ಬಾದಾಮಿ: ನಾನು ರಾಜಕಾರಣ ಮಾಡುವ ಶಾಸಕನಲ್ಲ, ಕಾಂಗ್ರೆಸ್‌ ಎಂಎಲ್‌ಎ ಚಿಮ್ಮನಕಟ್ಟಿ

Published : Dec 03, 2023, 01:00 AM IST
ಬಾದಾಮಿ: ನಾನು ರಾಜಕಾರಣ ಮಾಡುವ ಶಾಸಕನಲ್ಲ, ಕಾಂಗ್ರೆಸ್‌ ಎಂಎಲ್‌ಎ ಚಿಮ್ಮನಕಟ್ಟಿ

ಸಾರಾಂಶ

ಮತಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ, ಸಲಹೆ ನನಗೆ ಬೇಕು. ಆದರೆ ಅಂದು ಕಾಮಗಾರಿಗೆ ವಿರುದ್ಧವಾಗಿ ಪ್ರತಿಭಟನೆ ಮಾಡಿಸಿ ರಾಜಕಾರಣ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಮಾಡಿದವರಿಗೆ ಕೇಳಿ ಎಂದ ಶಾಸಕ ಭೀಮಸೇನ ಚಿಮ್ಮನಕಟ್ಟಿ 

ಗುಳೇದಗುಡ್ಡ(ಡಿ.04):  ನಾನು ರಾಜಕಾರಣ ಮಾಡುವ ಶಾಸಕನಲ್ಲ. ನನಗೆ ಎಲ್ಲರೂ ಬೇಕು. ನಾನು ಜಾತಿ, ಧರ್ಮ ನೋಡಿ ಕೆಲಸ ಮಾಡುವವನಲ್ಲ. ನಮ್ಮ ತಂದೆ ನನಗೆ ಅದನ್ನು ಕಲಿಸಿಲ್ಲ. ಮತಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ, ಸಲಹೆ ನನಗೆ ಬೇಕು. ಆದರೆ ಅಂದು ಕಾಮಗಾರಿಗೆ ವಿರುದ್ಧವಾಗಿ ಪ್ರತಿಭಟನೆ ಮಾಡಿಸಿ ರಾಜಕಾರಣ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಮಾಡಿದವರಿಗೆ ಕೇಳಿ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ರಸ್ತೆ ಕಾಮಗಾರಿ ಏಕೆ ತಡವಾಯ್ತು ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ನಾನು ಈ ಮೊದಲು ಈ ತೊಂದರೆ ನಿಮಾರಣೆಗೆ ತಾತ್ಕಾಲಿಕವಾಗಿ ರಸ್ತೆ ದುರಸ್ತಿಗೆ ಇಂಜನಿಯರ್ ಹಾಗೂ ಗುತ್ತಿಗೆದಾರರನ್ನು ಕಳಿಸಿದ್ದೆ. ಆದರೆ, ಕೆಲವು ಜನ ಅದನ್ನು ತಡೆದು ಕಾಮಗಾರಿ ನಿಲ್ಲಿಸಿದರು. ಇದು ಸರಿಯೇ? ಎಂದು ಮರು ಪ್ರಶ್ನಿಸಿದರು.

ಬಿಜೆಪಿಯಲ್ಲಿ ಅನ್ಯಾಯ, ಬಿಎಸ್‌ವೈಗೆ ಆದ ಸ್ಥಿತಿ ವಿಜಯೇಂದ್ರನಿಗೂ ಬರಲಿದೆ: ಸಚಿವ ತಿಮ್ಮಾಪುರ

ಕಳೆದ ಬಹಳದಿನಗಳಿಂದ ಸಾರ್ವಜನಿಕರಿಗೆ ತೊಂದರೆಯಾದ ಬಗ್ಗೆ ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ರಸ್ತೆ ದುರಸ್ತಿ ಬಗ್ಗೆ ಹೇಳಿದ್ದರು. ಆದರೆ, ಕೆಲವು ತೊಂದರೆಯಿಂದ ಕಾಮಗಾರಿ ತಡವಾಯಿತು. ಪಟ್ಟಣದ ಗುಲಾಬ್ ಚಿತ್ರಮಂದಿರದಿಂದ ಹರದೊಳ್ಳಿ ಕಮತಗಿ ನಾಕಾದವರೆಗೆ ಸುಮಾರು 900 ಮೀ. ರಸ್ತೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿದಿದ್ದೂ ಡಿ.3 ರಂದು ಕಾಮಗಾರಿಗೆ ಭೂಮಿಪೂಜೆ ಮಾಡಲಾಗುವುದೆಂದು ತಿಳಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸಂಜಯ ಬರಗುಂಡಿ, ಪುರಸಭೆ ಮಾಜಿ ಅಧ್ಯಕ್ಷ ವೈ.ಆರ್‌.ಹೆಬ್ಬಳ್ಳಿ, ಮಾಜಿ ಉಪಾಧ್ಯಕ್ಷ ಪ್ರಕಾಶ ಮುರಗೋಡ, ಪ್ರಕಾಶ ಮೇಟಿ, ಮೂಕಪ್ಪ ಹೂನೂರ ಹಾಗೂ ಕಾರ್ಯಕರ್ತರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ