
ದಾವಣಗೆರೆ(ಮೇ.14): ಇನ್ನು ಮುಂದೆ ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ಅಂತ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.
ರೇಣುಕಾಚಾರ್ಯ ನಿವಾಸದ ಮುಂದೆ ಕಳೆದ ಸಾವಿರಾರು ಬೆಂಬಲಿಗರು ರಾತ್ರಿ ಜಮಾಯಿಸಿದ್ದರು. ಬೆಂಬಲಿಗರನ್ನು ನೋಡಿ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದರು. ರೇಣುಕಾಚಾರ್ಯ ಅವರಿಗೆ ಅಭಿಮಾನಿಗಳು ಧೈರ್ಯವನ್ನು ತುಂಬಿದ್ದಾರೆ. ಹರಿಹರದ ಶಾಸಕ ಬಿ.ಪಿ. ಹರೀಶ್ ಕೂಡ ಎಂಪಿ ರೇಣುಕಾಚಾರ್ಯ ಅವರಿಗೆ ಸಮಾಧಾನ ಮಾತುಗಳನ್ನಾಡಿದ್ದಾರೆ.
ಬಿಜೆಪಿ ಸೃಷ್ಟಿಸಿದ ಸಮಸ್ಯೆ ಪರಿಹಾರಕ್ಕೆ ನಮಗೆ ಮತ: ಪ್ರಿಯಾಂಕ್ ಖರ್ಗೆ
ಅಭಿವೃದ್ಧಿ ಕೆಲಸ, ಕೋವಿಡ್ನಲ್ಲಿ ಜೀವದ ಹಂಗು ತೊರೆದರೂ ಜನರು ಸೋಲಿಸಿದರು ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ರೇಣುಕಾಚಾರ್ಯ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.