
ರಾಮನಗರ(ಫೆ.05): ಚನ್ನಪಟ್ಟಣ ಕ್ಷೇತ್ರದ ಜನರು ಕೊಟ್ಟಿರುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಿಗೆ ಮುಂದೆ ಅಧಿ ಕಾರದ ಚುಕ್ಕಾಣಿ ಹಿಡಿಯಲು ಸಹಾಯಕವಾಗಲಿದೆ. ನಾಳೆಯೇ ಡಿಕೆಶಿ ಮುಖ್ಯಮಂತ್ರಿ ಆಗುತ್ತಾರೆ ಅಂತ ನಾನು ಹೇಳಿ ದೇನಾ ಎಂದು ಶಾಸಕ ಬಾಲಕೃಷ್ಣ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾರ ಬೆಂಬಲಿಗರೂ ಅಲ್ಲ, ಹೈಕಮಾಂಡ್ ಬೆಂಬಲಿ ಗರು. ಅವರವರ ನಾಯಕರು ಸಿಎಂ ಆಗಬೇಕು ಎಂಬುದು ಕಾರ್ಯಕರ್ತರ ಆಸೆ. ಪರಮೇಶ್ವರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೋಳಿ ಅಭಿಮಾನಿಗಳಿಗೆ ತಮ್ಮ ನಾಯಕರು ಸಿಎಂ ಆಗಬೇಕು ಎಂಬ ಆಸೆ ಇದೆ. ಹಾಗೆಯೇ ಡಿಕೆಶಿ ಅಭಿಮಾನಿಗಳಿಗೂ ಅವರು ಸಿಎಂ ಆಗಬೇಕು ಅನ್ನುವ ಆಸೆ ಇದೆ. ನಮ್ಮ ನಾಯಕರು ಮುಖ್ಯಮಂತ್ರಿ ಆಗಬೇಕು ಅಂತ ಕೇಳು ವುದರಲ್ಲಿ ತಪ್ಪೇನಿದೆ? ಮಾಜಿ ಸಿಎಂ ಪುತ್ರನ ಎದುರು ಒಬ್ಬ ಯೋಗೇಶ್ವರ್ರನ್ನು ಗೆಲ್ಲಿಸಿ. ದ್ದಾರೆ. ಇದರಿಂದ ಪಕ್ಷಕ್ಕೆ, ನಮಗೆ ಗೌರವ ಸಿಕ್ಕಿದೆ ಎಂದರು.
ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣ ಬದಲಿಸುವೆ: ಡಿಕೆ ಶಿವಕುಮಾರ ಭಾಷಣ
ಮೋದಿ ಎದುರು ಎಚ್ಚಿಕೆ ಬೇಳೆ ಬೇಯಲ್ಲ:
ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ಸಿಕ್ಕಿಲ್ಲ. ಇದರ ಅರ್ಥ ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಳೆಕಾಳು ಬೇಯಲ್ಲ ಎಂಬುದು ಸ್ಪಷ್ಟ ಎಂದರು.
ಪ್ರಧಾನಿ ಮೋದಿ ಎದುರು ಕುಮಾರಸ್ವಾಮಿ ಬೇಳೆಕಾಳು ಬೇಯಲ್ಲ: ಬಾಲಕೃಷ್ಣ
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ಸಿಕ್ಕಿಲ್ಲ. ಇದರ ಅರ್ಥ ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಕೇಂದ್ರ ಸಚಿವ ಕುಮಾರಸ್ವಾಮಿಯವರ ಬೇಳೆಕಾಳು ಬೇಯಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಟೀಕಿಸಿದರು.
ನಾವು ಕುಮಾರಸ್ವಾಮಿಯವರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ವಿ. ಆದರೆ, ಇವರು ಕೂಡಾ ಬೇರೆ ಸಚಿವರಂತೆಯೇ ಆಗಿ ಹೋದರು. ಮೋದಿ ಮತ್ತು ಅಮಿತ್ ಶಾ ಬಳಿ ಇವರಿಗೆ ಗೌರವ ಇಲ್ಲ ಅಂತ ಅರ್ಥವಾಯಿತು ಎಂದು ಲೇವಡಿ ಮಾಡಿದರು.
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನುದಾನ ತರುವ ಕುರಿತು ಯಾವೊಬ್ಬ ಸಚಿವರೂ ನನ್ನ ಸಂಪರ್ಕ ಮಾಡಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬೇರೆ ಪಕ್ಷದ ಸಂಸದರು, ಸಚಿವರ ಜೊತೆ ಚರ್ಚೆ ಮಾಡಿದ್ದರಾ? ಅವರಿಗೆ ಈ ರಾಜ್ಯದ ಚಿತ್ರಣ ಗೊತ್ತಿಲ್ಲವೇ? ಅವರು ಕೇಳಲಿಲ್ಲ ಅಂದರೆ ನೀವು ತರುವುದಿಲ್ಲವೇ ಎಂದು ಪ್ರಶ್ನಿಸಿದರು.
ರೇಷ್ಮೆ ಮಾರುಕಟ್ಟೆ ರಾಮನಗರದಲ್ಲಿಯೇ ಉಳಿಯಲಿದೆ: ಶಾಸಕ ಇಕ್ಬಾಲ್ ಹುಸೇನ್
ಬಜೆಟ್ ನಲ್ಲಿ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಆಗಿಲ್ಲ. ನಾವು ಕಾಲು ಹಿಡಿದುಕೊಂಡು ನಿಮ್ಮ ಬಳಿ ದಯಾಭಿಕ್ಷೆ ಕೇಳಬೇಕಾ? ಜನ ನಿಮ್ಮನ್ನು ಕೇಳಲಿ ಎಂದು ಗೆಲ್ಲಿಸಿದ್ದಾರಾ? ನಿಮ್ಮ ಡ್ಯೂಟಿ ನೀವು ಮಾಡಿ. ಅದನ್ನು ಬಿಟ್ಟು ಅವರು ಕೇಳಲಿಲ್ಲ, ಇವರು ಕೇಳಲಿಲ್ಲ ಅಂತ ಕಥೆ ಹೇಳಬೇಡಿ ಎಂದು ಟಾಂಗ್ ನೀಡಿದರು.
ಕುಮಾರಸ್ವಾಮಿ ಕರ್ನಾಟಕದವರೇ ಅಲ್ಲವೇ. ಇಲ್ಲಿನ ಸಮಸ್ಯೆ ಅವರಿಗೆ ಗೊತ್ತಿಲ್ವಾ. ಸಮಸ್ಯೆ ಬಗೆಹರಿಸಿ ಅವರೇ ಕ್ರೆಡಿಟ್ ತೆಗೆದುಕೊಳ್ಳಲಿ. ನಮ್ಮ ಸಚಿವರು ಪ್ರಧಾನಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೊಟ್ಟಿರುವ 5300 ಕೋಟಿಯನ್ನೇ ಇವರ ಕೈಯಲ್ಲಿ ಬಿಡುಗಡೆ ಮಾಡಿಸಲು ಆಗಿಲ್ಲ. ಸುಮ್ಮನೆ ಬುರುಡೆ ಬಿಡುವುದಕ್ಕೆ ಕೇಂದ್ರಕ್ಕೆ ಹೋಗಿದ್ದಾರೆ ಅಷ್ಟೆ ಎಂದು ಬಾಲಕೃಷ್ಣ ಹರಿಹಾಯ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.