ್ಯವಹಾರ ಆಗಿದೆ ಎಂದು ಸದನದಲ್ಲಿ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಮಾತಾಡಿದ್ದಾರೆ. ಬಿಜೆಪಿಯವರು ದಾಖಲೆ ಇಡಿ ಎನ್ನುತ್ತಿದ್ದಾರೆ. ಕಮಿಷನ್‌ ತಗೊಂಡಿರೋದಕ್ಕೆ ದಾಖಲೆ ಇಡೋಕಾಗುತ್ತಾ? ಇವರೇನು ಕಮಿಷನ್‌ನ್ನು ವೈಟ್‌ನಲ್ಲಿ ತೆಗೆದುಕೊಂಡಿದ್ದಾರಾ? ಎಲ್ಲ ಬ್ಲಾಕ್‌ ದುಡ್ಡು ತೆಗೆದುಕೊಂಡಿರುತ್ತಾರೆ. ಈ ಸಮಯದಲ್ಲಿ ದಾಖಲೆ ಎಲ್ಲಿ ಇಡಲು ಸಾಧ್ಯ? ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಬಂಧನ ಮಾಡಿದ್ರಲ್ಲ. ವಿಡಿಯೋಗಳು ಬಂದವಲ್ವಾ?. ಭ್ರಷ್ಟಾಚಾರದ ಬಗ್ಗೆ ಅದಕ್ಕಿಂತ ದಾಖಲೆ ಬೇಕಾ ಎಂದು ಪ್ರಶ್ನಿಸಿದರು.

ಕೋಲಾರದಿಂದ ಸ್ಪರ್ಧೆ, ಸಿದ್ದು ಕೈಗೊಂಡ ತಪ್ಪು ನಿರ್ಧಾರ: ಸಿ.ಎಂ.ಇಬ್ರಾಹಿಂ

ಜೆಡಿಎಸ್‌ ಮುಖಂಡ ಪ್ರಭಾಕರ ರೆಡ್ಡಿ ಮನೆ ಮೇಲೆ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿ, ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಅಲ್ಲಿನ ವಿರೋಧ ಪಕ್ಷಗಳ ಮುಖಂಡರ ಮನೆ ಮೇಲೆ ಐಟಿ ರೇಡ್‌ ಆಗುತ್ತವೆ. ಬಿಜೆಪಿ ಸರ್ಕಾರ ಬಂದ ಮೇಲೆ ಇದು ನಡೆದುಕೊಂಡು ಬಂದಿದೆ. ಬಿಜೆಪಿಯವರ ಚುನಾವಣಾ ವ್ಯವಸ್ಥೆಯೇ ಹೀಗಿದೆ. ಬಿಬಿಸಿಯವರನ್ನೇ ಬಿಟ್ಟಿಲ್ಲ. ಇನ್ನೂ ವಿರೋಧ ಪಕ್ಷದವರು ಯಾವ ಲೆಕ್ಕ ಅವರಿಗೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ದಾರೆ ಎಂದು ಆರೋಪಿಸಿದರು. ಜನಾರ್ದನ ರೆಡ್ಡಿ ಪಕ್ಷದ ಕುರಿತು ಪ್ರತಿಕ್ರಿಯಿಸಿ, ಅವರ ಪಕ್ಷದಿಂದ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಹೊಡೆತ ಬೀಳುತ್ತದೆಯೇ ಹೊರತು ಜೆಡಿಎಸ್‌ಗೆ ಸಮಸ್ಯೆಯಾಗದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ