ಲೋಕಸಭೆ ಚುನಾವಣೆಗೆ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದಿಷ್ಟು

Published : Jan 11, 2024, 01:48 PM ISTUpdated : Jan 11, 2024, 01:50 PM IST
ಲೋಕಸಭೆ ಚುನಾವಣೆಗೆ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದಿಷ್ಟು

ಸಾರಾಂಶ

ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹಲವು ಬಾರಿ ಹೇಳಿದ್ದೇನೆ. ಮಂಡ್ಯ ಜಿಲ್ಲೆಯಿಂದಲೂ ಸ್ಪರ್ಧಿಸುವುದಿಲ್ಲ: ಜೆಡಿಎಸ್‌ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 

ಬೆಂಗಳೂರು(ಜ.11):  ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಟಿಕೆಟ್ ಆಕಾಂಕ್ಷಿಯೂ ಅಲ್ಲ. ನನ್ನ ಹೇಳಿಕೆಯಲ್ಲಿ ಬದಲಾವಣೆ ಮಾಡುವ ವ್ಯಕ್ತಿಯಲ್ಲ ಎಂದು ಜೆಡಿಎಸ್‌ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

ಬುಧವಾರ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಪಕ್ಷದ ನಾಯಕರ ಜತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹಲವು ಬಾರಿ ಹೇಳಿದ್ದೇನೆ. ಮಂಡ್ಯ ಜಿಲ್ಲೆಯಿಂದಲೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. 

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ನಟ-ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಗುರುವಾರ ಮಂಡ್ಯ ಜಿಲ್ಲೆಯ ನಾಯಕರ ಸಭೆ ನಡೆಯಲಿದ್ದು, ಸಭೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುವುದು. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ಮುಖಂಡರು ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಯ ಬಗ್ಗೆ ತೀರ್ಮಾನಿಸುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ